• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ತ್ರಿಪುರ ಚುನಾವಣೆಯಲ್ಲಿ ಸೋತ ಬಳಿಕ ಎಚ್ಚೆತ್ತುಕೊಂಡ ಸಿಪಿಎಂ, ಕೊಲೆ ಪ್ರಕರಣದಲ್ಲಿ ನಾಲ್ವರು ಕಾರ್ಯಕರ್ತರ ಅಮಾನತು!

TNN Correspondent Posted On March 11, 2018


  • Share On Facebook
  • Tweet It

ತಿರುವನಂತಪುರ: ನೈತಿಕವಾಗಿ ಅಧಃಪತನಕ್ಕಿಳಿದ ಪಕ್ಷ ಒಂದೇ ಒಂದು ಸೋಲಿನಿಂದ ಹೇಗೆ ಪಾಠ ಕಲಿಯುತ್ತದೆ ಹಾಗೂ ಕಲಿತ ಹಾಗೆ ನಾಟಕ ಮಾಡುತ್ತದೆ ಎಂಬುದು ತ್ರಿಪುರ ಚುನಾವಣೆ ಸೋಲಿನ ಬಳಿಕ ಸಿಪಿಎಂ ಮುಂದಡಿಯಿಡುತ್ತಿರುವ ಹೆಜ್ಜೆಗಳು ಸಾಬೀತುಪಡಿಸಿವೆ.

ಹೌದು, ಎರಡು ದಶಕದ ಬಳಿಕ ತ್ರಿಪುರದಲ್ಲಿ ಸೋತು ಸುಣ್ಣವಾಗಿರುವ, ಕೇರಳದಲ್ಲಿ ಮಾತ್ರ ಅಸ್ತಿತ್ವ ಉಳಿಸಿಕೊಂಡಿರುವ ಸಿಪಿಎಂ, ಈಗ ಎಚ್ಚೆತ್ತುಕೊಂಡಿದೆ.

ಕಳೆದ ಫೆಬ್ರವರಿ 12ರಂದು ಕೇರಳದಲ್ಲಿ ಕಾಂಗ್ರೆಸ್ ಯುವಕ ಮುಖಂಡ ಶೌಹಿಬ್ ಎಂಬಾತನ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಿಪಿಎಂ ತನ್ನ ಪಕ್ಷದ ನಾಲ್ವರು ಕಾರ್ಯಕರ್ತರನ್ನು ಅಮಾನತುಗೊಳಿಸಿದೆ.

ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಹಾಗೂ ರಾಜ್ಯ ಪ್ರಧಾನ ಕಾರ್ಯದರ್ಶಿ ಕೊಡಿಯೇರಿ ಬಾಲಕೃಷ್ಣನ್ ನೇತೃತ್ವದಲ್ಲಿ ನಡೆಸಿದ ಸಭೆಯಲ್ಲಿ ಸಿಪಿಎಂ ಈ ತೀರ್ಮಾನ ಕೈಗೊಂಡಿದೆ. ಪಕ್ಷದ ಎಂ.ವಿ.ಆಕಾಶ್, ಟಿ.ಕೆ.ಅಸ್ಕರ್, ಕೆ.ಅಖಿಲ್ ಮತ್ತು ಸಿ.ಎಸ್.ದೀಪಚಾಂದ್ ಎಂಬುವವರನ್ನು ಅಮಾನತುಗೊಳಿಸಿದೆ.

ಕೊಲೆ ಪ್ರಕರಣದಲ್ಲಿ ಸಿಪಿಎಂ ಕಾರ್ಯಕರ್ತರ ಹೆಸರು ಕೇಳಿಬಂದ ಹಿನ್ನೆಲೆಯಲ್ಲಿ ನಾಲ್ವರನ್ನೂ ಅಮಾನತುಗೊಳಿಸಲಾಗಿದೆ. ಒಂದು ವೇಳೆ ಅಪರಾಧದಲ್ಲಿ ಭಾಗಿಯಾಗಿರುವುದು ಸಾಬೀತಾದರೆ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಸಿಪಿಎಂ ರಾಜ್ಯ ಕಾರ್ಯದರ್ಶಿ ಕೊಡಿಯೇರಿ ಬಾಲಕೃಷ್ಣ ತಿಳಿಸಿದ್ದಾರೆ.

ಮೊದಲಿನಿಂದಲೂ ಕೇರಳದಲ್ಲಿ ಹಿಂದೂಗಳು, ಬಿಜೆಪಿ, ಆರೆಸ್ಸೆಸ್ ಕಾರ್ಯಕರ್ತರ ಹತ್ಯೆಯಲ್ಲಿ ಸಿಪಿಎಂ ಕಾರ್ಯಕರ್ತರ ಕೈವಾಡ ಇದೆ ಎಂಬ ಶಂಕೆಯಿದೆ. ಆದರೆ ಯಾವ ಕಾರ್ಯಕರ್ತರ ವಿರುದ್ಧವೂ ಸಿಪಿಎಂ ಕ್ರಮ ಕೈಗೊಂಡಿರಲಿಲ್ಲ. ಈಗ ತ್ರಿಪುರ ಚುನಾವಣೆಯಲ್ಲಿ ಹೀನಾಯವಾಗಿ ಸೋತ ಹಿನ್ನೆಲೆಯಲ್ಲಿ ಕೇರಳದಲ್ಲಾದರೂ ಅಸ್ತಿತ್ವ ಉಳಿಸಿಕೊಳ್ಳುವ ದಿಸೆಯಲ್ಲಿ ಈ ಕ್ರಮ ಕೈಗೊಂಡಿದೆ ಎಂದು ತಿಳಿದುಬಂದಿದೆ.

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • 4
      ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • 5
      ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search