• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಎಬಿವಿಪಿ ಕಾರ್ಯಕರ್ತನ ಮೇಲೆ ಮಾರಣಾಂತಿಕ ದಾಳಿ ನಡೆಸಿದ ಎಸ್ ಎಫ್ ಐ ಕಾರ್ಯಕರ್ತರು

TNN Correspondent Posted On March 10, 2018
0


0
Shares
  • Share On Facebook
  • Tweet It

ಕೊಲ್ಲಮ್: ಕೇರಳದಲ್ಲಿ ಹಿಂದೂಪರ ಸಂಘಟನೆಗಳ ಕಾರ್ಯಕರ್ತರ ಮೇಲಿನ ದಾಳಿಗಳು ಮುಂದುವರಿದಿದೆ. ತ್ರಿಪುರಾದಲ್ಲಿ ಸೋತರು ಬುದ್ದಿ ಕಲಿಯದ ಕಮ್ಯುನಿಸ್ಟರು  ಕೇರಳದಲ್ಲಿ ಉತ್ತಮ ಆಡಳಿತ ನೀಡದೇ, ಜನರ ವಿರೋಧವನ್ನು ಕಟ್ಟಿಕೊಳ್ಳುತ್ತಿದ್ದಾರೆ. ಅಲ್ಲದೇ ಹಿಂದೂಪರ ಸಂಘಟನೆಗಳ ಕಾರ್ಯಕರ್ತರ ಮೇಲೆ ಹಲ್ಲೆ ದೌರ್ಜನ್ಯ ಮಿತಿ ಮೀರುತ್ತಿದ್ದು, ಕೇರಳದ ಕೊಲ್ಲಮ ನ ಪೂರ್ವವಲಯದ ಪೊಲೀಸ್ ಠಾಣೆ ಎದುರೇ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಘಟಕದ ಕಾರ್ಯಕರ್ತ ಅಜೀತ್ ಎಂಬುವವರ ಮೇಲೆ ಎಸ್ ಎಫ್ ಐ ಸಂಘಟನೆಯ ಪದಾಧಿಕಾರಿಗಳು ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾರೆ.

ಹಲ್ಲೆ ನಡೆಸುತ್ತಿರುವಾಗ ಕಾನೂನು ವಿದ್ಯಾಲಯದ ವಿದ್ಯಾರ್ಥಿಗಳು ಮತ್ತು ಪೊಲೀಸರು ಅಸಹಾಯಕರಾಗಿ ನಿಂತಿದ್ದರು ಎನ್ನಲಾಗಿದೆ. ಎಸ್ ಎನ್ ಕಾನೂನು ಕಾಲೇಜಿನಲ್ಲಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಘಟಕವನ್ನು ಆರಂಭಿಸಲು ಮುಂದಾಗಿದ್ದರಿಂದ ಈ ದಾಳಿ ನಡೆಸಲಾಗಿದೆ ಎಂದು ಆರೋಪಿಸಲಾಗಿದೆ. ಈ ಘಟನೆ ನಂತರ ಕೊಲ್ಲಮ್ ನಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ.

ಉದ್ವಿಗ್ನ ಪರಿಸ್ಥಿತಿ ನಿಯಂತ್ರಿಸುವ ವೇಳೆ ಇನ್ಸಪೆಕ್ಟರ್ ಗಾಯಗಳಾಗಿದ್ದು, ಎಬಿವಿಪಿ ವಿದ್ಯಾರ್ಥಿಗಳ ಮೇಲೆ ದಾಳಿ ಮಾಡಿದ ಎಸ್ ಎಫ್ ಐ ಸಂಘಟನೆಯ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧನ ಖಂಡಿಸಿ ಎಸ್ ಎಫ್ ಐ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಹಲ್ಲೆ ನಡೆಸಿದವರ ವಿರುದ್ಧ ಎಬಿವಿಪಿ ಕಾರ್ಯಕರ್ತರು ದೂರು ದಾಖಲಿಸಿದ್ದಾರೆ.

ಎದುರೇ ಘಟನೆ ಸಂಭವಿಸಿದರೂ ಕ್ರಮ ಕೈಗೊಳ್ಳದ ಪೊಲೀಸರು

ಅಜಿತ್ ಮೇಲೆ ದಾಳಿ ನಡೆದಿರುವುದು ಪೊಲೀಸರ ಎದುರೇ ಎನ್ನಲಾಗುತ್ತಿದೆ. ಆದರೆ ಪೊಲೀಸರ ಎದುರೆ ಅಜಿತ್ ಮೇಲೆ ದಾಳಿ ನಡೆಯುತ್ತಿರುವಾಗ ಪೊಲೀಸರು ತಡೆಯದೇ ಮೌನಕ್ಕೆ ಜಾರಿದ್ದರು. ಅಲ್ಲದೇ ತೀವ್ರವಾಗಿ ಗಾಯಗೊಂಡಿದ್ದ ಅಜಿತ್ ಅವರನ್ನು ಆಸ್ಪತ್ರೆಗೆ ದಾಖಲಿಸಲು ಕೂಡ ಪೊಲೀಸರು ಮುಂದಾಗಿಲ್ಲ. ಈ ವೇಳೆ ಬೈಕ್ ಮೇಲೆ ಅಜಿತ್ ರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಕೇರಳ ಪೊಲೀಸರ ಈ ನಡೆ ಹಲವು ಅನುಮಾನಗಳಿಗೆ ಪುಷ್ಠಿ ನೀಡಿದೆ.

0
Shares
  • Share On Facebook
  • Tweet It




Trending Now
ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
Tulunadu News February 12, 2026
ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
Tulunadu News February 12, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
  • Popular Posts

    • 1
      ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • 2
      ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 3
      'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • 4
      ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • 5
      ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್

  • Privacy Policy
  • Contact
© Tulunadu Infomedia.

Press enter/return to begin your search