• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಕಾಂಗ್ರೆಸ್ಸಿನ ಮತ್ತೊಂದು ಓಲೈಕೆಯ ಮುಖವಾಡ ಬಹಿರಂಗ, ಅಲ್ಪಸಂಖ್ಯಾತರು ಸಾಲ ಮರುಪಾವತಿಸದಿರಿ ಎಂದ ಪರಮೇಶ್ವರ್!

TNN Correspondent Posted On March 10, 2018


  • Share On Facebook
  • Tweet It

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರ ಅಸ್ತಿತ್ವಕ್ಕೆ ಬಂದ ಮೇಲೆ ಒಂದಲ್ಲ ಒಂದು ರೀತಿಯಲ್ಲಿ ಅಲ್ಪಸಂಖ್ಯಾತರನ್ನು ಓಲೈಸುತ್ತಲೇ ಇದೆ. ಮೊದಲಿಗೆ ಅಲ್ಪಸಂಖ್ಯಾತರಿಗಾಗಿ ಶಾದಿ ಭಾಗ್ಯ, ಬಳಿಕ ಟಿಪ್ಪು ಜಯಂತಿ, ನಂತರ ಹಲವು ಪ್ರಕರಣಗಳಲ್ಲಿ ಸಿಲುಕಿದವರ ಬಿಡುಗಡೆಗೆ “ಮುಗ್ಧ ಅಲ್ಪಸಂಖ್ಯಾತರು” ಎಂಬ ಒಕ್ಕಣೆ ಮೂಲಕ ಅವರನ್ನು ಒಲಿಸಿಕೊಳ್ಳಲು ಯತ್ನಿಸಿತು.

ಈಗ ರಾಜ್ಯ ಕಾಂಗ್ರೆಸ್ಸಿನ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಅವರು ಇದೇ ಅಲ್ಪಸಂಖ್ಯಾತರ ಓಲೈಕೆ ರಾಜಕಾರಣದ ಮತ್ತೊಂದು ಹೆಜ್ಜೆ ಇಟ್ಟಿದ್ದು, “ಅಲ್ಪಸಂಖ್ಯಾತರು ತೆಗೆದುಕೊಂಡ ಸಾಲವನ್ನು ಮರುಪಾವತಿಸದಿದ್ದರೂ ಆದೀತು” ಎಂದು ಹೇಳಿಕೆ ನೀಡಿದ್ದಾರೆ ಎಂದು ತಿಳಿದುಬಂದಿದೆ.

ಹೌದು, ಇತ್ತೀಚೆಗೆ ಬೆಂಗಳೂರಿನಲ್ಲಿ ಅಲ್ಪಸಂಖ್ಯಾತರಿಗಾಗಿ ಯೋಜನೆ ರೂಪಿಸಲು ನಡೆಸಿದ ಕಾರ್ಯಾಗಾರವೊಂದರಲ್ಲಿ ಮಾತನಾಡಿದ ಪರಮೇಶ್ವರ್, ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ಕಾರ್ಪೋರೇಷನ್ ಇದುವರೆಗೂ ಸಣ್ಣ ಪ್ರಮಾಣದಲ್ಲಿ ಸಾಲ ನೀಡುತ್ತಿದೆ. ಇನ್ನು ಮುಂದೆ ಸಾಲದ ಪ್ರಮಾನ 50 ಲಕ್ಷದವರೆಗೆ ಆಗಬೇಕು. ಈ ಸಾಲವನ್ನು ಅಲ್ಪಸಂಖ್ಯಾತರು ಮರುಪಾವತಿಸದಿದ್ದರೂ ಆದೀತು ಎಂದು ಹೇಳಿದ್ದಾರೆ ಎನ್ನಲಾಗಿದೆ.

ಅಷ್ಟೇ ಅಲ್ಲ, ಸರ್ಕಾರದ ಹಣದ ದುರುಪಯೋಗದ ಕುರಿತು ಕಾಂಗ್ರೆಸ್ಸಿನ ನಾಯಕರೇ ಪಾಠ ಮಾಡಿದ್ದು, ಸರ್ಕಾರಕ್ಕೆ ಟೋಪಿ ಹಾಕಿದರೂ ಪರವಾಗಿಲ್ಲ ಎಂದು ಪರಮೇಶ್ವರ್ ಅಲ್ಪಸಂಖ್ಯಾತರನ್ನು ದಾರಿ ತಪ್ಪಿಸಲು ಮುಂದಾಗಿದ್ದಾರೆ.

