• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ತ್ರಿಪುರಾದಲ್ಲಿ ಇತಿಹಾಸ ಸೃಷ್ಟಿ, ಪ್ರಥಮ ಬಾರಿಗೆ ಚಕ್ಮಾ ಬುಡಕಟ್ಟು ಸಮುದಾಯದ ಮಹಿಳೆಗೆ ಸಚಿವ ಸ್ಥಾನ ನೀಡಿದ ಬಿಜೆಪಿ

TNN Correspondent Posted On March 10, 2018


  • Share On Facebook
  • Tweet It

ಅಗರ್ತಲಾ: ಬಿಜೆಪಿ ತನ್ನ ಸರ್ಕಾರದ ಸಚಿವ ಸಂಪುಟ ರಚನೆ ವೇಳೆಯೇ ಇತಿಹಾಸ ಸೃಷ್ಟಿಸಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಚಕ್ಮಾ ಬುಡಕಟ್ಟು ಸಮುದಾಯದ ಮಹಿಳೆಯೊಬ್ಬರಿಗೆ ಸಚಿವ ಸ್ಥಾನ ನೀಡಿದೆ. 25 ವರ್ಷ ಕಮ್ಯುನಿಸ್ಟರ್ ನಿರ್ಲಕ್ಷಿತ ಆಡಳಿತಕ್ಕೆ ಬೇಸತ್ತಿರುವ ತ್ರಿಪುರಾದ ಜನರು ಬಿಜೆಪಿಗೆ ಅಧಿಕಾರ ನೀಡಿದ್ದಾರೆ. 25 ವರ್ಷದಿಂದ ಒಂದೇ ಪಕ್ಷ ಆಡಳಿತ ನಡೆಸಿದರೂ ಚಕ್ಮಾ ಬುಡಕಟ್ಟಿನವರಿಗೆ ಸಚಿವ ಸ್ಥಾನ ನೀಡಿರಲಿಲ್ಲ. ಇದೀಗ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಬಿಜೆಪಿ ಬುಡಕಟ್ಟು ಸಮುದಾಯದ ಮಹಿಳೆಯ ಸಚಿವ ಸ್ಥಾನ ನೀಡಿರುವುದು ಇತಿಹಾಸ ಸೃಷ್ಟಿಸಿದೆ.

ಪ್ರಥಮ ಬಾರಿಗೆ ಪಚರ್ತಲ ವಿಧಾನಸಭೆ ಕ್ಷೇತ್ರದಿಂದ ಶಾಸಕಿಯಾಗಿ ಆಯ್ಕೆಯಾಗಿರುವ ಸಂತಾನಾ ಚಕ್ಮಾ ಇದೀಗ ಸಚಿವರಾಗಿ ಅಧಿಕಾರ ಸ್ವೀಕರಿಸಿದ್ದಾರೆ. ಈ ಮೂಲಕ ಚಕ್ಮಾ ಬುಡಕಟ್ಟು ಸಮುದಾಯದಲ್ಲಿ ಮಹಿಳೆಯೊಬ್ಬರು ಪ್ರಥಮ ಬಾರಿಗೆ ಸಚಿವರಾಗಿ ಆಯ್ಕೆಯಾದ ಇತಿಹಾಸ ಸೃಷ್ಟಿಸಿದ್ದಾರೆ.

32 ವರ್ಷ ವಯಸ್ಸಿನ ಸಂತನಾ ಸಮಾಜ ಸೇವೆ ಪದವಿ ಪಡೆದಿದ್ದಾರೆ. 2015ರಲ್ಲಿ ಬಿಜೆಪಿ ಜೊತೆ ಕೈ ಜೋಡಿಸಿರುವ ಅವರು ತ್ರಿಪುರಾ ಚುನಾವಣೆಗೆ ನಡೆದ ಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು. ಇವರ ಸಾಮಾಜಿಕ ಕಾಳಜಿ, ಸೇವೆ ಮತ್ತು ಯುವಕರನ್ನು ಬೆಂಬಲಿಸುವ ಪ್ರಧಾನಿ ಮೋದಿ ಅವರು ಸಚಿವ ಸ್ಥಾನ ನೀಡುವ ಮೂಲಕ ಇತಿಹಾಸ ಸೃಷ್ಟಿಸಿದ್ದಾರೆ.  ಶುಕ್ರವಾರ ತ್ರಿಪುರಾ ಮುಖ್ಯಮಂತ್ರಿಯಾಗಿ ಬಿಪ್ಲಬ್ ದೇಬ್ ಸೇರಿ 12 ಜನರು ಸಚಿವರಾಗಿ ಅಧಿಕಾರ ಸ್ವೀಕರಿಸಿದ್ದರು.

