• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ದೇಶದ ಹಿಂದೂಗಳೆಲ್ಲ ಇಲ್ಲಿಯ ಮೂಲನಿವಾಸಿಗಳೇ ಎಂದು ಸಾಬೀತುಪಡಿಸಲು ಮೋದಿ ಸರ್ಕಾರ ಏನು ಮಾಡಿದೆ ಗೊತ್ತಾ?

TNN Correspondent Posted On March 9, 2018
0


0
Shares
  • Share On Facebook
  • Tweet It

ದೆಹಲಿ: ಬೌದ್ಧ ಧರ್ಮ ಸ್ಥಾಪನೆಯಾಗುವ ಮೊದಲು ಗೌತಮ ಬುದ್ಧ ಹಿಂದೂವಾಗಿದ್ದ, ಜೈನ ಧರ್ಮ ಸ್ಥಾಪನೆಗೂ ಮುನ್ನ ತೀರ್ಥಂಕರ ಹಿಂದೂ, ಸಿಂಧೂ ನಾಗರಿಕತೆ ಹಿಂದೂ ಧರ್ಮದ ಮೂಲ ಬೇರು, ಸಿಂಧೂ ನಾಗರಿಕೆಯಿಂದಲೇ ಭಾರತಕ್ಕೆ ಹಿಂದೂಸ್ಥಾನ ಎಂಬ ಹೆಸರು ಬಂತು ಎಂಬುದು ಇತಿಹಾಸದಿಂದ ಗೊತ್ತಾಗುತ್ತದೆಯಾದರೂ, ಕೆಲವು ಕುತ್ಸಿತ ಮನಸ್ಸುಗಳು ಮಾತ್ರ ದೇಶದಲ್ಲಿರುವ ಹಿಂದೂಗಳು ಇಲ್ಲಿಯ ಮೂಲ ನಿವಾಸಿಗಳು ಅಲ್ಲ, ಬೇರೆ ಕಡೆಯಿಂದ ವಲಸೆ ಬಂದವರು ಎಂದು ಬೊಬ್ಬೆ ಹಾಕುತ್ತವೆ. ಹಿಂದೂಸ್ಥಾನದಲ್ಲೇ ಹಿಂದೂ ಎಂಬ ಪದ ಇದ್ದರೂ, ತಮ್ಮ ಬಾಯಿ ತೆವಲು ತೀರಿಸಿಕೊಳ್ಳಲು ಕಪಟತನ ತೋರುತ್ತವೆ.

ಹಾಗಾಗಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ದೇಶದ ಹಿಂದೂಗಳೆಲ್ಲ ಇಲ್ಲಿಯ ಮೂಲ ನಿವಾಸಿಗಳೇ ಎಂಬುದನ್ನು ಸಾಬೀತುಪಡಿಸಲು ಮಾಸ್ಟರ್ ಪ್ಲಾನ್ ಮಾಡಿದ್ದು, ಭಾರತದ ಹಿಂದೂಗಳು ಹೆಮ್ಮೆಯಿಂದ ನಾವು ಹಿಂದೂಸ್ಥಾನಿಗಳೇ, ನಮ್ಮ ನೆಲ ಇದೇ ಎಂದು ಹೇಳಿಕೊಳ್ಳುವ ಕಾಲ ದೂರವಿಲ್ಲ ಎಂದೇ ಹೇಳಲಾಗುತ್ತಿದೆ.

ನಿಜ, ಭಾರತದ ಹಿಂದೂಗಳು ಇಲ್ಲಿಯ ಮೂಲ ನಿವಾಸಿಗಳೇ ಎಂದು ಸಾಕ್ಷ್ಯಾಧಾರದ ಸಮೇತ ಸಾಬೀತುಪಡಿಸಲು ಕೇಂದ್ರ ಸರ್ಕಾರ 2016ರಲ್ಲೇ ತಜ್ಞರ ಸಮಿತಿ ರಚಿಸಿದೆ ಎಂದು ರಾಯಿಟರ್ಸ್ ಸುದ್ದಿ ಸಂಸ್ಥೆ ವರದಿ ಮಾಡಿದೆ.

ಸರ್ಕಾರ ರಚಿಸಿದ ತಜ್ಞರ ಸಮಿತಿ ಸದಸ್ಯರೊಂದಿಗೆ ರಾಯಿಟರ್ಸ್ ವರದಿಗಾರರು ಸಂದರ್ಶನ ನಡೆಸಿದ್ದು, ದೇಶದ ಹಿಂದೂಗಳೆಲ್ಲ ಮೂಲ ನಿವಾಸಿಗಳೇ ಎಂಬುದು ಎಲ್ಲರಿಗೂ ತಿಳಿಯಲಿ ಹಾಗೂ ಇತಿಹಾಸದಲ್ಲಿ ಈ ಅಂಶ ದಾಖಲಾಗಲಿ ಎಂಬ ದಿಸೆಯಲ್ಲಿ ಸರ್ಕಾರ ಮುಂದಡಿಯಿಟ್ಟಿರುವುದಾಗಿ ತಜ್ಞರ ಸಮಿತಿಯ ಸದಸ್ಯರು ಮಾಹಿತಿ ನೀಡಿದ್ದಾರೆ ಎಂದು ತಿಳಿದುಬಂದಿದೆ.

