• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಎಲ್ಲರಿಗೂ ಮಾದರಿ ಈ ಚೆಲುವೆಯ ಕತೆ, ಇಂಡೋ-ಟಿಬೇಟಿಯನ್ ಗಡಿ ಪೊಲೀಸ್ ಪಡೆದ ಮೊದಲ ಮಹಿಳೆ ಈಕೆ!

TNN Correspondent Posted On March 9, 2018


  • Share On Facebook
  • Tweet It

ದೆಹಲಿ: ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ದಿನದಂದು ವೇದಿಕೆಗಳ ಮೇಲೆ ರಾರಾಜಿಸಿದ್ದು ಒಂದೇ ಮಾತು… ಮಹಿಳೆ ಇನ್ನೂ ಅಬಲೆಯಾಗಿಯೇ ಉಳಿದಿದ್ದಾಳೆ, ಆಕೆ ನಾಲ್ಕು ಗೋಡೆಯ ಮಧ್ಯದಿಂದ ಹೊರಬರಬೇಕು, ಸಾಮಾಜಿಕ ಸ್ಥಾನಮಾನ, ಸಮಾನತೆ ನೀಡಬೇಕು… ಹೀಗೆ ತರಹೇವಾರಿ ನಕಾರಾತ್ಮಕ ಮಾತುಗಳೇ ಕೇಳಿಬಂದಿವೆ, ಮುಂದೆಯೂ ಬರುತ್ತವೆ.

ಆದರೆ ಇಂತಹ ನಕಾರಾತ್ಮಕ ಹಾಗೂ ಸತ್ಯಕ್ಕೆ ಹತ್ತಿರವಿರುವ ಮಾತು ಕೇಳಿಬರುತ್ತಿರುವ ಬೆನ್ನಲ್ಲೇ, ಮದುವೆ, ಜೀವನದ ಮಧುರ ಕ್ಷಣ ಅನುಭವಿಸುವ ವಯಸ್ಸಿನಲ್ಲಿ, ಅಂದರೆ 25ನೇ ವಯಸ್ಸಿನಲ್ಲೇ ಯುವತಿಯೊಬ್ಬಳು ಎಲ್ಲ ಮಹಿಳೆಯರಿಗೂ ಸ್ಫೂರ್ತಿಯಾಗುವ ಸಾಧನೆ ಮಾಡಿದ್ದಾಳೆ.

ಹೌದು, ಬಿಹಾರದ ಸಮಸ್ತಿಪುರದ ಪ್ರಕೃತಿ ದೇಶದ ಇತಿಹಾಸದಲ್ಲೇ ಮೊದಲ ಬಾರಿಗೆ ಇಂಡೋ-ಟಿಬೇಟಿಯನ್ ಗಡಿ ಪೊಲೀಸ್ ಪಡೆಯ ಪ್ರಥಮ ಮಹಿಳಾ ಅಧಿಕಾರಿಯಾಗಿ ಆಯ್ಕೆಯಾಗಿದ್ದು, ಮೆಚ್ಚುಗೆಯ ಮಾತುಗಳು ವ್ಯಕ್ತವಾಗಿವೆ.

ಕೇಂದ್ರದ ನರೇಂದ್ರ ಮೋದಿ ನೇತೃತ್ವದ ಸರ್ಕಾರ 2016ರಲ್ಲಿ ಭದ್ರತಾ ಪಡೆಯಲ್ಲಿ ಮಹಿಳೆಯರಿಗೆ ಅವಕಾಶ ನೀಡಿದ್ದು, ಇದೇ ವರ್ಷ ಪ್ರಕೃತಿ ಯುಪಿಎಸ್ ಸಿ ನಡೆಸಿದ ಕೇಂದ್ರ ಶಸ್ತ್ರಾಸ್ತ್ರ ಪೊಲೀಸ್ ದಳ ಪರೀಕ್ಷೆ ಬರೆದಿದ್ದರು. ಅಷ್ಟೇ ಅಲ್ಲ ಮೊದಲ ಪ್ರಯತ್ನದಲ್ಲಿಯೇ ಉತ್ತೀರ್ಣರಾದರು. ಗೊತ್ತಿರಲಿ, ಪರೀಕ್ಷೆಯಲ್ಲಿ ತೇರ್ಗಡೆಯಾದ ಏಕೈಕ ಮಹಿಳೆ ಪ್ರಕೃತಿಯೇ!

ಈಗ ನೇಮಕ ಪ್ರಕ್ರಿಯೆ ಎಲ್ಲ ಮುಗಿದಿದ್ದು, ಐಟಿಬಿಪಿ ಪಡೆಯ ಕಂಬಾಟ್ ಅಧಿಕಾರಿಯಾಗಿ ಪ್ರಕೃತಿ ಆಯ್ಕೆಯಾಗಿದ್ದಾಳೆ. ಶೀಘ್ರದಲ್ಲೇ ಡೆಹ್ರಾಡೂನ್ ನಲ್ಲಿರುವ ಅಧಿಕಾರಿಗಳ ತರಬೇತಿ ಕೇಂದ್ರಕ್ಕೆ ಸೇರಲಿದ್ದಾರೆ. ತರಬೇತಿ ಬಳಿಕ ಸಹಾಯಕ ಕಮಾಂಡಂಟ್ ಆಗಿ ಕಾರ್ಯ ನಿರ್ವಹಿಸಲಿದ್ದಾರೆ.

ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯಂದು ಮಹಿಳೆ ಇನ್ನೂ ಅಬಲೆ ಎಂದು ಯೋಚಿಸುವ ಬದಲು ಪ್ರಕೃತಿಯಂತಹ ದಿಟ್ಟೆಯನ್ನು ಮಾದರಿಯಾಗಿಟ್ಟುಕೊಂಡರೆ ನಮ್ಮ ಯುವತಿಯರು ಮಹತ್ ಸಾಧನೆ ಮಾಡಬಲ್ಲರು. ಅದಕ್ಕೆಪ್ರಕೃತಿಯೇ ಸಾಕ್ಷಿ ಹಾಗೂ ನಿದರ್ಶನ.

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • 4
      ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • 5
      ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search