• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕಮ್ಯುನಿಸ್ಟರ ಆಡಳಿತ ಅಂತ್ಯ, ತ್ರಿಪುರಾ ಸಿಎಂ ಸ್ಥಾನಕ್ಕೇರಿದ ಬಿಜೆಪಿಯ ಬಿಪ್ಲಬ್ ದೇಬ್

TNN Correspondent Posted On March 9, 2018
0


0
Shares
  • Share On Facebook
  • Tweet It

ಅಗರ್ತಲಾ: 25 ವರ್ಷದ ಕಮ್ಯುನಿಸ್ಟರ್ ಆಡಳಿತಕ್ಕೆ ಕೊನೆ ಮೊಳೆ ಹೊಡೆದಿರುವ ತ್ರಿಪುರಾದ ಜನ ಬಿಜೆಪಿ ಭರ್ಜರಿ ಅಧಿಕಾರ ನೀಡಿದ್ದು, ಶುಕ್ರವಾರ ತ್ರಿಪುರಾದ ಮುಖ್ಯಮಂತ್ರಿಯಾಗಿ ಬಿಪ್ಲಬ್ ದೇಬ್ ಅಧಿಕಾರ ಸ್ವೀಕರಿಸಿದರು. ಬಿಜೆಪಿಯಿಂದ ತ್ರಿಪುರಾದಲ್ಲಿ ಪ್ರಥಮ ಬಾರಿಗೆ ಅಧಿಕಾರ ಸ್ವೀಕರಿಸುವ ಮೂಲಕ ದೇಬ್ ಇತಿಹಾಸ ಸೃಷ್ಟಿಸಿದ್ದಾರೆ.

48 ಹರೆಯದ ವಯಸ್ಸಿನ ಬಿಪ್ಲಬ್‌ ದೇಬ್‌ ಪ್ರಮಾಣ ವಚನ ಸಮಾರಂಭ ಅಗರ್ತಲಾದ ಅಸ್ಸಾಂ ರೈಫಲ್ಸ್ ಮೈದಾನದಲ್ಲಿ ಅದ್ದೂರಿಯಾಗಿ ನೆರವೇರಿತು. ಉಪ ಮುಖ್ಯ ಮಂತ್ರಿಯಾಗಿ ಜಿಷ್ಣು ದೇವ್‌ ಬರ್ಮನ್‌ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ರಾಜ್ಯಪಾಲ ತಥಾಗಥಾ ರಾಯ್‌ ಮುಖ್ಯಮಂತ್ರಿಗೆ ಪ್ರಮಾಣ ವಚನ ಬೋಧಿಸಿದರು.

ಅಧಿಕಾರ ಸ್ವೀಕಾರ ಸಮಾರಂಭದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ, ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಷಾ, ತ್ರಿಪುರಾದ ಮಾಜಿ ಮುಖ್ಯಮಂತ್ರಿ ಮಾಣಿಕ್ ಸರ್ಕಾರ್, ಬಿಜೆಪಿ ಹಿರಿಯ ನಾಯಕ ಲಾಲ್ ಕೃಷ್ಣ ಅಡ್ವಾಣಿ, ಮುರಳಿ ಮನೋಹರ್ ಜೋಷಿ, ಗೃಹ ಸಚಿವ ರಾಜನಾಥ್ ಸಿಂಗ್ ಸೇರಿ ಹಲವು ಬಿಜಪಿ ಮತ್ತು ಪ್ರತಿಪಕ್ಷಗಳ ಮುಖಂಡರು ಭಾಗವಹಿಸಿ, ನೂತನ ಮುಖ್ಯಮಂತ್ರಿ ಮತ್ತು ಸಚಿವರಿಗೆ ಶುಭಕೋರಿದರು.

60 ಸದಸ್ಯ ಬಲದ ತ್ರಿಪುರಾ ವಿಧಾನ ಸಭೆಯಲ್ಲಿ ಬಿಜೆಪಿ 35 ಶಾಸಕರನ್ನು ಹೊಂದಿದ್ದು ಐಪಿಎಫ್‌ಟಿ ಎಂಟು ಸದಸ್ಯರೊಂದಿಗೆ ಮೈತ್ರಿ ಮಾಡಿಕೊಂಡು ಅಧಿಕಾರ ನಡೆಸಲು ತೀರ್ಮಾನಿಸಿದೆ. ಕಳೆದ ತಿಂಗಳು ನಡೆದ ಚುನಾವಣೆಯಲ್ಲಿ 25 ವರ್ಷಗಳ ಸಿಪಿಐ(ಎಂ) ಆಡಳಿತಕ್ಕೆ ತ್ರಿಪುರಾದ ಜನರು ಕೊನೆ ಮೊಳೆ ಜಡಿದಿದ್ದರು. ಬಿಜೆಪಿ ಭರ್ಜರಿ ಬಹುಮತ ಸಾಧಿಸಿದರೇ, ಸಿಪಿಐ(ಎಂ) ಅತ್ಯಂತ ಕಡಿಮೆ ಸ್ಥಾನಗಳನ್ನು ಗೆಲ್ಲುವ ಮೂಲಕ ಅಧಿಕಾರ ಕಳೆದುಕೊಂಡಿತ್ತು.

0
Shares
  • Share On Facebook
  • Tweet It




Trending Now
ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
Tulunadu News April 7, 2026
ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
Tulunadu News April 7, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!

  • Privacy Policy
  • Contact
© Tulunadu Infomedia.

Press enter/return to begin your search