• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕೇಂದ್ರಾಡಳಿತದಲ್ಲಿರುವ ‘ದಿಯು’ ಶೇ.100 ಸೋಲಾರ್ ಶಕ್ತಿ ಹೊಂದಿದ ದೇಶದ ಏಕೈಕ ಪ್ರದೇಶ

TNN Correspondent Posted On March 9, 2018
0


0
Shares
  • Share On Facebook
  • Tweet It

ಸುರತ್: ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರದ ದೂರದೃಷ್ಟಿಯ ಯೋಜನೆಗಳು ಇದೀಗ ಒಂದೋಂದೆ ಸಾಕಾರವಾಗುತ್ತಿವೆ. ಕೇಂದ್ರಾಡಳಿತ ಪ್ರದೇಶವಾಗಿರುವ ದಿಯು ಇದೀಗ ಶೇ.100 ರಷ್ಟು ಸೋಲಾರ್ ಶಕ್ತಿಯ ಇಂದನವನ್ನು ಬಳಸಿಕೊಳ್ಳುವ ಸಾಮರ್ಥ್ಯವನ್ನು ಹೊಂದಿರುವ ಪ್ರದೇಶವಾಗಿ ಹೊರ ಹೊಮ್ಮಿದೆ.

ದೇಶದ ಪ್ರಮುಖ ಪ್ರವಾಸೋಧ್ಯಮ ತಾಣಗಳಲ್ಲಿ ಒಂದಾಗಿರುವ ದಿಯು ಪ್ರದೇಶದಲ್ಲಿ ನವೀಕರಿಸಬಹುದಾದ ಇಂಧನ ಬಳಸುವ ಸಾಮರ್ಥವ್ಯನ್ನು ಹೆಚ್ಚಿಸಲಾಗಿದೆ. ಕಳೆದ ಮೂರು ವರ್ಷದಿಂದ ದಿಯು ಪ್ರದೇಶದಲ್ಲಿ ಅತಿ ಹೆಚ್ಚಿನ ಸೋಲಾರ್ ಪ್ಲಾಂಟ್ ಗಳನ್ನು ಸ್ಥಾಪಿಸಿದ್ದು, ನವೀಕರಿಸಬಹುದಾದ ಇಂಧನವನ್ನು ಸಮಪರ್ಕವಾಗಿ ಬಳಸಿಕೊಳ್ಳುವಲ್ಲಿ ಭಾರಿ ಪ್ರಗತಿಯನ್ನು ಕಂಡಿದೆ.

ಕೇವಲ 42 ಚದರ ಕಿಲೋ ಮಿಟರ್ ಇರುವ ದಿಯು ಪ್ರದೇಶವಿದ್ದರೂ, ಇರುವ ಪ್ರದೇಶದಲ್ಲೇ ಸುಮಾರು 50 ಎಕರೆ ಪ್ರದೇಶದಲ್ಲಿ ಸೋಲಾರ್ ಪ್ಲಾಂಟ್ ಗಳನ್ನು ಸ್ಥಾಪಿಸಿ, ವಿದ್ಯುತ್ ಉತ್ಪಾದಿಸಲಾಗುತ್ತಿದೆ. ಪ್ರಸ್ತುತ ಸ್ಥಾಪಿಸಲಾಗಿರುವ ಸೋಲಾರ್ ಪ್ಲಾಂಟ್ ಗಳಿಂದ 13 ಮೆಗಾ ವ್ಯಾಟ್ ವಿದ್ಯುತ್ ಉತ್ಪಾದಿಸಲಾಗುತ್ತಿದೆ.

ದಿಯು ಪ್ರದೇಶದಲ್ಲಿ ಮುಂಚೆ ವಿದ್ಯುತ್ ಗಾಗಿ ಗುಜರಾತ್ ಸರ್ಕಾರದ ಗ್ರಿಡ್ ನಿಂದ ವಿದ್ಯುತ್ ಪಡೆಯುತ್ತಿತ್ತು. ಇದೀಗ ಸ್ವಾವಲಂಭಿಯಾಗಿದ್ದು, ಶೇ.100 ರಷ್ಟು ವಿದ್ಯುತ್ ಸೋಲಾರ್ ಮೂಲಕ ಉತ್ಪಾದಿಸುತ್ತಿದೆ. ಗುಜರಾತ್ ನಿಂದ ವಿದ್ಯುತ್ ಪಡೆಯುವಾಗ ದಿಯು ಪ್ರದೇಶ ತೀವ್ರ ಸಮಸ್ಯೆಯನ್ನು ಎದುರಿಸಿತು. ಅಲ್ಲದೇ ಹೆಚ್ಚಿನ ಹಣವನ್ನು ಖರ್ಚು ಮಾಡಿತ್ತು. ಇದೀಗ ಆ ಸಮಸ್ಯೆ ದೂರವಾಗಿದೆ. ಮೂರು ವರ್ಷದಲ್ಲಿ ದಿಯು ಪ್ರದೇಶದ ವಿದ್ಯುತ್ ಸಮಸ್ಯೆಗೆ ಮುಕ್ತಿ ಹಾಡಲಾಗಿದೆ.

