• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಅತ್ಯಾಚಾರಿಗಳಿಗೆ ಗಲ್ಲು ಶಿಕ್ಷೆ ವಿಧಿಸಿದ ರಾಜಸ್ಥಾನ ಬಿಜೆಪಿ ಸರ್ಕಾರದ ನಡೆ ಎಲ್ಲರೂ ಅನುಸರಿಸಲಿ!

TNN Correspondent Posted On March 9, 2018
0


0
Shares
  • Share On Facebook
  • Tweet It

ಜೈಪುರ: ದೇಶದಲ್ಲಿ ಬಾಲಕಿಯರ ಮೇಲೆ ಅತ್ಯಾಚಾರ ಪ್ರಕರಣಗಳು ಸುದ್ದಿಯಾದಾಗಲೆಲ್ಲ ಅಪರಾಧಿಗಳಿಗೆ ಗಲ್ಲು ಶಿಕ್ಷೆ ವಿಧಿಸಬೇಕು ಎಂಬ ಕೂಗು ಕೇಳಿಬರುತ್ತದೆ. ಆದರೆ ಯಾವ ಸರ್ಕಾರಗಳೂ ಈ ಕುರಿತು ಮನಸ್ಸು ಮಾಡುವುದಿಲ್ಲ, ಕಾನೂನು ರೂಪಿಸುವುದಿಲ್ಲ ಎಂಬ ಆರೋಪಗಳು ಕೇಳಿಬಂದಿದ್ದವು.

ಆದರೆ ಈ ಆರೋಪವನ್ನು ರಾಜಸ್ಥಾನದಲ್ಲಿ ವಸುಂಧರಾ ರಾಜೆ ನೇತೃತ್ವದ ಬಿಜೆಪಿ ಸರ್ಕಾರ ಸುಳ್ಳು ಮಾಡಿದ್ದು, 12 ವರ್ಷದೊಳಗಿನ ಬಾಲಕಿಯರ ಮೇಲೆ ಅತ್ಯಾಚಾರ ಎಸಗುವ ದುರುಳರಿಗೆ ಗಲ್ಲು ಶಿಕ್ಷೆ ವಿಧಿಸುವ ಮಹತ್ವದ ನಿರ್ಧಾರಕ್ಕೆ ಬಂದಿದೆ.

ಈ ಕುರಿತ ಮಸೂದೆಗೆ ರಾಜಸ್ಥಾನ ವಿಧಾನಸಭೆಯಲ್ಲಿ ಅಂಗೀಕಾರ ಸಿಕ್ಕಿದ್ದು, ರಾಜ್ಯದ ಅತ್ಯಾಚಾರಿಗಳಿಗೆ ಇನ್ನು ಗಲ್ಲು ಶಿಕ್ಷೆಯೇ ಗತಿಯಾಗಲಿದೆ. ಆದಾಗ್ಯೂ, ಸರ್ಕಾರದ ಈ ನಿರ್ಧಾನ ಅತ್ಯಾಚಾರಿಗಳ ಎದೆಯಲ್ಲಿ ನಡುಕ ಹುಟ್ಟಿಸಿದೆ.

ಅದಕ್ಕಾಗಿ ಅಪರಾಧ ಕಾನೂನು (ರಾಜಸ್ಥಾನ ತಿದ್ದುಪಡಿ ಕಾಯಿದೆ) ಎಂಬ ಮಸೂದೆ ರಚಿಸಿದ್ದು, ವಿಧಾನಸಭೆಯಲ್ಲಿ ರಾಜ್ಯ ಗೃಹ ಸಚಿವ ಗುಲಾಬ್ ಚಂದ್ ಕಟಾರಿಯಾ ಮಸೂದೆ ಪರಿಚಯಿಸಿದ್ದಾರೆ.

