• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ತ್ರಿವಳಿ ತಲಾಖ್ ಆಯ್ತು, ಈಗ ಬಹುಪತ್ನಿತ್ವ ಕೊನೆಗಾಣಿಸಲು ಸುಪ್ರೀಂ ಮೆಟ್ಟಿಲೇರಿದ ಮುಸ್ಲಿಂ ಮಹಿಳೆಯರು!

TNN Correspondent Posted On March 11, 2018
0


0
Shares
  • Share On Facebook
  • Tweet It

ದೆಹಲಿ: ತ್ರಿವಳಿ ತಲಾಖ್ ವಿರುದ್ಧ ಲಕ್ಷಾಂತರ ಮಹಿಳೆಯರು ಹೋರಾಡಿದ ಫಲವಾಗಿ ತ್ರಿವಳಿ ತಲಾಖ್ ನಿಷೇಧಿಸಿ ಸುಪ್ರೀಂ ಕೋರ್ಟ್ ಆದೇಶ ಹೊರಡಿಸಿದ ಬಳಿಕ, ಈ ಅನಿಷ್ಠ ಪದ್ಧತಿ ವಿರುದ್ಧ ಕಾನೂನು ರಚಿಸಲು ಮುಂದಾಗಿದೆ.

ತ್ರಿವಳಿ ತಲಾಖ್ ವಿರುದ್ಧ ಮುಸ್ಲಿಂ ಮಹಿಳೆಯರಿಗೆ ಸಿಕ್ಕ ನ್ಯಾಯ ಹಾಗೂ ಅಭೂತಪೂರ್ವ ಗೆಲುವಿನ ಬಳಿಕ ಮತ್ತೊಂದು ದಿಟ್ಟ ನಿರ್ಧಾರ ಕೈಗೊಂಡಿರುವ ಮುಸ್ಲಿಂ ಮಹಿಳೆಯರು ಈಗ ಇಸ್ಲಾಮಿನಲ್ಲಿ ಅಸ್ತಿತ್ವದಲ್ಲಿರುವ ಬಹುಪತ್ನಿತ್ವ ಪದ್ಧತಿ ವಿರುದ್ಧ ಹೋರಾಡಲು ಮುಂದಾಗಿದ್ದಾರೆ.

ಹೌದು, ದೆಹಲಿ ಮೂಲದ ಹಸೀನಾ ಬೇಗಂ ಹಾಗೂ ಕಾಸಿಂಬಿ (ಹೆಸರು ಬದಲಾಯಿಸಲಾಗಿದೆ) ಎಂಬ ಇಬ್ಬರು ಮಹಿಳೆಯರು ಬಹುಪತ್ನಿತ್ವ ಪದ್ಧತಿ ನಿಷೇಧಿಸಬೇಕು ಎಂದು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ. ಆ ಮೂಲಕ ಇವರು ಬಹುಪತ್ನಿತ್ವ ಪದ್ಧತಿ ವಿರುದ್ಧ ಕೋರ್ಟ್ ಮೆಟ್ಟಿಲೇರಿದ ಮೊದಲ ಮಹಿಳೆಯರು ಎಂಬ ಕೀರ್ತಿಗೂ ಭಾಜನರಾಗಿದ್ದಾರೆ.

ಇಸ್ಲಾಂ ಕಾನೂನಿನಲ್ಲಿ ಒಬ್ಬ ಪುರುಷ ನಾಲ್ಕು ಮಹಿಳೆಯರನ್ನು ಮದುವೆಯಾಗುವ ಅವಕಾಶವಿದ್ದು, ಇದರಿಂದ ಮುಸ್ಲಿಂ ಮಹಿಳೆಯರಿಗೆ ತೊಂದರೆಯಾಗುತ್ತಿದೆ. ಹಾಗಾಗಿ ಈ ಅನಿಷ್ಠ ಪದ್ಧತಿ ನಿಷೇಧಿಸಬೇಕು ಎಂದು ಮನವಿಯಲ್ಲಿ ಉಲ್ಲೇಖಿಸಿದ್ದಾರೆ.

ಹಸೀನಾ ಬೇಗಂ 2008ರಲ್ಲಿ ವ್ಯಕ್ತಿಯೊಬ್ಬನನ್ನು ಮದುವೆಯಾಗಿದ್ದು, ಇಬ್ಬರು ಮಕ್ಕಳಿದ್ದಾರೆ. ಮದುವೆಯಾದ ಹೊಸತರಲ್ಲಿ ಚೆನ್ನಾಗಿಯೇ ಇದ್ದ ಗಂಡ, ಬಳಿಕ ವರದಕ್ಷಿಣೆ ತೆಗೆದುಕೊಂಡು ಬಾ ಸೇರಿ ಹಲವು ಕ್ಷುಲ್ಲಕ ಕಾರಣಕ್ಕಾಗಿ ಕಿರುಕುಳ ನೀಡಿದ್ದಾನೆ. ಕೊನೆಗೆ ಕಳೆದ ಜನವರಿಯಲ್ಲಿ ಬೇರೊಬ್ಬಳನ್ನು ಮದುವೆಯಾಗಿದ್ದಾನೆ ಎಂದು ತಿಳಿದುಬಂದಿದೆ. ಕಾಸಿಂಬಿ ಪರಿಸ್ಥಿತಿಯೂ ಇದೇ ಅಗಿದೆ. ಹಾಗಾಗಿ ಬಹುಪತ್ನಿತ್ವ ನಿಷೇಧಿಸುವಂತೆ ಸುಪ್ರೀಂ ಕೋರ್ಟ್ ಗೆ ಮನವಿ ಸಲ್ಲಿಸಿದ್ದಾರೆ.

ಒಟ್ಟಿನಲ್ಲಿ ಮುಸ್ಲಿಂ ಮಹಿಳೆಯರ ಜೀವನ ನಿರ್ವಹಣೆಗೆ, ನೆಮ್ಮದಿಯ ಜೀವನಕ್ಕೆ ಕಂಟಕವಾಗಿದ್ದ ತ್ರಿವಳಿ ತಲಾಖ್ ರದ್ದುಗೊಳಿಸಿದ ಬಳಿಕ ಅವರಲ್ಲೊಂದು ಆಶಾಭಾವನೆ ಮೂಡಿದ್ದು, ಈಗ ಬಹುಪತ್ನಿತ್ವವನ್ನೂ ನಿಷೇಧಿಸಿದರೆ ಮಹಿಳೆಯರ ನೆಮ್ಮದಿ ಜೀವನಕ್ಕೆ ರಹದಾರಿಯಾಗಲಿದೆ ಎಂಬ ಮಾತುಗಳು ಕೇಳಿಬರುತ್ತಿವೆ.

* ಸಾಂದರ್ಭಿಕ ಚಿತ್ರಗಳು

ಚಿತ್ರಕೃಪೆ: ಇಂಟರ್ನೆಟ್

0
Shares
  • Share On Facebook
  • Tweet It




Trending Now
ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
Tulunadu News March 11, 2026
ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
Tulunadu News March 11, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
  • Popular Posts

    • 1
      ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • 2
      ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • 3
      ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!

  • Privacy Policy
  • Contact
© Tulunadu Infomedia.

Press enter/return to begin your search