• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ತ್ರಿವಳಿ ತಲಾಖ್ ಆಯ್ತು, ಈಗ ಬಹುಪತ್ನಿತ್ವ ಕೊನೆಗಾಣಿಸಲು ಸುಪ್ರೀಂ ಮೆಟ್ಟಿಲೇರಿದ ಮುಸ್ಲಿಂ ಮಹಿಳೆಯರು!

TNN Correspondent Posted On March 11, 2018
0


0
Shares
  • Share On Facebook
  • Tweet It

ದೆಹಲಿ: ತ್ರಿವಳಿ ತಲಾಖ್ ವಿರುದ್ಧ ಲಕ್ಷಾಂತರ ಮಹಿಳೆಯರು ಹೋರಾಡಿದ ಫಲವಾಗಿ ತ್ರಿವಳಿ ತಲಾಖ್ ನಿಷೇಧಿಸಿ ಸುಪ್ರೀಂ ಕೋರ್ಟ್ ಆದೇಶ ಹೊರಡಿಸಿದ ಬಳಿಕ, ಈ ಅನಿಷ್ಠ ಪದ್ಧತಿ ವಿರುದ್ಧ ಕಾನೂನು ರಚಿಸಲು ಮುಂದಾಗಿದೆ.

ತ್ರಿವಳಿ ತಲಾಖ್ ವಿರುದ್ಧ ಮುಸ್ಲಿಂ ಮಹಿಳೆಯರಿಗೆ ಸಿಕ್ಕ ನ್ಯಾಯ ಹಾಗೂ ಅಭೂತಪೂರ್ವ ಗೆಲುವಿನ ಬಳಿಕ ಮತ್ತೊಂದು ದಿಟ್ಟ ನಿರ್ಧಾರ ಕೈಗೊಂಡಿರುವ ಮುಸ್ಲಿಂ ಮಹಿಳೆಯರು ಈಗ ಇಸ್ಲಾಮಿನಲ್ಲಿ ಅಸ್ತಿತ್ವದಲ್ಲಿರುವ ಬಹುಪತ್ನಿತ್ವ ಪದ್ಧತಿ ವಿರುದ್ಧ ಹೋರಾಡಲು ಮುಂದಾಗಿದ್ದಾರೆ.

ಹೌದು, ದೆಹಲಿ ಮೂಲದ ಹಸೀನಾ ಬೇಗಂ ಹಾಗೂ ಕಾಸಿಂಬಿ (ಹೆಸರು ಬದಲಾಯಿಸಲಾಗಿದೆ) ಎಂಬ ಇಬ್ಬರು ಮಹಿಳೆಯರು ಬಹುಪತ್ನಿತ್ವ ಪದ್ಧತಿ ನಿಷೇಧಿಸಬೇಕು ಎಂದು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ. ಆ ಮೂಲಕ ಇವರು ಬಹುಪತ್ನಿತ್ವ ಪದ್ಧತಿ ವಿರುದ್ಧ ಕೋರ್ಟ್ ಮೆಟ್ಟಿಲೇರಿದ ಮೊದಲ ಮಹಿಳೆಯರು ಎಂಬ ಕೀರ್ತಿಗೂ ಭಾಜನರಾಗಿದ್ದಾರೆ.

ಇಸ್ಲಾಂ ಕಾನೂನಿನಲ್ಲಿ ಒಬ್ಬ ಪುರುಷ ನಾಲ್ಕು ಮಹಿಳೆಯರನ್ನು ಮದುವೆಯಾಗುವ ಅವಕಾಶವಿದ್ದು, ಇದರಿಂದ ಮುಸ್ಲಿಂ ಮಹಿಳೆಯರಿಗೆ ತೊಂದರೆಯಾಗುತ್ತಿದೆ. ಹಾಗಾಗಿ ಈ ಅನಿಷ್ಠ ಪದ್ಧತಿ ನಿಷೇಧಿಸಬೇಕು ಎಂದು ಮನವಿಯಲ್ಲಿ ಉಲ್ಲೇಖಿಸಿದ್ದಾರೆ.

