• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

3 ರಾಜ್ಯಗಳಲ್ಲಿ ಸೋಲುಂಡು ಹತಾಶರಾದ ರಾಹುಲ್ ಗಾಂಧಿ ಮತ್ತೆ ವಿದೇಶ ಪ್ರವಾಸಕ್ಕೆ ಹೋಗುತ್ತಿದ್ದಾರೆ ಗೊತ್ತಾ?

TNN Correspondent Posted On March 8, 2018
0


0
Shares
  • Share On Facebook
  • Tweet It

ದೆಹಲಿ: ಪಾಪ ರಾಹುಲ್ ಗಾಂಧಿಯವರ ನಸೀಬು ಅಷ್ಟರಮಟ್ಟಿಗೆ ಕೆಟ್ಟಿದೆಯೋ ಅಥವಾ ಅವರು ನಾಯಕರಲ್ಲ ಎಂದು ತೀರ್ಮಾನಿಸಿದ್ದಾರೋ ಗೊತ್ತಿಲ್ಲ, ದೇಶದ ಯಾವುದೇ ರಾಜ್ಯದಲ್ಲಿ ಚುನಾವಣೆ ನಡೆದರೂ ಪ್ರತ್ಯಕ್ಷವಾಗಿ ಕಾಂಗ್ರೆಸ್ಸಿಗೆ, ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ರಾಹುಲ್ ಗಾಂಧಿಯವರ ಮೇಲೆಯೇ ಆಗುತ್ತಿದೆ ಎಂಬುದರಲ್ಲಿ ಅನುಮಾನವೇ ಇಲ್ಲ.

ಗುಜರಾತಿನಲ್ಲಿ ಕಾಂಗ್ರೆಸ್ಸಿಗೆ ಸೋಲಾಯಿತು, ಹಿಮಾಚಲ ಪ್ರದೇಶದಲ್ಲಿ ಅಧಿಕಾರ ಕೈಯಿಂದ ಜಾರಿತು. ಅಷ್ಟೇ ಏಕೆ, ಮೊನ್ನೆಯಷ್ಟೇ ನಡೆದ ತ್ರಿಪುರಾ, ನಾಗಾಲೆಂಡ್, ಮೇಘಾಲಯ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ಸಿಗೆ ಅಪಾರ ಹಿನ್ನಡೆಯಾಯಿತು. ಒಟ್ಟಿನಲ್ಲಿ ಕಾಂಗ್ರೆಸ್ ಮುಕ್ತ ಭಾರತ ನಿರ್ಮಾಣದತ್ತ ದೇಶ ಮುನ್ನಡೆಯುತ್ತಿದೆ ಎಂಬುದೂ ಖಾತ್ರಿಯಾಯಿತು.

ಆದರೆ ಹೀಗೆ, ಕಾಂಗ್ರೆಸ್ ಸಾಲು ಸಾಲು ಚುನಾವಣೆಗಳಲ್ಲಿ ಸೋತು ಸುಣ್ಣವಾಗುತ್ತಿರುವುದು ರಾಹುಲ್ ಗಾಂಧಿಯವರಿಗೆ ನುಂಗಲಾರದ ತುತ್ತಾಗಿ ಪರಿಣಮಿಸುತ್ತಿದೆಯೇ? ಈ ಸೋಲಿನಿಂದ ರಾಹುಲ್ ಹತಾಶರಾಗಿದ್ದಾರೆಯೇ? ತಮ್ಮ ಮೇಲೆಯೇ ತಾವು ನಂಬಿಕೆ ಕಳೆದುಕೊಂಡಿದ್ದಾರೆಯೇ ಎಂಬ ಅನುಮಾನ ಕಾಡಲು ಶುರುವಾಗಿದೆ.

ಅದಕ್ಕೆ ಕಾರಣಗಳೂ ಇವೆ, ತ್ರಿಪುರಾ, ನಾಗಾಲೆಂಡ್ ನಲ್ಲಿ ಕಾಂಗ್ರೆಸ್ ಹೀನಾಯವಾಗಿ ಸೋತ ಬಳಿಕ ಕೂಡಲೇ ರಾಹುಲ್ ಗಾಂಧಿಯವರು ಇಟಲಿ ಪ್ರವಾಸ ಮಾಡಿದರು. ಎಲ್ಲರೂ ಸೋಲಿನಿಂದ ಹತಾಶರಾಗಿಯೇ ರಾಹುಲ್ ಗಾಂಧಿ ಇಟಲಿ ಪ್ರವಾಸ ಮಾಡಿದ್ದಾರೆ ಎಂದು ಸಹ ಟೀಕಿಸಿದರು.

ಇಂತಹ ಟೀಕೆಗೆ ಮತ್ತಷ್ಟು ಪುಷ್ಟಿ ಸಿಕ್ಕಿದ್ದು, ಇಟಲಿಯಿಂದ ಆಗಮಿಸಿರುವ ರಾಹುಲ್ ಗಾಂಧಿ ಇಂದಿನಿಂದ (ಮಾ.8) ಮಾರ್ಚ್ 12ರವರೆಗೆ ಸಿಂಗಾಪುರ ಹಾಗೂ ಮಲೇಷ್ಯಾ ಪ್ರವಾಸ ಕೈಗೊಂಡಿದ್ದು, ರಾಹುಲ್ ಸೋಲಿನಿಂದ ಕಂಗೆಟ್ಟು ಹೀಗೆ ಪ್ರವಾಸ ಕೈಗೊಳ್ಳುತ್ತಿದ್ದಾರೆ ಎಂಬ ಆರೋಪಗಳು ಕೇಳಿಬರುತ್ತಿವೆ.

0
Shares
  • Share On Facebook
  • Tweet It




Trending Now
ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
Tulunadu News April 14, 2026
ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
Tulunadu News April 7, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
  • Popular Posts

    • 1
      ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!

  • Privacy Policy
  • Contact
© Tulunadu Infomedia.

Press enter/return to begin your search