• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಅತ್ಯಾಚಾರಿಗಳಿಗೆ ಗಲ್ಲು ಶಿಕ್ಷೆ ವಿಧಿಸಿದ ರಾಜಸ್ಥಾನ ಬಿಜೆಪಿ ಸರ್ಕಾರದ ನಡೆ ಎಲ್ಲರೂ ಅನುಸರಿಸಲಿ!

TNN Correspondent Posted On March 9, 2018
0


0
Shares
  • Share On Facebook
  • Tweet It

ಜೈಪುರ: ದೇಶದಲ್ಲಿ ಬಾಲಕಿಯರ ಮೇಲೆ ಅತ್ಯಾಚಾರ ಪ್ರಕರಣಗಳು ಸುದ್ದಿಯಾದಾಗಲೆಲ್ಲ ಅಪರಾಧಿಗಳಿಗೆ ಗಲ್ಲು ಶಿಕ್ಷೆ ವಿಧಿಸಬೇಕು ಎಂಬ ಕೂಗು ಕೇಳಿಬರುತ್ತದೆ. ಆದರೆ ಯಾವ ಸರ್ಕಾರಗಳೂ ಈ ಕುರಿತು ಮನಸ್ಸು ಮಾಡುವುದಿಲ್ಲ, ಕಾನೂನು ರೂಪಿಸುವುದಿಲ್ಲ ಎಂಬ ಆರೋಪಗಳು ಕೇಳಿಬಂದಿದ್ದವು.

ಆದರೆ ಈ ಆರೋಪವನ್ನು ರಾಜಸ್ಥಾನದಲ್ಲಿ ವಸುಂಧರಾ ರಾಜೆ ನೇತೃತ್ವದ ಬಿಜೆಪಿ ಸರ್ಕಾರ ಸುಳ್ಳು ಮಾಡಿದ್ದು, 12 ವರ್ಷದೊಳಗಿನ ಬಾಲಕಿಯರ ಮೇಲೆ ಅತ್ಯಾಚಾರ ಎಸಗುವ ದುರುಳರಿಗೆ ಗಲ್ಲು ಶಿಕ್ಷೆ ವಿಧಿಸುವ ಮಹತ್ವದ ನಿರ್ಧಾರಕ್ಕೆ ಬಂದಿದೆ.

ಈ ಕುರಿತ ಮಸೂದೆಗೆ ರಾಜಸ್ಥಾನ ವಿಧಾನಸಭೆಯಲ್ಲಿ ಅಂಗೀಕಾರ ಸಿಕ್ಕಿದ್ದು, ರಾಜ್ಯದ ಅತ್ಯಾಚಾರಿಗಳಿಗೆ ಇನ್ನು ಗಲ್ಲು ಶಿಕ್ಷೆಯೇ ಗತಿಯಾಗಲಿದೆ. ಆದಾಗ್ಯೂ, ಸರ್ಕಾರದ ಈ ನಿರ್ಧಾನ ಅತ್ಯಾಚಾರಿಗಳ ಎದೆಯಲ್ಲಿ ನಡುಕ ಹುಟ್ಟಿಸಿದೆ.

ಅದಕ್ಕಾಗಿ ಅಪರಾಧ ಕಾನೂನು (ರಾಜಸ್ಥಾನ ತಿದ್ದುಪಡಿ ಕಾಯಿದೆ) ಎಂಬ ಮಸೂದೆ ರಚಿಸಿದ್ದು, ವಿಧಾನಸಭೆಯಲ್ಲಿ ರಾಜ್ಯ ಗೃಹ ಸಚಿವ ಗುಲಾಬ್ ಚಂದ್ ಕಟಾರಿಯಾ ಮಸೂದೆ ಪರಿಚಯಿಸಿದ್ದಾರೆ.

12 ವರ್ಷಗಳಿಗಿಂತ ಕಡಿಮೆ ವಯಸ್ಸಿನ ಬಾಲಕಿಯರ ಮೇಲೆ ಅತ್ಯಾಚಾರ ಎಸಗುವವರಿಗೆ ಗಲ್ಲುಶಿಕ್ಷೆ ಅಥವಾ 14 ವರ್ಷಕ್ಕಿಂತ ಕಡಿಮೆ ಇಲ್ಲದ ಜೀವಾವಧಿ ಶಿಕ್ಷೆ ವಿಧಿಸಬಹುದು ಎಂದು ಮಸೂದೆಯಲ್ಲಿ ಉಲ್ಲೇಖಿಸಲಾಗಿದೆ.

ಈಗಾಗಲೇ ಬಿಜೆಪಿ ಆಡಳಿತ ನಡೆಸುತ್ತಿರುವ ಮಧ್ಯಪ್ರದೇಶದಲ್ಲಿ 2017ರ ಡಿಸೆಂಬರ್ ನಲ್ಲಿ ಹಾಗೂ ಹರಿಯಾಣದಲ್ಲಿ ಕಳೆದ ಫೆಬ್ರವರಿಯಲ್ಲಿ ಅತ್ಯಾಚಾರಿಗಳಿಗೆ ಗಲ್ಲು ಶಿಕ್ಷೆ ವಿಧಿಸುವ ಕಾನೂನು ರಚಿಸಿವೆ. ಇದೇ ನಡೆ ಎಲ್ಲ ರಾಜ್ಯಗಳಲ್ಲೂ ಜಾರಿಗೆ ಬಂದರೆ ಅತ್ಯಾಚಾರ ಕಡಿಮೆಯಾಗುತ್ತದೆ ಎಂಬುದು ಜನರ ಒತ್ತಾಸೆಯಾಗಿದೆ.

0
Shares
  • Share On Facebook
  • Tweet It




Trending Now
ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
Tulunadu News December 27, 2025
ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
Tulunadu News December 23, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!
    • ಭಕ್ತಿಗೀತೆ ಹಾಡುತ್ತಿದ್ದ ಗಾಯಕಿಯ ಮೇಲೆ ದರ್ಪ! ಜಾತ್ಯಾತೀತ ಗೀತೆ ಹಾಡಲು ಒತ್ತಾಯ!
    • ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 10 ಲಕ್ಷ ನೀಡಿ - ಸರಕಾರಕ್ಕೆ ಶಾಸಕ ಆಗ್ರಹ!
    • ವಿಡಿಯೋ ಕಾಲ್ ನಲ್ಲಿ ನಿಶ್ಚಿತಾರ್ಥ-ಎಲ್ ಇಡಿ ಸ್ಕ್ರೀನ್ ಗೆ ಆರತಿ!
    • ಅಜಾನ್ ಚರ್ಚೆಯ ಸಂದರ್ಭದಲ್ಲಿ ದೀಪಾವಳಿ ಪಟಾಕಿ ವಿಷಯ ಎತ್ತಿದ ಸಚಿವ!
  • Popular Posts

    • 1
      ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!

  • Privacy Policy
  • Contact
© Tulunadu Infomedia.

Press enter/return to begin your search