• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ತ್ರಿಪುರಾದಲ್ಲಿ ಇತಿಹಾಸ ಸೃಷ್ಟಿ, ಪ್ರಥಮ ಬಾರಿಗೆ ಚಕ್ಮಾ ಬುಡಕಟ್ಟು ಸಮುದಾಯದ ಮಹಿಳೆಗೆ ಸಚಿವ ಸ್ಥಾನ ನೀಡಿದ ಬಿಜೆಪಿ

TNN Correspondent Posted On March 10, 2018


  • Share On Facebook
  • Tweet It

ಅಗರ್ತಲಾ: ಬಿಜೆಪಿ ತನ್ನ ಸರ್ಕಾರದ ಸಚಿವ ಸಂಪುಟ ರಚನೆ ವೇಳೆಯೇ ಇತಿಹಾಸ ಸೃಷ್ಟಿಸಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಚಕ್ಮಾ ಬುಡಕಟ್ಟು ಸಮುದಾಯದ ಮಹಿಳೆಯೊಬ್ಬರಿಗೆ ಸಚಿವ ಸ್ಥಾನ ನೀಡಿದೆ. 25 ವರ್ಷ ಕಮ್ಯುನಿಸ್ಟರ್ ನಿರ್ಲಕ್ಷಿತ ಆಡಳಿತಕ್ಕೆ ಬೇಸತ್ತಿರುವ ತ್ರಿಪುರಾದ ಜನರು ಬಿಜೆಪಿಗೆ ಅಧಿಕಾರ ನೀಡಿದ್ದಾರೆ. 25 ವರ್ಷದಿಂದ ಒಂದೇ ಪಕ್ಷ ಆಡಳಿತ ನಡೆಸಿದರೂ ಚಕ್ಮಾ ಬುಡಕಟ್ಟಿನವರಿಗೆ ಸಚಿವ ಸ್ಥಾನ ನೀಡಿರಲಿಲ್ಲ. ಇದೀಗ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಬಿಜೆಪಿ ಬುಡಕಟ್ಟು ಸಮುದಾಯದ ಮಹಿಳೆಯ ಸಚಿವ ಸ್ಥಾನ ನೀಡಿರುವುದು ಇತಿಹಾಸ ಸೃಷ್ಟಿಸಿದೆ.

ಪ್ರಥಮ ಬಾರಿಗೆ ಪಚರ್ತಲ ವಿಧಾನಸಭೆ ಕ್ಷೇತ್ರದಿಂದ ಶಾಸಕಿಯಾಗಿ ಆಯ್ಕೆಯಾಗಿರುವ ಸಂತಾನಾ ಚಕ್ಮಾ ಇದೀಗ ಸಚಿವರಾಗಿ ಅಧಿಕಾರ ಸ್ವೀಕರಿಸಿದ್ದಾರೆ. ಈ ಮೂಲಕ ಚಕ್ಮಾ ಬುಡಕಟ್ಟು ಸಮುದಾಯದಲ್ಲಿ ಮಹಿಳೆಯೊಬ್ಬರು ಪ್ರಥಮ ಬಾರಿಗೆ ಸಚಿವರಾಗಿ ಆಯ್ಕೆಯಾದ ಇತಿಹಾಸ ಸೃಷ್ಟಿಸಿದ್ದಾರೆ.

32 ವರ್ಷ ವಯಸ್ಸಿನ ಸಂತನಾ ಸಮಾಜ ಸೇವೆ ಪದವಿ ಪಡೆದಿದ್ದಾರೆ. 2015ರಲ್ಲಿ ಬಿಜೆಪಿ ಜೊತೆ ಕೈ ಜೋಡಿಸಿರುವ ಅವರು ತ್ರಿಪುರಾ ಚುನಾವಣೆಗೆ ನಡೆದ ಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು. ಇವರ ಸಾಮಾಜಿಕ ಕಾಳಜಿ, ಸೇವೆ ಮತ್ತು ಯುವಕರನ್ನು ಬೆಂಬಲಿಸುವ ಪ್ರಧಾನಿ ಮೋದಿ ಅವರು ಸಚಿವ ಸ್ಥಾನ ನೀಡುವ ಮೂಲಕ ಇತಿಹಾಸ ಸೃಷ್ಟಿಸಿದ್ದಾರೆ.  ಶುಕ್ರವಾರ ತ್ರಿಪುರಾ ಮುಖ್ಯಮಂತ್ರಿಯಾಗಿ ಬಿಪ್ಲಬ್ ದೇಬ್ ಸೇರಿ 12 ಜನರು ಸಚಿವರಾಗಿ ಅಧಿಕಾರ ಸ್ವೀಕರಿಸಿದ್ದರು.

