• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಸ್ಲಂ ಜನರಿಗೆ ಮತ್ತೇರಿಸುವ ಸಮೋಸಾ ನೀಡಿ, ಕ್ರಿಶ್ಚಿಯನ್ ಗೆ ಮತಾಂತರಕ್ಕೆ ಒತ್ತಾಯಿಸಿ ಸಿಕ್ಕಿಬಿದ್ದ ಮಿಷಿನರಿಗಳು

TNN Correspondent Posted On March 11, 2018


  • Share On Facebook
  • Tweet It

ಆಗ್ರಾ: ದೇಶದಲ್ಲಿ ಬಡವರು, ಆದಿವಾಸಿಗಳು, ಮುಗ್ದರನ್ನು ಗುರಿಯಾಗಿಟ್ಟುಕೊಂಡು ತಮ್ಮ ಸ್ವಾರ್ಥ ಸಾಧಿಸಿ, ಮತಾಂತರ ಮಾಡುವ ಕ್ರಿಶ್ಚಿಯನ್ ಮಿಷಿನರಿಗಳ ಯತ್ನ ಮುಂದುವರಿದಿದೆ. ಉತ್ತರ ಪ್ರದೇಶದ ಆಗ್ರಾ ಜಿಲ್ಲೆಯ ಜಗದೀಶ್ ಪುರದ ವಿಕಾಸ್ ಕಾಲೋನಿಯ ಸ್ಲಂ ಪ್ರದೇಶವೊಂದರಲ್ಲಿ ಮಕ್ಕಳಿಗೆ, ಮಹಿಳೆಯರಿಗೆ ಸಮೋಸ ನೀಡಿ ತಮ್ಮ ಮೋಹ ಪಾಶಕ್ಕೆ ಸಿಲುಕಿಸಿ, ಮತಾಂತರಕ್ಕೆ ಯತ್ನಿಸಿ, ವಿಫಲರಾಗಿದ್ದಾರೆ.

ವಿಕಾಸ್ ಕಾಲೋನಿಯಲ್ಲಿರುವ ಸ್ಲಂ ಪ್ರದೇಶಕ್ಕೆ ಪ್ರವೇಶಿಸಿದ ಮಿಷಿನರಿಗಳು ಮುಗ್ದ ಮಕ್ಕಳು, ಮಹಿಳೆಯರಿಗೆ ಮೊದಲು ಸಮೋಸಾ ನೀಡಿ ಸಂವಹನ ನಡೆಸಿದ್ದಾರೆ. ನಂತರ ನಿಧಾನವಾಗಿ ತಮ್ಮ ಆಮಿಷವನ್ನು ಮುಂದುವರಿಸಿದ್ದು, ನಿಮ್ಮ ಮಕ್ಕಳಿಗೆ ಶಾಲೆ ಕಲಿಸುತ್ತೇವೆ, ಬಟ್ಟೆ ನೀಡುತ್ತೇವೆ, ಮನೆ ನೀಡುತ್ತೇವೆ ಎಂದು ಮಹಿಳೆಯರಿಗೆ ಆಮಿಷ ಒಡ್ಡಿದ್ದಾರೆ. ಈ ವಿಷಯ ತಿಳಿದ ಪೊಲೀಸರು ಈ ಕುರಿತು ಮಾಹಿತಿ ಸಂಗ್ರಹಿಸಿ ಮತಾಂತರವಾಗುವುದನ್ನು ತಡೆದಿದ್ದಾರೆ.

ಈ ಕುರಿತು ಮಾಹಿತಿ ನೀಡಿರುವ ಸ್ಲಂ ನಿವಾಸಿ ಮಾಯಾ ಎಂಬುವವರು ‘ಕ್ರಿಶ್ಚಿಯನ್ ಫಾದರ್ ಗಳು ಕಾಲೋನಿಗೆ ಬಂದು ನಮಗೆ ಸಮೋಸ ನೀಡಿದರು. ನಂತರ ನಿಮ್ಮ ಮಕ್ಕಳಿಗೆ ಶಾಲೆ ಕಲಿಸುತ್ತೇವೆ, ಬಟ್ಟೆ ನೀಡುತ್ತೇವೆ. ಸಮೋಸ ನೀಡುತ್ತೇವೆ. ಮತಾಂತರವಾಗಿ ಎಂದು ಹೇಳಿದ್ರು. ಇದನ್ನು ನೋಡಿದ ನಿವಾಸಿಯೊಬ್ಬರು ಖಂಡಿಸಿ, ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಅಲ್ಲದೇ ಕ್ರಿಶ್ಚಿಯನ್ ಪಾದ್ರಿಗಳು ನೀಡಿದ ಸಮೋಸಾ ತಿಂದ ನಂತರ ನನ್ನ ಮಗಳಿಗೆ ತಲೆ ಸುತ್ತು ಬಂದಿತ್ತು ಎಂದು ಸ್ಲಂ ನಿವಾಸಿ ಮಾಯಾ ತಿಳಿಸಿದ್ದಾರೆ. ಈ ಕುರಿತು ಸ್ಥಳೀಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು ಪ್ರಕರಣ ದಾಖಲಾಗಿದೆ.