56,000 ಜನಸಂಖ್ಯೆಯಿರುವ ದಿಯು ಪ್ರದೇಶದಲ್ಲಿ ವಿದ್ಯುತ್, ನೀರಿಗಾಗಿ ಗುಜರಾತ್ ಸರ್ಕಾರವನ್ನೇ ಅವಲಂಭಿಸಿದೆ.. ಗುಜರಾತ್ ಸರ್ಕಾರದ ಮೇಲಿನ ಅವಲಂಭನೆ ಕಡಿಮೆ ಮಾಡಲು ಸೋಲಾರ್ ಯೋಜನೆ ಜಾರಿಗೆ ತರಲಾಗಿದೆ ಎಂದು  ದಿಯು ಮತ್ತು ದಮನ್ ಪ್ರದೇಶದ ವಿದ್ಯುತ್ ಇಲಾಖೆ ಕಾರ್ಯ ನಿರ್ವಾಹಕ ಎಂಜಿನಿಯರ್ ಮಿಲಿಂದ್ ತಿಳಿಸಿದ್ದಾರೆ. ದಿಯು ಸ್ಥಳೀಯರಿಗೆ ಕೇವಲ 7 ಮೇಗಾ ವ್ಯಾಟ್ ವಿದ್ಯುತ್ ಬಳಕೆಯಾಗುತ್ತಿದ್ದು, ಉಳಿದ ವಿದ್ಯುತ್ ಮಾರಾಟ ಮಾಡುವ ಮೂಲಕ ಆರ್ಥಿಕ ಬಲವನ್ನು ಹೊಂದಲಾಗುತ್ತಿದೆ.

0
Shares
  • Share On Facebook
  • Tweet It




Trending Now
ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
Tulunadu News December 22, 2025
ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!
Tulunadu News December 22, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!
    • ಭಕ್ತಿಗೀತೆ ಹಾಡುತ್ತಿದ್ದ ಗಾಯಕಿಯ ಮೇಲೆ ದರ್ಪ! ಜಾತ್ಯಾತೀತ ಗೀತೆ ಹಾಡಲು ಒತ್ತಾಯ!
    • ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 10 ಲಕ್ಷ ನೀಡಿ - ಸರಕಾರಕ್ಕೆ ಶಾಸಕ ಆಗ್ರಹ!
    • ವಿಡಿಯೋ ಕಾಲ್ ನಲ್ಲಿ ನಿಶ್ಚಿತಾರ್ಥ-ಎಲ್ ಇಡಿ ಸ್ಕ್ರೀನ್ ಗೆ ಆರತಿ!
    • ಅಜಾನ್ ಚರ್ಚೆಯ ಸಂದರ್ಭದಲ್ಲಿ ದೀಪಾವಳಿ ಪಟಾಕಿ ವಿಷಯ ಎತ್ತಿದ ಸಚಿವ!
    • ಇಷ್ಟು ಚಿಕ್ಕ ವಯಸ್ಸಿಗೆ ಭಾರತೀಯ ಜನತಾ ಪಾರ್ಟಿಯ ರಾಷ್ಟ್ರೀಯ ಕಾರ್ಯಾಧ್ಯಕ್ಷ ಪಟ್ಟ!
    • ಅನ್ಯಧರ್ಮ ಅವಹೇಳನ: ವಿಮಾನ ನಿಲ್ದಾಣದಲ್ಲೇ ಆರೋಪಿ ಸೆರೆ
    • ಸರಕಾರದಿಂದಲೇ ಟಿಪ್ಪು ಜಯಂತಿ ಆಚರಿಸಬೇಕೆಂಬ ಚರ್ಚೆಗೆ ವಿಜಯಾನಂದ ಕಾಶಪ್ಪನವರ್ ನಾಂದಿ!
    • ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
  • Popular Posts

    • 1
      ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • 2
      ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!
    • 3
      ಭಕ್ತಿಗೀತೆ ಹಾಡುತ್ತಿದ್ದ ಗಾಯಕಿಯ ಮೇಲೆ ದರ್ಪ! ಜಾತ್ಯಾತೀತ ಗೀತೆ ಹಾಡಲು ಒತ್ತಾಯ!
    • 4
      ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 10 ಲಕ್ಷ ನೀಡಿ - ಸರಕಾರಕ್ಕೆ ಶಾಸಕ ಆಗ್ರಹ!
    • 5
      ವಿಡಿಯೋ ಕಾಲ್ ನಲ್ಲಿ ನಿಶ್ಚಿತಾರ್ಥ-ಎಲ್ ಇಡಿ ಸ್ಕ್ರೀನ್ ಗೆ ಆರತಿ!

  • Privacy Policy
  • Contact
© Tulunadu Infomedia.

Press enter/return to begin your search