ಆದಾಗ್ಯೂ, ಈ ಕುರಿತು ಸಮಿತಿ ಅಧ್ಯಕ್ಷ ಕೆ.ಎನ್.ದೀಕ್ಷಿತ್ ರಾಯಿಟರ್ಸ್ ಸಂಸ್ಥೆಯೊಂದಿಗೆ ಮಾತನಾಡಿದ್ದು, ದೇಶದ ಇತಿಹಾಸದ ಪುಟಗಳಲ್ಲಿ ಹಿಂದೂಗಳೆಲ್ಲ ಭಾರತದ ಮೂಲ ನಿವಾಸಿಗಳೇ ಎಂಬುದನ್ನು ಸಾಬೀತುಪಡಿಸುವ ದಿಸೆಯಲ್ಲಿ ಸಂಶೋಧನೆ ನಡೆಸುವಂತೆ ಕೇಂದ್ರ ಸರ್ಕಾರ ಸೂಚಿಸಿದ್ದು, ಈ ಕುರಿತು ವರದಿ ನೀಡುವಂತೆ ನಿರ್ದೇಶಿಸಿದೆ. ಈ ದಿಸೆಯಲ್ಲಿ ನಮ್ಮ ತಂಡ ಕಾರ್ಯೋನ್ಮುಖವಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಒಟ್ಟಿನಲ್ಲಿ ಕೇಂದ್ರ ಸರ್ಕಾರದ ಈ ಮಹೋನ್ನತ ನಡೆಯಿಂದ ಭಾರತೀಯ ಹಿಂದೂಗಳಿಗೆಲ್ಲ ಸಿಹಿ ಸುದ್ದಿ ಕಾದಿದೆ ಎಂದೇ ಹೇಳಲಾಗುತ್ತಿದ್ದು, ಸತ್ಯಾಂಶ ಬಯಲಾದರೆ ಅದೆಷ್ಟು ಜನರ ಎದೆ ಧಸಕ್ ಎನ್ನುವುದೋ ಎಂಬ ಕುತೂಹಲ ಸಹ ಮೂಡಿದೆ.

0
Shares
  • Share On Facebook
  • Tweet It




Trending Now
ಇಷ್ಟು ಚಿಕ್ಕ ವಯಸ್ಸಿಗೆ ಭಾರತೀಯ ಜನತಾ ಪಾರ್ಟಿಯ ರಾಷ್ಟ್ರೀಯ ಕಾರ್ಯಾಧ್ಯಕ್ಷ ಪಟ್ಟ!
Tulunadu News December 15, 2025
ಅನ್ಯಧರ್ಮ ಅವಹೇಳನ: ವಿಮಾನ ನಿಲ್ದಾಣದಲ್ಲೇ ಆರೋಪಿ ಸೆರೆ
Tulunadu News December 15, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಇಷ್ಟು ಚಿಕ್ಕ ವಯಸ್ಸಿಗೆ ಭಾರತೀಯ ಜನತಾ ಪಾರ್ಟಿಯ ರಾಷ್ಟ್ರೀಯ ಕಾರ್ಯಾಧ್ಯಕ್ಷ ಪಟ್ಟ!
    • ಅನ್ಯಧರ್ಮ ಅವಹೇಳನ: ವಿಮಾನ ನಿಲ್ದಾಣದಲ್ಲೇ ಆರೋಪಿ ಸೆರೆ
    • ಸರಕಾರದಿಂದಲೇ ಟಿಪ್ಪು ಜಯಂತಿ ಆಚರಿಸಬೇಕೆಂಬ ಚರ್ಚೆಗೆ ವಿಜಯಾನಂದ ಕಾಶಪ್ಪನವರ್ ನಾಂದಿ!
    • ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
    • ಕುಡುಕರ ಲಿವರ್ ಚಿಕಿತ್ಸೆಗೆ ಸರಕಾರ ಹಣ ನೀಡಲಿ ಎಂದ ಶಾಸಕರು!
    • ಸ್ಮೃತಿ ಹೊಸ ಇನ್ಸಿಂಗ್ಸ್ ಆರಂಭ!
    • ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
    • ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
  • Popular Posts

    • 1
      ಇಷ್ಟು ಚಿಕ್ಕ ವಯಸ್ಸಿಗೆ ಭಾರತೀಯ ಜನತಾ ಪಾರ್ಟಿಯ ರಾಷ್ಟ್ರೀಯ ಕಾರ್ಯಾಧ್ಯಕ್ಷ ಪಟ್ಟ!
    • 2
      ಅನ್ಯಧರ್ಮ ಅವಹೇಳನ: ವಿಮಾನ ನಿಲ್ದಾಣದಲ್ಲೇ ಆರೋಪಿ ಸೆರೆ
    • 3
      ಸರಕಾರದಿಂದಲೇ ಟಿಪ್ಪು ಜಯಂತಿ ಆಚರಿಸಬೇಕೆಂಬ ಚರ್ಚೆಗೆ ವಿಜಯಾನಂದ ಕಾಶಪ್ಪನವರ್ ನಾಂದಿ!
    • 4
      ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
    • 5
      ಕುಡುಕರ ಲಿವರ್ ಚಿಕಿತ್ಸೆಗೆ ಸರಕಾರ ಹಣ ನೀಡಲಿ ಎಂದ ಶಾಸಕರು!

  • Privacy Policy
  • Contact
© Tulunadu Infomedia.

Press enter/return to begin your search