• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಸ್ಲಂ ಜನರಿಗೆ ಮತ್ತೇರಿಸುವ ಸಮೋಸಾ ನೀಡಿ, ಕ್ರಿಶ್ಚಿಯನ್ ಗೆ ಮತಾಂತರಕ್ಕೆ ಒತ್ತಾಯಿಸಿ ಸಿಕ್ಕಿಬಿದ್ದ ಮಿಷಿನರಿಗಳು

TNN Correspondent Posted On March 11, 2018
0


0
Shares
  • Share On Facebook
  • Tweet It

ಆಗ್ರಾ: ದೇಶದಲ್ಲಿ ಬಡವರು, ಆದಿವಾಸಿಗಳು, ಮುಗ್ದರನ್ನು ಗುರಿಯಾಗಿಟ್ಟುಕೊಂಡು ತಮ್ಮ ಸ್ವಾರ್ಥ ಸಾಧಿಸಿ, ಮತಾಂತರ ಮಾಡುವ ಕ್ರಿಶ್ಚಿಯನ್ ಮಿಷಿನರಿಗಳ ಯತ್ನ ಮುಂದುವರಿದಿದೆ. ಉತ್ತರ ಪ್ರದೇಶದ ಆಗ್ರಾ ಜಿಲ್ಲೆಯ ಜಗದೀಶ್ ಪುರದ ವಿಕಾಸ್ ಕಾಲೋನಿಯ ಸ್ಲಂ ಪ್ರದೇಶವೊಂದರಲ್ಲಿ ಮಕ್ಕಳಿಗೆ, ಮಹಿಳೆಯರಿಗೆ ಸಮೋಸ ನೀಡಿ ತಮ್ಮ ಮೋಹ ಪಾಶಕ್ಕೆ ಸಿಲುಕಿಸಿ, ಮತಾಂತರಕ್ಕೆ ಯತ್ನಿಸಿ, ವಿಫಲರಾಗಿದ್ದಾರೆ.

ವಿಕಾಸ್ ಕಾಲೋನಿಯಲ್ಲಿರುವ ಸ್ಲಂ ಪ್ರದೇಶಕ್ಕೆ ಪ್ರವೇಶಿಸಿದ ಮಿಷಿನರಿಗಳು ಮುಗ್ದ ಮಕ್ಕಳು, ಮಹಿಳೆಯರಿಗೆ ಮೊದಲು ಸಮೋಸಾ ನೀಡಿ ಸಂವಹನ ನಡೆಸಿದ್ದಾರೆ. ನಂತರ ನಿಧಾನವಾಗಿ ತಮ್ಮ ಆಮಿಷವನ್ನು ಮುಂದುವರಿಸಿದ್ದು, ನಿಮ್ಮ ಮಕ್ಕಳಿಗೆ ಶಾಲೆ ಕಲಿಸುತ್ತೇವೆ, ಬಟ್ಟೆ ನೀಡುತ್ತೇವೆ, ಮನೆ ನೀಡುತ್ತೇವೆ ಎಂದು ಮಹಿಳೆಯರಿಗೆ ಆಮಿಷ ಒಡ್ಡಿದ್ದಾರೆ. ಈ ವಿಷಯ ತಿಳಿದ ಪೊಲೀಸರು ಈ ಕುರಿತು ಮಾಹಿತಿ ಸಂಗ್ರಹಿಸಿ ಮತಾಂತರವಾಗುವುದನ್ನು ತಡೆದಿದ್ದಾರೆ.

ಈ ಕುರಿತು ಮಾಹಿತಿ ನೀಡಿರುವ ಸ್ಲಂ ನಿವಾಸಿ ಮಾಯಾ ಎಂಬುವವರು ‘ಕ್ರಿಶ್ಚಿಯನ್ ಫಾದರ್ ಗಳು ಕಾಲೋನಿಗೆ ಬಂದು ನಮಗೆ ಸಮೋಸ ನೀಡಿದರು. ನಂತರ ನಿಮ್ಮ ಮಕ್ಕಳಿಗೆ ಶಾಲೆ ಕಲಿಸುತ್ತೇವೆ, ಬಟ್ಟೆ ನೀಡುತ್ತೇವೆ. ಸಮೋಸ ನೀಡುತ್ತೇವೆ. ಮತಾಂತರವಾಗಿ ಎಂದು ಹೇಳಿದ್ರು. ಇದನ್ನು ನೋಡಿದ ನಿವಾಸಿಯೊಬ್ಬರು ಖಂಡಿಸಿ, ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಅಲ್ಲದೇ ಕ್ರಿಶ್ಚಿಯನ್ ಪಾದ್ರಿಗಳು ನೀಡಿದ ಸಮೋಸಾ ತಿಂದ ನಂತರ ನನ್ನ ಮಗಳಿಗೆ ತಲೆ ಸುತ್ತು ಬಂದಿತ್ತು ಎಂದು ಸ್ಲಂ ನಿವಾಸಿ ಮಾಯಾ ತಿಳಿಸಿದ್ದಾರೆ. ಈ ಕುರಿತು ಸ್ಥಳೀಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು ಪ್ರಕರಣ ದಾಖಲಾಗಿದೆ.

ಈ ಕುರಿತು ಪ್ರತಿಕ್ರಿಯೆ ನೀಡಿರುವ ಆಗ್ರಾ ನಗರ ಎಸ್ ಪಿ ‘ಸ್ಲಂ ಗೆ ಭೇಟಿ ನೀಡಿದ ಸಂಘಟನೆಯವರ ವಿಚಾರಣೆ ನಡೆಸಿದ್ದು, ಮಹಿಳಾ ದಿನಾಚರಣೆ ನಿಮಿತ್ತ ಜಾಗೃತಿ ಮೂಡಿಸಲು ಹೋಗಿದ್ದಾಗಿ ಹೇಳಿದ್ದಾರೆ. ಆದರೆ ಸ್ಲಂ ಮಹಿಳೆ ಹೇಳುವ ಮಾತುಗಳಿಗೆ ಸಂಘಟನೆಗಳವರ ಮಾತುಗಳ ಮಧ್ಯೆ ಅನುಮಾನ ಮೂಡಿಸುತ್ತಿದ್ದು, ಈ ಕುರಿತು ತನಿಖೆ ನಡೆಸಲಾಗುವುದು ಎಂದು ತಿಳಿಸಿದ್ದಾರೆ.

0
Shares
  • Share On Facebook
  • Tweet It




Trending Now
ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
Tulunadu News April 7, 2026
ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
Tulunadu News April 7, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
  • Popular Posts

    • 1
      ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • 2
      ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • 3
      ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ

  • Privacy Policy
  • Contact
© Tulunadu Infomedia.

Press enter/return to begin your search