• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕಾಂಗ್ರೆಸ್ಸಿನ ಮತ್ತೊಂದು ಓಲೈಕೆಯ ಮುಖವಾಡ ಬಹಿರಂಗ, ಅಲ್ಪಸಂಖ್ಯಾತರು ಸಾಲ ಮರುಪಾವತಿಸದಿರಿ ಎಂದ ಪರಮೇಶ್ವರ್!

TNN Correspondent Posted On March 10, 2018
0


0
Shares
  • Share On Facebook
  • Tweet It

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರ ಅಸ್ತಿತ್ವಕ್ಕೆ ಬಂದ ಮೇಲೆ ಒಂದಲ್ಲ ಒಂದು ರೀತಿಯಲ್ಲಿ ಅಲ್ಪಸಂಖ್ಯಾತರನ್ನು ಓಲೈಸುತ್ತಲೇ ಇದೆ. ಮೊದಲಿಗೆ ಅಲ್ಪಸಂಖ್ಯಾತರಿಗಾಗಿ ಶಾದಿ ಭಾಗ್ಯ, ಬಳಿಕ ಟಿಪ್ಪು ಜಯಂತಿ, ನಂತರ ಹಲವು ಪ್ರಕರಣಗಳಲ್ಲಿ ಸಿಲುಕಿದವರ ಬಿಡುಗಡೆಗೆ “ಮುಗ್ಧ ಅಲ್ಪಸಂಖ್ಯಾತರು” ಎಂಬ ಒಕ್ಕಣೆ ಮೂಲಕ ಅವರನ್ನು ಒಲಿಸಿಕೊಳ್ಳಲು ಯತ್ನಿಸಿತು.

ಈಗ ರಾಜ್ಯ ಕಾಂಗ್ರೆಸ್ಸಿನ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಅವರು ಇದೇ ಅಲ್ಪಸಂಖ್ಯಾತರ ಓಲೈಕೆ ರಾಜಕಾರಣದ ಮತ್ತೊಂದು ಹೆಜ್ಜೆ ಇಟ್ಟಿದ್ದು, “ಅಲ್ಪಸಂಖ್ಯಾತರು ತೆಗೆದುಕೊಂಡ ಸಾಲವನ್ನು ಮರುಪಾವತಿಸದಿದ್ದರೂ ಆದೀತು” ಎಂದು ಹೇಳಿಕೆ ನೀಡಿದ್ದಾರೆ ಎಂದು ತಿಳಿದುಬಂದಿದೆ.

ಹೌದು, ಇತ್ತೀಚೆಗೆ ಬೆಂಗಳೂರಿನಲ್ಲಿ ಅಲ್ಪಸಂಖ್ಯಾತರಿಗಾಗಿ ಯೋಜನೆ ರೂಪಿಸಲು ನಡೆಸಿದ ಕಾರ್ಯಾಗಾರವೊಂದರಲ್ಲಿ ಮಾತನಾಡಿದ ಪರಮೇಶ್ವರ್, ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ಕಾರ್ಪೋರೇಷನ್ ಇದುವರೆಗೂ ಸಣ್ಣ ಪ್ರಮಾಣದಲ್ಲಿ ಸಾಲ ನೀಡುತ್ತಿದೆ. ಇನ್ನು ಮುಂದೆ ಸಾಲದ ಪ್ರಮಾನ 50 ಲಕ್ಷದವರೆಗೆ ಆಗಬೇಕು. ಈ ಸಾಲವನ್ನು ಅಲ್ಪಸಂಖ್ಯಾತರು ಮರುಪಾವತಿಸದಿದ್ದರೂ ಆದೀತು ಎಂದು ಹೇಳಿದ್ದಾರೆ ಎನ್ನಲಾಗಿದೆ.

ಅಷ್ಟೇ ಅಲ್ಲ, ಸರ್ಕಾರದ ಹಣದ ದುರುಪಯೋಗದ ಕುರಿತು ಕಾಂಗ್ರೆಸ್ಸಿನ ನಾಯಕರೇ ಪಾಠ ಮಾಡಿದ್ದು, ಸರ್ಕಾರಕ್ಕೆ ಟೋಪಿ ಹಾಕಿದರೂ ಪರವಾಗಿಲ್ಲ ಎಂದು ಪರಮೇಶ್ವರ್ ಅಲ್ಪಸಂಖ್ಯಾತರನ್ನು ದಾರಿ ತಪ್ಪಿಸಲು ಮುಂದಾಗಿದ್ದಾರೆ.

ಒಟ್ಟಿನಲ್ಲಿ ಮತಕ್ಕಾಗಿ ರಾಹುಲ್ ಗಾಂಧಿ ದೇವಾಲಯಕ್ಕೆ ಹೋಗಲೂ ಸಿದ್ಧ, ಸಿದ್ದರಾಮಯ್ಯನವರು ನಾನು ಹಿಂದೂ ಎನ್ನಲು ಬದ್ಧ ಹಾಗೂ ಈಗ ಸರ್ಕಾರಕ್ಕೆ ಟೋಪಿ ಹಾಕಿದರೂ ಪರವಾಗಿಲ್ಲ ಎಂದು ಓಲೈಕೆಗೆ ಮುಂದಾಗಿರುವ ಕಾಂಗ್ರೆಸ್ ಎಂತಹ ಪೆದ್ದ ಎಂಬುದು ಖಾತ್ರಿಯಾಗಿದೆ. ಇಂತಹವರು ರಾಜಕಾರಣಕ್ಕೇ ಅಪವಾದವಲ್ಲವೇ?

0
Shares
  • Share On Facebook
  • Tweet It




Trending Now
ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
Tulunadu News March 5, 2026
ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
Tulunadu News March 3, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
    • ಕೇರಳ ಇನ್ನು ಮುಂದೆ ಕೇರಳಂ!
    • ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
    • ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
  • Popular Posts

    • 1
      ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • 2
      ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:

  • Privacy Policy
  • Contact
© Tulunadu Infomedia.

Press enter/return to begin your search