  • Share On Facebook
  • Tweet It


- Advertisement -


Trending Now
ಶಾಸಕರು ಮುಂದಿನ ಅವಧಿಗೆ ಮಾಡಲೇಬೇಕಾದ ಕಾರ್ಯಗಳು ಇವು!!
Tulunadu News March 29, 2023
ಲಿಂಕ್ ಮಾಡಿ ಎಂದರೆ ಕುಂಬಳಕಾಯಿ ಕಳ್ಳರಂತೆ ವರ್ತಿಸುವುದು ಯಾಕೆ?
Tulunadu News March 27, 2023
Leave A Reply

  • Recent Posts

    • ಶಾಸಕರು ಮುಂದಿನ ಅವಧಿಗೆ ಮಾಡಲೇಬೇಕಾದ ಕಾರ್ಯಗಳು ಇವು!!
    • ಲಿಂಕ್ ಮಾಡಿ ಎಂದರೆ ಕುಂಬಳಕಾಯಿ ಕಳ್ಳರಂತೆ ವರ್ತಿಸುವುದು ಯಾಕೆ?
    • ಪೌರ ಕಾರ್ಮಿಕರು ಕೆಲಸಕ್ಕೆ ಮರಳಿದ್ದು ಹೇಗೆ?
    • ರಾಹುಲ್ ಮುತ್ತಜ್ಜ ಮಾಡಿದ್ದ ಕಾನೂನು ಇವರಿಗೆ ಮುಳುವಾಯಿತು!
    • ಎಲ್ಲಾ ಗಾಂಧಿಗಳು ಮಹಾತ್ಮ ಗಾಂಧಿಯಂತಲ್ಲ ಎಂದು ರಾಹುಲ್ ಗೊತ್ತಿರಬೇಕಿತ್ತು!!
    • ಉಚಿತ ಖಚಿತ ಎನ್ನುವುದು ಯಾವಾಗಲೂ ಡೌಟ್ ಆಯಿತಾ?
    • ಕಸ ಸಂಗ್ರಹಣೆಯ ಹಿಂದೆ ಕಾಂಗ್ರೆಸ್ ರಾಜಕೀಯ ವಾಸನೆ!!
    • ಯಾರು ಯಾವ ಕ್ಷೇತ್ರದಲ್ಲಿ ಎಂದು ಯಾರಿಗೂ ಗೊತ್ತಿಲ್ಲ!!
    • ಗುಳಿಗನಿಗೆ ತಮಾಷೆ ಮಾಡಿ ಬದುಕುವುದುಂಟೆ!!
    • ನಾವು ಅಂಡರ್ ಸ್ಟ್ಯಾಂಡಿಂಗ್ ಮಾಡಿಕೊಂಡಿದ್ದೇವು ಎಂದು ಒಪ್ಪಿದ ಎಸ್ ಡಿಪಿಐ!!
  • Popular Posts

    • 1
      ಶಾಸಕರು ಮುಂದಿನ ಅವಧಿಗೆ ಮಾಡಲೇಬೇಕಾದ ಕಾರ್ಯಗಳು ಇವು!!
    • 2
      ಲಿಂಕ್ ಮಾಡಿ ಎಂದರೆ ಕುಂಬಳಕಾಯಿ ಕಳ್ಳರಂತೆ ವರ್ತಿಸುವುದು ಯಾಕೆ?
    • 3
      ಪೌರ ಕಾರ್ಮಿಕರು ಕೆಲಸಕ್ಕೆ ಮರಳಿದ್ದು ಹೇಗೆ?
    • 4
      ರಾಹುಲ್ ಮುತ್ತಜ್ಜ ಮಾಡಿದ್ದ ಕಾನೂನು ಇವರಿಗೆ ಮುಳುವಾಯಿತು!
    • 5
      ಎಲ್ಲಾ ಗಾಂಧಿಗಳು ಮಹಾತ್ಮ ಗಾಂಧಿಯಂತಲ್ಲ ಎಂದು ರಾಹುಲ್ ಗೊತ್ತಿರಬೇಕಿತ್ತು!!


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search