• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಸ್ಲಂ ಜನರಿಗೆ ಮತ್ತೇರಿಸುವ ಸಮೋಸಾ ನೀಡಿ, ಕ್ರಿಶ್ಚಿಯನ್ ಗೆ ಮತಾಂತರಕ್ಕೆ ಒತ್ತಾಯಿಸಿ ಸಿಕ್ಕಿಬಿದ್ದ ಮಿಷಿನರಿಗಳು

TNN Correspondent Posted On March 11, 2018
0


0
Shares
  • Share On Facebook
  • Tweet It

ಆಗ್ರಾ: ದೇಶದಲ್ಲಿ ಬಡವರು, ಆದಿವಾಸಿಗಳು, ಮುಗ್ದರನ್ನು ಗುರಿಯಾಗಿಟ್ಟುಕೊಂಡು ತಮ್ಮ ಸ್ವಾರ್ಥ ಸಾಧಿಸಿ, ಮತಾಂತರ ಮಾಡುವ ಕ್ರಿಶ್ಚಿಯನ್ ಮಿಷಿನರಿಗಳ ಯತ್ನ ಮುಂದುವರಿದಿದೆ. ಉತ್ತರ ಪ್ರದೇಶದ ಆಗ್ರಾ ಜಿಲ್ಲೆಯ ಜಗದೀಶ್ ಪುರದ ವಿಕಾಸ್ ಕಾಲೋನಿಯ ಸ್ಲಂ ಪ್ರದೇಶವೊಂದರಲ್ಲಿ ಮಕ್ಕಳಿಗೆ, ಮಹಿಳೆಯರಿಗೆ ಸಮೋಸ ನೀಡಿ ತಮ್ಮ ಮೋಹ ಪಾಶಕ್ಕೆ ಸಿಲುಕಿಸಿ, ಮತಾಂತರಕ್ಕೆ ಯತ್ನಿಸಿ, ವಿಫಲರಾಗಿದ್ದಾರೆ.

ವಿಕಾಸ್ ಕಾಲೋನಿಯಲ್ಲಿರುವ ಸ್ಲಂ ಪ್ರದೇಶಕ್ಕೆ ಪ್ರವೇಶಿಸಿದ ಮಿಷಿನರಿಗಳು ಮುಗ್ದ ಮಕ್ಕಳು, ಮಹಿಳೆಯರಿಗೆ ಮೊದಲು ಸಮೋಸಾ ನೀಡಿ ಸಂವಹನ ನಡೆಸಿದ್ದಾರೆ. ನಂತರ ನಿಧಾನವಾಗಿ ತಮ್ಮ ಆಮಿಷವನ್ನು ಮುಂದುವರಿಸಿದ್ದು, ನಿಮ್ಮ ಮಕ್ಕಳಿಗೆ ಶಾಲೆ ಕಲಿಸುತ್ತೇವೆ, ಬಟ್ಟೆ ನೀಡುತ್ತೇವೆ, ಮನೆ ನೀಡುತ್ತೇವೆ ಎಂದು ಮಹಿಳೆಯರಿಗೆ ಆಮಿಷ ಒಡ್ಡಿದ್ದಾರೆ. ಈ ವಿಷಯ ತಿಳಿದ ಪೊಲೀಸರು ಈ ಕುರಿತು ಮಾಹಿತಿ ಸಂಗ್ರಹಿಸಿ ಮತಾಂತರವಾಗುವುದನ್ನು ತಡೆದಿದ್ದಾರೆ.

