• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕಾಂಗ್ರೆಸ್ಸಿನ ಮತ್ತೊಂದು ಓಲೈಕೆಯ ಮುಖವಾಡ ಬಹಿರಂಗ, ಅಲ್ಪಸಂಖ್ಯಾತರು ಸಾಲ ಮರುಪಾವತಿಸದಿರಿ ಎಂದ ಪರಮೇಶ್ವರ್!

TNN Correspondent Posted On March 10, 2018
0


0
Shares
  • Share On Facebook
  • Tweet It

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರ ಅಸ್ತಿತ್ವಕ್ಕೆ ಬಂದ ಮೇಲೆ ಒಂದಲ್ಲ ಒಂದು ರೀತಿಯಲ್ಲಿ ಅಲ್ಪಸಂಖ್ಯಾತರನ್ನು ಓಲೈಸುತ್ತಲೇ ಇದೆ. ಮೊದಲಿಗೆ ಅಲ್ಪಸಂಖ್ಯಾತರಿಗಾಗಿ ಶಾದಿ ಭಾಗ್ಯ, ಬಳಿಕ ಟಿಪ್ಪು ಜಯಂತಿ, ನಂತರ ಹಲವು ಪ್ರಕರಣಗಳಲ್ಲಿ ಸಿಲುಕಿದವರ ಬಿಡುಗಡೆಗೆ “ಮುಗ್ಧ ಅಲ್ಪಸಂಖ್ಯಾತರು” ಎಂಬ ಒಕ್ಕಣೆ ಮೂಲಕ ಅವರನ್ನು ಒಲಿಸಿಕೊಳ್ಳಲು ಯತ್ನಿಸಿತು.

ಈಗ ರಾಜ್ಯ ಕಾಂಗ್ರೆಸ್ಸಿನ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಅವರು ಇದೇ ಅಲ್ಪಸಂಖ್ಯಾತರ ಓಲೈಕೆ ರಾಜಕಾರಣದ ಮತ್ತೊಂದು ಹೆಜ್ಜೆ ಇಟ್ಟಿದ್ದು, “ಅಲ್ಪಸಂಖ್ಯಾತರು ತೆಗೆದುಕೊಂಡ ಸಾಲವನ್ನು ಮರುಪಾವತಿಸದಿದ್ದರೂ ಆದೀತು” ಎಂದು ಹೇಳಿಕೆ ನೀಡಿದ್ದಾರೆ ಎಂದು ತಿಳಿದುಬಂದಿದೆ.

ಹೌದು, ಇತ್ತೀಚೆಗೆ ಬೆಂಗಳೂರಿನಲ್ಲಿ ಅಲ್ಪಸಂಖ್ಯಾತರಿಗಾಗಿ ಯೋಜನೆ ರೂಪಿಸಲು ನಡೆಸಿದ ಕಾರ್ಯಾಗಾರವೊಂದರಲ್ಲಿ ಮಾತನಾಡಿದ ಪರಮೇಶ್ವರ್, ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ಕಾರ್ಪೋರೇಷನ್ ಇದುವರೆಗೂ ಸಣ್ಣ ಪ್ರಮಾಣದಲ್ಲಿ ಸಾಲ ನೀಡುತ್ತಿದೆ. ಇನ್ನು ಮುಂದೆ ಸಾಲದ ಪ್ರಮಾನ 50 ಲಕ್ಷದವರೆಗೆ ಆಗಬೇಕು. ಈ ಸಾಲವನ್ನು ಅಲ್ಪಸಂಖ್ಯಾತರು ಮರುಪಾವತಿಸದಿದ್ದರೂ ಆದೀತು ಎಂದು ಹೇಳಿದ್ದಾರೆ ಎನ್ನಲಾಗಿದೆ.

ಅಷ್ಟೇ ಅಲ್ಲ, ಸರ್ಕಾರದ ಹಣದ ದುರುಪಯೋಗದ ಕುರಿತು ಕಾಂಗ್ರೆಸ್ಸಿನ ನಾಯಕರೇ ಪಾಠ ಮಾಡಿದ್ದು, ಸರ್ಕಾರಕ್ಕೆ ಟೋಪಿ ಹಾಕಿದರೂ ಪರವಾಗಿಲ್ಲ ಎಂದು ಪರಮೇಶ್ವರ್ ಅಲ್ಪಸಂಖ್ಯಾತರನ್ನು ದಾರಿ ತಪ್ಪಿಸಲು ಮುಂದಾಗಿದ್ದಾರೆ.

ಒಟ್ಟಿನಲ್ಲಿ ಮತಕ್ಕಾಗಿ ರಾಹುಲ್ ಗಾಂಧಿ ದೇವಾಲಯಕ್ಕೆ ಹೋಗಲೂ ಸಿದ್ಧ, ಸಿದ್ದರಾಮಯ್ಯನವರು ನಾನು ಹಿಂದೂ ಎನ್ನಲು ಬದ್ಧ ಹಾಗೂ ಈಗ ಸರ್ಕಾರಕ್ಕೆ ಟೋಪಿ ಹಾಕಿದರೂ ಪರವಾಗಿಲ್ಲ ಎಂದು ಓಲೈಕೆಗೆ ಮುಂದಾಗಿರುವ ಕಾಂಗ್ರೆಸ್ ಎಂತಹ ಪೆದ್ದ ಎಂಬುದು ಖಾತ್ರಿಯಾಗಿದೆ. ಇಂತಹವರು ರಾಜಕಾರಣಕ್ಕೇ ಅಪವಾದವಲ್ಲವೇ?

0
Shares
  • Share On Facebook
  • Tweet It




Trending Now
ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
Tulunadu News April 7, 2026
ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
Tulunadu News April 7, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
  • Popular Posts

    • 1
      ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • 2
      ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • 3
      ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ

  • Privacy Policy
  • Contact
© Tulunadu Infomedia.

Press enter/return to begin your search