12 ವರ್ಷಗಳಿಗಿಂತ ಕಡಿಮೆ ವಯಸ್ಸಿನ ಬಾಲಕಿಯರ ಮೇಲೆ ಅತ್ಯಾಚಾರ ಎಸಗುವವರಿಗೆ ಗಲ್ಲುಶಿಕ್ಷೆ ಅಥವಾ 14 ವರ್ಷಕ್ಕಿಂತ ಕಡಿಮೆ ಇಲ್ಲದ ಜೀವಾವಧಿ ಶಿಕ್ಷೆ ವಿಧಿಸಬಹುದು ಎಂದು ಮಸೂದೆಯಲ್ಲಿ ಉಲ್ಲೇಖಿಸಲಾಗಿದೆ.

ಈಗಾಗಲೇ ಬಿಜೆಪಿ ಆಡಳಿತ ನಡೆಸುತ್ತಿರುವ ಮಧ್ಯಪ್ರದೇಶದಲ್ಲಿ 2017ರ ಡಿಸೆಂಬರ್ ನಲ್ಲಿ ಹಾಗೂ ಹರಿಯಾಣದಲ್ಲಿ ಕಳೆದ ಫೆಬ್ರವರಿಯಲ್ಲಿ ಅತ್ಯಾಚಾರಿಗಳಿಗೆ ಗಲ್ಲು ಶಿಕ್ಷೆ ವಿಧಿಸುವ ಕಾನೂನು ರಚಿಸಿವೆ. ಇದೇ ನಡೆ ಎಲ್ಲ ರಾಜ್ಯಗಳಲ್ಲೂ ಜಾರಿಗೆ ಬಂದರೆ ಅತ್ಯಾಚಾರ ಕಡಿಮೆಯಾಗುತ್ತದೆ ಎಂಬುದು ಜನರ ಒತ್ತಾಸೆಯಾಗಿದೆ.

0
Shares
  • Share On Facebook
  • Tweet It




Trending Now
ನಿಟ್ಟೆ ಕಾಲೇಜು ಹಾಸ್ಟೆಲ್ ಶೌಚಾಲಯದಲ್ಲಿ ಹಿಂದೂ-ಮುಸ್ಲಿಂ ದ್ವೇಷ ಬರಹ! ವಿದ್ಯಾರ್ಥಿನಿ ಬಂಧನ
Tulunadu News July 15, 2025
ಕಾರ್ಕಳ ಪರಶುರಾಮನ ವಿಗ್ರಹ ಕಂಚಿನದ್ದು ಅಲ್ಲ, ನಕಲಿ: ಚಾರ್ಜ್ ಶೀಟ್ ಸಲ್ಲಿಕೆ
Tulunadu News July 15, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ನಿಟ್ಟೆ ಕಾಲೇಜು ಹಾಸ್ಟೆಲ್ ಶೌಚಾಲಯದಲ್ಲಿ ಹಿಂದೂ-ಮುಸ್ಲಿಂ ದ್ವೇಷ ಬರಹ! ವಿದ್ಯಾರ್ಥಿನಿ ಬಂಧನ
    • ಕಾರ್ಕಳ ಪರಶುರಾಮನ ವಿಗ್ರಹ ಕಂಚಿನದ್ದು ಅಲ್ಲ, ನಕಲಿ: ಚಾರ್ಜ್ ಶೀಟ್ ಸಲ್ಲಿಕೆ
    • ಲಗಾನ್ ನಿರ್ದೇಶಕ ಅಶುತೋಷ್ ನಿರ್ದೇಶನದಲ್ಲಿ ರಿಷಬ್ ಆಗಲಿದ್ದಾರೆ ಕೃಷ್ಣದೇವರಾಯ!
    • ಅಂದು ಕ್ಲರ್ಕ್.. ಇಂದು ಕರ್ಣಾಟಕ ಬ್ಯಾಂಕಿನ ಎಂಡಿ, ಸಿಇಒ!
    • ಪ್ರಾಜೆಕ್ಟ್ ಎಂದರೆ ಮಹಿಳೆ... ಪ್ರಾಜೆಕ್ಟ್ ಸಿಕ್ಕಿತಾ ಎಂದು ಬಾಬಾ ಯುವಕರಿಗೆ ಕೇಳುತ್ತಿದ್ದ! ಹೀಗೆ ಬೇರೆ ಬೇರೆ ಕೋಡ್ ವರ್ಡ್ ಗಳಿವೆ!
    • ಜಪಾನ್ ಮ್ಯಾರಥಾನ್.. 46 ಗಂಟೆ ನಿದ್ದೆ ಮಾಡದೇ ಓಡಿದ ಕನ್ನಡತಿ ಅಶ್ವಿನಿ!
    • ಆಧ್ಯಾತ್ಮದ ಸೆಳೆತದಿಂದ ಗೋರ್ಕರ್ಣದ ದಟ್ಟಗುಹೆಯಲ್ಲಿ ಪುಟ್ಟ ಮಕ್ಕಳೊಂದಿಗೆ ವಾಸಿಸುತ್ತಿದ್ದ ರಷ್ಯಾ ಮಹಿಳೆ!
    • 7.25 ಕೋಟಿ ವೆಚ್ಚದಲ್ಲಿ ಸೊಳ್ಳೆ ನಿಯಂತ್ರಣಕ್ಕೆ ರಾಜ್ಯ ಸರಕಾರ ಸಜ್ಜು!
    • ತರಗತಿಯಲ್ಲಿ ಲಾಸ್ಟ್ ಬೆಂಚ್ ಎನ್ನುವುದು ಕೇರಳದಲ್ಲಿ ಇನ್ನು ಇಲ್ಲ!
    • ಧರ್ಮಸ್ಥಳದಲ್ಲಿ ಗೌಪ್ಯವಾಗಿ ಹೆಣಗಳನ್ನು ವಿಲೇವಾರಿ ಮಾಡುತ್ತಿದ್ದೆ ಎಂದು ಹೇಳಿಕೊಂಡಿರುವ ಮಾಜಿ ಸ್ವಚ್ಚತಾ ಸಿಬ್ಬಂದಿ ನ್ಯಾಯಾಲಯಕ್ಕೆ ಹಾಜರು!
  • Popular Posts