ಈ ಕುರಿತು ಮಾಹಿತಿ ನೀಡಿರುವ ಸ್ಲಂ ನಿವಾಸಿ ಮಾಯಾ ಎಂಬುವವರು ‘ಕ್ರಿಶ್ಚಿಯನ್ ಫಾದರ್ ಗಳು ಕಾಲೋನಿಗೆ ಬಂದು ನಮಗೆ ಸಮೋಸ ನೀಡಿದರು. ನಂತರ ನಿಮ್ಮ ಮಕ್ಕಳಿಗೆ ಶಾಲೆ ಕಲಿಸುತ್ತೇವೆ, ಬಟ್ಟೆ ನೀಡುತ್ತೇವೆ. ಸಮೋಸ ನೀಡುತ್ತೇವೆ. ಮತಾಂತರವಾಗಿ ಎಂದು ಹೇಳಿದ್ರು. ಇದನ್ನು ನೋಡಿದ ನಿವಾಸಿಯೊಬ್ಬರು ಖಂಡಿಸಿ, ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಅಲ್ಲದೇ ಕ್ರಿಶ್ಚಿಯನ್ ಪಾದ್ರಿಗಳು ನೀಡಿದ ಸಮೋಸಾ ತಿಂದ ನಂತರ ನನ್ನ ಮಗಳಿಗೆ ತಲೆ ಸುತ್ತು ಬಂದಿತ್ತು ಎಂದು ಸ್ಲಂ ನಿವಾಸಿ ಮಾಯಾ ತಿಳಿಸಿದ್ದಾರೆ. ಈ ಕುರಿತು ಸ್ಥಳೀಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು ಪ್ರಕರಣ ದಾಖಲಾಗಿದೆ.

ಈ ಕುರಿತು ಪ್ರತಿಕ್ರಿಯೆ ನೀಡಿರುವ ಆಗ್ರಾ ನಗರ ಎಸ್ ಪಿ ‘ಸ್ಲಂ ಗೆ ಭೇಟಿ ನೀಡಿದ ಸಂಘಟನೆಯವರ ವಿಚಾರಣೆ ನಡೆಸಿದ್ದು, ಮಹಿಳಾ ದಿನಾಚರಣೆ ನಿಮಿತ್ತ ಜಾಗೃತಿ ಮೂಡಿಸಲು ಹೋಗಿದ್ದಾಗಿ ಹೇಳಿದ್ದಾರೆ. ಆದರೆ ಸ್ಲಂ ಮಹಿಳೆ ಹೇಳುವ ಮಾತುಗಳಿಗೆ ಸಂಘಟನೆಗಳವರ ಮಾತುಗಳ ಮಧ್ಯೆ ಅನುಮಾನ ಮೂಡಿಸುತ್ತಿದ್ದು, ಈ ಕುರಿತು ತನಿಖೆ ನಡೆಸಲಾಗುವುದು ಎಂದು ತಿಳಿಸಿದ್ದಾರೆ.

0
Shares
  • Share On Facebook
  • Tweet It




Trending Now
ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
Tulunadu News December 27, 2025
ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
Tulunadu News December 23, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!
    • ಭಕ್ತಿಗೀತೆ ಹಾಡುತ್ತಿದ್ದ ಗಾಯಕಿಯ ಮೇಲೆ ದರ್ಪ! ಜಾತ್ಯಾತೀತ ಗೀತೆ ಹಾಡಲು ಒತ್ತಾಯ!
    • ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 10 ಲಕ್ಷ ನೀಡಿ - ಸರಕಾರಕ್ಕೆ ಶಾಸಕ ಆಗ್ರಹ!
    • ವಿಡಿಯೋ ಕಾಲ್ ನಲ್ಲಿ ನಿಶ್ಚಿತಾರ್ಥ-ಎಲ್ ಇಡಿ ಸ್ಕ್ರೀನ್ ಗೆ ಆರತಿ!
    • ಅಜಾನ್ ಚರ್ಚೆಯ ಸಂದರ್ಭದಲ್ಲಿ ದೀಪಾವಳಿ ಪಟಾಕಿ ವಿಷಯ ಎತ್ತಿದ ಸಚಿವ!
  • Popular Posts

    • 1
      ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • 2
      ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • 3
      ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • 4
      ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್

  • Privacy Policy
  • Contact
© Tulunadu Infomedia.

Press enter/return to begin your search