  • Share On Facebook
  • Tweet It


- Advertisement -


Trending Now
ಚಕ್ರತೀರ್ಥ ಹೆಗಲ ಮೇಲೆ ಕೋವಿ ಇಟ್ಟು ಹೊಡೆಯಲು ಹೊರಟಿದ್ದು ಯಾರನ್ನಾ?
Tulunadu News June 25, 2022
ರೋಹಿತ್ ಸನ್ಮಾನದಿಂದ ಎಡಚರರು ವಿಲವಿಲ!!
Tulunadu News June 24, 2022
Leave A Reply

  • Recent Posts

    • ಚಕ್ರತೀರ್ಥ ಹೆಗಲ ಮೇಲೆ ಕೋವಿ ಇಟ್ಟು ಹೊಡೆಯಲು ಹೊರಟಿದ್ದು ಯಾರನ್ನಾ?
    • ರೋಹಿತ್ ಸನ್ಮಾನದಿಂದ ಎಡಚರರು ವಿಲವಿಲ!!
    • ರಾಜಕೀಯ ಆತ್ಮಹತ್ಯೆ ಎಂದರೆ ಏನು ಉದ್ಧವ್!
    • ಮಂಗಳೂರಿನಲ್ಲಿ ಐಲ್ಯಾಂಡ್ ಪ್ಲಾನ್ ಹಾಕಿದ ಬುದ್ಧಿವಂತ ಯಾರು?
    • ಉತ್ತರ ಭಾರತದಲ್ಲಿ ಸೇನೆಗೆ ಸೇರಿಸುವುದು ಉದ್ಯಮ!!
    • ನೂಪುರ್ ಹೇಳಿಕೆಗೆ ಮುಸ್ಲಿಮರು ದೇಶದಲ್ಲಿ ಬೆಂಕಿ ಇಟ್ಟರು, ಶೈಲಜಾ ಹೇಳಿಕೆಗೆ??
    • ಪತ್ನಿ ಸದಸ್ಯರಾದರೆ ಗಂಡ ಅಧಿಕಾರ ಚಲಾಯಿಸುವುದು ಬಂದ್!!
    • ಭಾರತದಲ್ಲಿ ಬಾಲ ಬಿಚ್ಚಿದ ಹಾಗೆ ಕುವೈಟ್ ನಲ್ಲಿ ನಡೆಯಲ್ಲ!!
    • ಪ್ರೀತಿ ಗೆಹ್ಲೋತ್ ಮಾಡಿದ ಕೆಲಸ ಅಕ್ಷಯ್ ಶ್ರೀಧರ್ ಅವರಿಗೆ ಆಗುತ್ತಾ?
    • ಸೋನಿಯಾ ಮೇಲೆ ಇರುವಷ್ಟು ಕನಿಕರ ರಾಹುಲ್ ಮೇಲೆ ಇಲ್ಲ!
  • Popular Posts

    • 1
      ಚಕ್ರತೀರ್ಥ ಹೆಗಲ ಮೇಲೆ ಕೋವಿ ಇಟ್ಟು ಹೊಡೆಯಲು ಹೊರಟಿದ್ದು ಯಾರನ್ನಾ?
    • 2
      ರೋಹಿತ್ ಸನ್ಮಾನದಿಂದ ಎಡಚರರು ವಿಲವಿಲ!!
    • 3
      ರಾಜಕೀಯ ಆತ್ಮಹತ್ಯೆ ಎಂದರೆ ಏನು ಉದ್ಧವ್!
    • 4
      ಮಂಗಳೂರಿನಲ್ಲಿ ಐಲ್ಯಾಂಡ್ ಪ್ಲಾನ್ ಹಾಕಿದ ಬುದ್ಧಿವಂತ ಯಾರು?
    • 5
      ಉತ್ತರ ಭಾರತದಲ್ಲಿ ಸೇನೆಗೆ ಸೇರಿಸುವುದು ಉದ್ಯಮ!!


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search