ಒಟ್ಟಿನಲ್ಲಿ ಮತಕ್ಕಾಗಿ ರಾಹುಲ್ ಗಾಂಧಿ ದೇವಾಲಯಕ್ಕೆ ಹೋಗಲೂ ಸಿದ್ಧ, ಸಿದ್ದರಾಮಯ್ಯನವರು ನಾನು ಹಿಂದೂ ಎನ್ನಲು ಬದ್ಧ ಹಾಗೂ ಈಗ ಸರ್ಕಾರಕ್ಕೆ ಟೋಪಿ ಹಾಕಿದರೂ ಪರವಾಗಿಲ್ಲ ಎಂದು ಓಲೈಕೆಗೆ ಮುಂದಾಗಿರುವ ಕಾಂಗ್ರೆಸ್ ಎಂತಹ ಪೆದ್ದ ಎಂಬುದು ಖಾತ್ರಿಯಾಗಿದೆ. ಇಂತಹವರು ರಾಜಕಾರಣಕ್ಕೇ ಅಪವಾದವಲ್ಲವೇ?

  • Share On Facebook
  • Tweet It


- Advertisement -


Trending Now
ಮೋದಿ ವಿರುದ್ಧ ಬಿಬಿಸಿ, ಪರ ಆಂಟೋನಿ!!
Tulunadu News January 27, 2023
ಮುತಾಲಿಕ್ ಖಡ್ಗಕ್ಕೆ ಸಾಣೆ ಹಾಕಿಸಿಕೊಟ್ಟ ಚಾಣಾಕ್ಷ ಯಾರು?
Tulunadu News January 26, 2023
Leave A Reply

  • Recent Posts

    • ಮೋದಿ ವಿರುದ್ಧ ಬಿಬಿಸಿ, ಪರ ಆಂಟೋನಿ!!
    • ಮುತಾಲಿಕ್ ಖಡ್ಗಕ್ಕೆ ಸಾಣೆ ಹಾಕಿಸಿಕೊಟ್ಟ ಚಾಣಾಕ್ಷ ಯಾರು?
    • ವೆನಲಾಕ್ ನಲ್ಲಿ ಕ್ಯಾನ್ಸರ್ ಚಿಕಿತ್ಸಾ ಘಟಕ ಯಾಕಿಲ್ಲ!!
    • ನಕಲಿ ಕಾಂತಾರಗಳು ನಮ್ಮ ನಂಬಿಕೆಗೆ ಪೆಟ್ಟು ಕೊಡಬಾರದು!!
    • ಶರದ್ ಪವಾರ್ ಕೂಡ ಗಡಿಯಲ್ಲಿ ಕಡ್ಡಿ ಅಲ್ಲಾಡಿಸಲು ಹೊರಟಿದ್ದಾರೆ!
    • ಮಂಗಳಾ ಕ್ರೀಡಾಂಗಣದ ಹೊರಗೆ ಸಿಂಗಾರ, ಒಳಗೆ ಗೋಳಿಸೊಪ್ಪು!!
    • ಹಿಂದೂಗಳ ಫಲವತ್ತತೆಯ ತಾಕತ್ತು ಪರೀಕ್ಷಿಸುತ್ತೀಯಾ ಬದ್ರುದ್ದೀನ್?
    • ಮಕ್ಕಳ ಬ್ಯಾಗಿನಲ್ಲಿ ಕಾಂಡೋಮ್ ಉತ್ತಮ ಲಕ್ಷಣವಲ್ಲ!!
    • ಬೊಮ್ಮಾಯಿ ಕಣ್ಣು ಮುಚ್ಚಿ ಕೊಟ್ಟ ಮುಸ್ಲಿಂ ಕಾಲೇಜು ಪ್ರಪಂಚ ನೋಡಿತು!!
    • ವಕ್ಫ್ ಬೋರ್ಡ್ ಅಧ್ಯಕ್ಷರ ಕ್ಲೈಮ್ಯಾಕ್ಸ್ ಆಟದಿಂದ ಬಿಜೆಪಿಗೆ ಟೆನ್ಷನ್!
  • Popular Posts

    • 1
      ಮೋದಿ ವಿರುದ್ಧ ಬಿಬಿಸಿ, ಪರ ಆಂಟೋನಿ!!
    • 2
      ಮುತಾಲಿಕ್ ಖಡ್ಗಕ್ಕೆ ಸಾಣೆ ಹಾಕಿಸಿಕೊಟ್ಟ ಚಾಣಾಕ್ಷ ಯಾರು?


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search