ಹಸೀನಾ ಬೇಗಂ 2008ರಲ್ಲಿ ವ್ಯಕ್ತಿಯೊಬ್ಬನನ್ನು ಮದುವೆಯಾಗಿದ್ದು, ಇಬ್ಬರು ಮಕ್ಕಳಿದ್ದಾರೆ. ಮದುವೆಯಾದ ಹೊಸತರಲ್ಲಿ ಚೆನ್ನಾಗಿಯೇ ಇದ್ದ ಗಂಡ, ಬಳಿಕ ವರದಕ್ಷಿಣೆ ತೆಗೆದುಕೊಂಡು ಬಾ ಸೇರಿ ಹಲವು ಕ್ಷುಲ್ಲಕ ಕಾರಣಕ್ಕಾಗಿ ಕಿರುಕುಳ ನೀಡಿದ್ದಾನೆ. ಕೊನೆಗೆ ಕಳೆದ ಜನವರಿಯಲ್ಲಿ ಬೇರೊಬ್ಬಳನ್ನು ಮದುವೆಯಾಗಿದ್ದಾನೆ ಎಂದು ತಿಳಿದುಬಂದಿದೆ. ಕಾಸಿಂಬಿ ಪರಿಸ್ಥಿತಿಯೂ ಇದೇ ಅಗಿದೆ. ಹಾಗಾಗಿ ಬಹುಪತ್ನಿತ್ವ ನಿಷೇಧಿಸುವಂತೆ ಸುಪ್ರೀಂ ಕೋರ್ಟ್ ಗೆ ಮನವಿ ಸಲ್ಲಿಸಿದ್ದಾರೆ.

ಒಟ್ಟಿನಲ್ಲಿ ಮುಸ್ಲಿಂ ಮಹಿಳೆಯರ ಜೀವನ ನಿರ್ವಹಣೆಗೆ, ನೆಮ್ಮದಿಯ ಜೀವನಕ್ಕೆ ಕಂಟಕವಾಗಿದ್ದ ತ್ರಿವಳಿ ತಲಾಖ್ ರದ್ದುಗೊಳಿಸಿದ ಬಳಿಕ ಅವರಲ್ಲೊಂದು ಆಶಾಭಾವನೆ ಮೂಡಿದ್ದು, ಈಗ ಬಹುಪತ್ನಿತ್ವವನ್ನೂ ನಿಷೇಧಿಸಿದರೆ ಮಹಿಳೆಯರ ನೆಮ್ಮದಿ ಜೀವನಕ್ಕೆ ರಹದಾರಿಯಾಗಲಿದೆ ಎಂಬ ಮಾತುಗಳು ಕೇಳಿಬರುತ್ತಿವೆ.

* ಸಾಂದರ್ಭಿಕ ಚಿತ್ರಗಳು

ಚಿತ್ರಕೃಪೆ: ಇಂಟರ್ನೆಟ್

0
Shares
  • Share On Facebook
  • Tweet It




Trending Now
ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
Tulunadu News December 9, 2025
ಕುಡುಕರ ಲಿವರ್ ಚಿಕಿತ್ಸೆಗೆ ಸರಕಾರ ಹಣ ನೀಡಲಿ ಎಂದ ಶಾಸಕರು!
Tulunadu News December 9, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
    • ಕುಡುಕರ ಲಿವರ್ ಚಿಕಿತ್ಸೆಗೆ ಸರಕಾರ ಹಣ ನೀಡಲಿ ಎಂದ ಶಾಸಕರು!
    • ಸ್ಮೃತಿ ಹೊಸ ಇನ್ಸಿಂಗ್ಸ್ ಆರಂಭ!
    • ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
    • ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
  • Popular Posts

    • 1
      ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
    • 2
      ಕುಡುಕರ ಲಿವರ್ ಚಿಕಿತ್ಸೆಗೆ ಸರಕಾರ ಹಣ ನೀಡಲಿ ಎಂದ ಶಾಸಕರು!
    • 3
      ಸ್ಮೃತಿ ಹೊಸ ಇನ್ಸಿಂಗ್ಸ್ ಆರಂಭ!

  • Privacy Policy
  • Contact
© Tulunadu Infomedia.

Press enter/return to begin your search