• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಎಲ್ಲರಿಗೂ ಮಾದರಿ ಈ ಚೆಲುವೆಯ ಕತೆ, ಇಂಡೋ-ಟಿಬೇಟಿಯನ್ ಗಡಿ ಪೊಲೀಸ್ ಪಡೆದ ಮೊದಲ ಮಹಿಳೆ ಈಕೆ!

TNN Correspondent Posted On March 9, 2018


  • Share On Facebook
  • Tweet It

ದೆಹಲಿ: ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ದಿನದಂದು ವೇದಿಕೆಗಳ ಮೇಲೆ ರಾರಾಜಿಸಿದ್ದು ಒಂದೇ ಮಾತು… ಮಹಿಳೆ ಇನ್ನೂ ಅಬಲೆಯಾಗಿಯೇ ಉಳಿದಿದ್ದಾಳೆ, ಆಕೆ ನಾಲ್ಕು ಗೋಡೆಯ ಮಧ್ಯದಿಂದ ಹೊರಬರಬೇಕು, ಸಾಮಾಜಿಕ ಸ್ಥಾನಮಾನ, ಸಮಾನತೆ ನೀಡಬೇಕು… ಹೀಗೆ ತರಹೇವಾರಿ ನಕಾರಾತ್ಮಕ ಮಾತುಗಳೇ ಕೇಳಿಬಂದಿವೆ, ಮುಂದೆಯೂ ಬರುತ್ತವೆ.

ಆದರೆ ಇಂತಹ ನಕಾರಾತ್ಮಕ ಹಾಗೂ ಸತ್ಯಕ್ಕೆ ಹತ್ತಿರವಿರುವ ಮಾತು ಕೇಳಿಬರುತ್ತಿರುವ ಬೆನ್ನಲ್ಲೇ, ಮದುವೆ, ಜೀವನದ ಮಧುರ ಕ್ಷಣ ಅನುಭವಿಸುವ ವಯಸ್ಸಿನಲ್ಲಿ, ಅಂದರೆ 25ನೇ ವಯಸ್ಸಿನಲ್ಲೇ ಯುವತಿಯೊಬ್ಬಳು ಎಲ್ಲ ಮಹಿಳೆಯರಿಗೂ ಸ್ಫೂರ್ತಿಯಾಗುವ ಸಾಧನೆ ಮಾಡಿದ್ದಾಳೆ.

ಹೌದು, ಬಿಹಾರದ ಸಮಸ್ತಿಪುರದ ಪ್ರಕೃತಿ ದೇಶದ ಇತಿಹಾಸದಲ್ಲೇ ಮೊದಲ ಬಾರಿಗೆ ಇಂಡೋ-ಟಿಬೇಟಿಯನ್ ಗಡಿ ಪೊಲೀಸ್ ಪಡೆಯ ಪ್ರಥಮ ಮಹಿಳಾ ಅಧಿಕಾರಿಯಾಗಿ ಆಯ್ಕೆಯಾಗಿದ್ದು, ಮೆಚ್ಚುಗೆಯ ಮಾತುಗಳು ವ್ಯಕ್ತವಾಗಿವೆ.

ಕೇಂದ್ರದ ನರೇಂದ್ರ ಮೋದಿ ನೇತೃತ್ವದ ಸರ್ಕಾರ 2016ರಲ್ಲಿ ಭದ್ರತಾ ಪಡೆಯಲ್ಲಿ ಮಹಿಳೆಯರಿಗೆ ಅವಕಾಶ ನೀಡಿದ್ದು, ಇದೇ ವರ್ಷ ಪ್ರಕೃತಿ ಯುಪಿಎಸ್ ಸಿ ನಡೆಸಿದ ಕೇಂದ್ರ ಶಸ್ತ್ರಾಸ್ತ್ರ ಪೊಲೀಸ್ ದಳ ಪರೀಕ್ಷೆ ಬರೆದಿದ್ದರು. ಅಷ್ಟೇ ಅಲ್ಲ ಮೊದಲ ಪ್ರಯತ್ನದಲ್ಲಿಯೇ ಉತ್ತೀರ್ಣರಾದರು. ಗೊತ್ತಿರಲಿ, ಪರೀಕ್ಷೆಯಲ್ಲಿ ತೇರ್ಗಡೆಯಾದ ಏಕೈಕ ಮಹಿಳೆ ಪ್ರಕೃತಿಯೇ!

ಈಗ ನೇಮಕ ಪ್ರಕ್ರಿಯೆ ಎಲ್ಲ ಮುಗಿದಿದ್ದು, ಐಟಿಬಿಪಿ ಪಡೆಯ ಕಂಬಾಟ್ ಅಧಿಕಾರಿಯಾಗಿ ಪ್ರಕೃತಿ ಆಯ್ಕೆಯಾಗಿದ್ದಾಳೆ. ಶೀಘ್ರದಲ್ಲೇ ಡೆಹ್ರಾಡೂನ್ ನಲ್ಲಿರುವ ಅಧಿಕಾರಿಗಳ ತರಬೇತಿ ಕೇಂದ್ರಕ್ಕೆ ಸೇರಲಿದ್ದಾರೆ. ತರಬೇತಿ ಬಳಿಕ ಸಹಾಯಕ ಕಮಾಂಡಂಟ್ ಆಗಿ ಕಾರ್ಯ ನಿರ್ವಹಿಸಲಿದ್ದಾರೆ.

ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯಂದು ಮಹಿಳೆ ಇನ್ನೂ ಅಬಲೆ ಎಂದು ಯೋಚಿಸುವ ಬದಲು ಪ್ರಕೃತಿಯಂತಹ ದಿಟ್ಟೆಯನ್ನು ಮಾದರಿಯಾಗಿಟ್ಟುಕೊಂಡರೆ ನಮ್ಮ ಯುವತಿಯರು ಮಹತ್ ಸಾಧನೆ ಮಾಡಬಲ್ಲರು. ಅದಕ್ಕೆಪ್ರಕೃತಿಯೇ ಸಾಕ್ಷಿ ಹಾಗೂ ನಿದರ್ಶನ.

  • Share On Facebook
  • Tweet It


- Advertisement -


Trending Now
ಚಕ್ರತೀರ್ಥ ಹೆಗಲ ಮೇಲೆ ಕೋವಿ ಇಟ್ಟು ಹೊಡೆಯಲು ಹೊರಟಿದ್ದು ಯಾರನ್ನಾ?
Tulunadu News June 25, 2022
ರೋಹಿತ್ ಸನ್ಮಾನದಿಂದ ಎಡಚರರು ವಿಲವಿಲ!!
Tulunadu News June 24, 2022
Leave A Reply

  • Recent Posts

    • ಚಕ್ರತೀರ್ಥ ಹೆಗಲ ಮೇಲೆ ಕೋವಿ ಇಟ್ಟು ಹೊಡೆಯಲು ಹೊರಟಿದ್ದು ಯಾರನ್ನಾ?
    • ರೋಹಿತ್ ಸನ್ಮಾನದಿಂದ ಎಡಚರರು ವಿಲವಿಲ!!
    • ರಾಜಕೀಯ ಆತ್ಮಹತ್ಯೆ ಎಂದರೆ ಏನು ಉದ್ಧವ್!
    • ಮಂಗಳೂರಿನಲ್ಲಿ ಐಲ್ಯಾಂಡ್ ಪ್ಲಾನ್ ಹಾಕಿದ ಬುದ್ಧಿವಂತ ಯಾರು?
    • ಉತ್ತರ ಭಾರತದಲ್ಲಿ ಸೇನೆಗೆ ಸೇರಿಸುವುದು ಉದ್ಯಮ!!
    • ನೂಪುರ್ ಹೇಳಿಕೆಗೆ ಮುಸ್ಲಿಮರು ದೇಶದಲ್ಲಿ ಬೆಂಕಿ ಇಟ್ಟರು, ಶೈಲಜಾ ಹೇಳಿಕೆಗೆ??
    • ಪತ್ನಿ ಸದಸ್ಯರಾದರೆ ಗಂಡ ಅಧಿಕಾರ ಚಲಾಯಿಸುವುದು ಬಂದ್!!
    • ಭಾರತದಲ್ಲಿ ಬಾಲ ಬಿಚ್ಚಿದ ಹಾಗೆ ಕುವೈಟ್ ನಲ್ಲಿ ನಡೆಯಲ್ಲ!!
    • ಪ್ರೀತಿ ಗೆಹ್ಲೋತ್ ಮಾಡಿದ ಕೆಲಸ ಅಕ್ಷಯ್ ಶ್ರೀಧರ್ ಅವರಿಗೆ ಆಗುತ್ತಾ?
    • ಸೋನಿಯಾ ಮೇಲೆ ಇರುವಷ್ಟು ಕನಿಕರ ರಾಹುಲ್ ಮೇಲೆ ಇಲ್ಲ!
  • Popular Posts

    • 1
      ಚಕ್ರತೀರ್ಥ ಹೆಗಲ ಮೇಲೆ ಕೋವಿ ಇಟ್ಟು ಹೊಡೆಯಲು ಹೊರಟಿದ್ದು ಯಾರನ್ನಾ?
    • 2
      ರೋಹಿತ್ ಸನ್ಮಾನದಿಂದ ಎಡಚರರು ವಿಲವಿಲ!!
    • 3
      ರಾಜಕೀಯ ಆತ್ಮಹತ್ಯೆ ಎಂದರೆ ಏನು ಉದ್ಧವ್!
    • 4
      ಮಂಗಳೂರಿನಲ್ಲಿ ಐಲ್ಯಾಂಡ್ ಪ್ಲಾನ್ ಹಾಕಿದ ಬುದ್ಧಿವಂತ ಯಾರು?
    • 5
      ಉತ್ತರ ಭಾರತದಲ್ಲಿ ಸೇನೆಗೆ ಸೇರಿಸುವುದು ಉದ್ಯಮ!!


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search