ಈ ಕುರಿತು ಪ್ರತಿಕ್ರಿಯೆ ನೀಡಿರುವ ಆಗ್ರಾ ನಗರ ಎಸ್ ಪಿ ‘ಸ್ಲಂ ಗೆ ಭೇಟಿ ನೀಡಿದ ಸಂಘಟನೆಯವರ ವಿಚಾರಣೆ ನಡೆಸಿದ್ದು, ಮಹಿಳಾ ದಿನಾಚರಣೆ ನಿಮಿತ್ತ ಜಾಗೃತಿ ಮೂಡಿಸಲು ಹೋಗಿದ್ದಾಗಿ ಹೇಳಿದ್ದಾರೆ. ಆದರೆ ಸ್ಲಂ ಮಹಿಳೆ ಹೇಳುವ ಮಾತುಗಳಿಗೆ ಸಂಘಟನೆಗಳವರ ಮಾತುಗಳ ಮಧ್ಯೆ ಅನುಮಾನ ಮೂಡಿಸುತ್ತಿದ್ದು, ಈ ಕುರಿತು ತನಿಖೆ ನಡೆಸಲಾಗುವುದು ಎಂದು ತಿಳಿಸಿದ್ದಾರೆ.

  • Share On Facebook
  • Tweet It


- Advertisement -


Trending Now
ಮರಳು ಕದಿಯಲು ಹೋದ ದೋಣಿ ಮಗುಚಿ ಸತ್ತವನ ಕಥೆ ಏನು?
Tulunadu News July 5, 2022
ನುಪೂರ್ ಕ್ಷಮೆ ಕೇಳಬೇಕು ಎಂದ ನ್ಯಾಯಾಧೀಶರ ಹೇಳಿಕೆ ಮತ್ತು ವಾಸ್ತವ!
Tulunadu News July 4, 2022
Leave A Reply

  • Recent Posts

    • ಮರಳು ಕದಿಯಲು ಹೋದ ದೋಣಿ ಮಗುಚಿ ಸತ್ತವನ ಕಥೆ ಏನು?
    • ನುಪೂರ್ ಕ್ಷಮೆ ಕೇಳಬೇಕು ಎಂದ ನ್ಯಾಯಾಧೀಶರ ಹೇಳಿಕೆ ಮತ್ತು ವಾಸ್ತವ!
    • ಮೇಲಿನವರು ಏನೂ ಹೇಳಬಹುದು, ಅನುಷ್ಟಾನ ಆಗಬೇಕಲ್ಲ!
    • ಮಳೆ ಕಥೆ ಅಲ್ಲ ವ್ಯಥೆ! ಅದಕ್ಕಿದೆ ಇಷ್ಟು ಕಾರಣಗಳು?
    • ಮಾಣಿಪ್ಪಾಡಿ ವರದಿಯ 4 ಲಕ್ಷ ಕೋಟಿಯಲ್ಲಿ ಬಿಜೆಪಿಗೆ ಸಿಕ್ಕಿದ ಸೊನ್ನೆ ಎಷ್ಟು?
    • ಕನ್ನಯ್ಯ ಹತ್ಯೆ ಮಾಡಿದವರಿಗೆ ಮೂರೇ ತಿಂಗಳಲ್ಲಿ ಗಲ್ಲಾಗಬಹುದಾ?
    • ರಾಹುಲ್ ಕಚೇರಿ ಧ್ವಂಸವಾದರೂ ಕಾಂಗ್ರೆಸ್ ಪ್ರತಿಭಟಿಸಲಿಲ್ಲ, ಯಾಕೆ?
    • ಚಕ್ರತೀರ್ಥ ಹೆಗಲ ಮೇಲೆ ಕೋವಿ ಇಟ್ಟು ಹೊಡೆಯಲು ಹೊರಟಿದ್ದು ಯಾರನ್ನಾ?
    • ರೋಹಿತ್ ಸನ್ಮಾನದಿಂದ ಎಡಚರರು ವಿಲವಿಲ!!
    • ರಾಜಕೀಯ ಆತ್ಮಹತ್ಯೆ ಎಂದರೆ ಏನು ಉದ್ಧವ್!
  • Popular Posts

    • 1
      ಮರಳು ಕದಿಯಲು ಹೋದ ದೋಣಿ ಮಗುಚಿ ಸತ್ತವನ ಕಥೆ ಏನು?
    • 2
      ನುಪೂರ್ ಕ್ಷಮೆ ಕೇಳಬೇಕು ಎಂದ ನ್ಯಾಯಾಧೀಶರ ಹೇಳಿಕೆ ಮತ್ತು ವಾಸ್ತವ!
    • 3
      ಮೇಲಿನವರು ಏನೂ ಹೇಳಬಹುದು, ಅನುಷ್ಟಾನ ಆಗಬೇಕಲ್ಲ!
    • 4
      ಮಳೆ ಕಥೆ ಅಲ್ಲ ವ್ಯಥೆ! ಅದಕ್ಕಿದೆ ಇಷ್ಟು ಕಾರಣಗಳು?
    • 5
      ಮಾಣಿಪ್ಪಾಡಿ ವರದಿಯ 4 ಲಕ್ಷ ಕೋಟಿಯಲ್ಲಿ ಬಿಜೆಪಿಗೆ ಸಿಕ್ಕಿದ ಸೊನ್ನೆ ಎಷ್ಟು?


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search