    • 1
      ನಿಟ್ಟೆ ಕಾಲೇಜು ಹಾಸ್ಟೆಲ್ ಶೌಚಾಲಯದಲ್ಲಿ ಹಿಂದೂ-ಮುಸ್ಲಿಂ ದ್ವೇಷ ಬರಹ! ವಿದ್ಯಾರ್ಥಿನಿ ಬಂಧನ
    • 2
      ಕಾರ್ಕಳ ಪರಶುರಾಮನ ವಿಗ್ರಹ ಕಂಚಿನದ್ದು ಅಲ್ಲ, ನಕಲಿ: ಚಾರ್ಜ್ ಶೀಟ್ ಸಲ್ಲಿಕೆ
    • 3
      ಲಗಾನ್ ನಿರ್ದೇಶಕ ಅಶುತೋಷ್ ನಿರ್ದೇಶನದಲ್ಲಿ ರಿಷಬ್ ಆಗಲಿದ್ದಾರೆ ಕೃಷ್ಣದೇವರಾಯ!
    • 4
      ಅಂದು ಕ್ಲರ್ಕ್.. ಇಂದು ಕರ್ಣಾಟಕ ಬ್ಯಾಂಕಿನ ಎಂಡಿ, ಸಿಇಒ!
    • 5
      ಪ್ರಾಜೆಕ್ಟ್ ಎಂದರೆ ಮಹಿಳೆ... ಪ್ರಾಜೆಕ್ಟ್ ಸಿಕ್ಕಿತಾ ಎಂದು ಬಾಬಾ ಯುವಕರಿಗೆ ಕೇಳುತ್ತಿದ್ದ! ಹೀಗೆ ಬೇರೆ ಬೇರೆ ಕೋಡ್ ವರ್ಡ್ ಗಳಿವೆ!

  • Privacy Policy
  • Contact
© Tulunadu Infomedia.

Press enter/return to begin your search