• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಮೋದಿ ವಿರೋಧಿಗಳೇ ಕೇಳಿ, ನೋಟ್ ಬ್ಯಾನ್, ಜಿಎಸ್ಟಿಯಿಂದ ಭಾರತ ಏಳಿಗೆಯ ಹಾದಿ ಹಿಡಿದಿದೆ!

TNN Correspondent Posted On March 11, 2018


  • Share On Facebook
  • Tweet It

ವಾಷಿಂಗ್ಟನ್: ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ನೋಟ್ ಬ್ಯಾನ್ ನಿಷೇಧಿಸುತ್ತಲೇ, ಅಯ್ಯೋ ದೇಶದ ಜನರೆಲ್ಲ ಬ್ಯಾಂಕ್ ಎದುರು ನಿಂತುಕೊಳ್ಳುವಂತಾಯಿತು, ಇದರಿಂದ ಯಾವುದೇ ಪ್ರಯೋಜನವಾಗಲಿಲ್ಲ ಎಂದು ಬೊಬ್ಬೆ ಹಾಕಿದರು. ಅತ್ತ ತೆರಿಗೆ ಸುಧಾರಣೆಗಾಗಿ ಸರಕು ಮತ್ತು ಸೇವಾ ತೆರಿಗೆ ಜಾರಿಗೊಳಿಸುತ್ತಲೇ, ಅಯ್ಯೋ ಭಾರತದ ಆರ್ಥಿಕ ಸ್ಥಿತಿಯ ಅಂತ್ಯದ ಆರಂಭವಾಯಿತು, ನೋಡಿ ಜಿಡಿಪಿ ಕುಸಿಯಿತು ಎಂದು ಬೊಬ್ಬೆ ಹಾಕಿದರು ಮೋದಿ ವಿರೋಧಿಗಳು.

ಆದರೆ ನೋಟ್ ಬ್ಯಾನ್ ಹಾಗೂ ಸರಕು ಮತ್ತು ಸೇವಾ ತೆರಿಗೆ ಜಾರಿಯಾದ ಈ ಅವಧಿಯಲ್ಲಿ ಭಾರತ ಪ್ರಗತಿಯ ಹಾದಿಯಲ್ಲಿ ಎಂದು ಅಂತಾರಾಷ್ಟ್ರೀಯ ಹಣಕಾಸು ಸಂಸ್ಥೆಯೇ ತಿಳಿಸಿದ್ದು, ಮೋದಿ ನಡೆ ವಿರೋಧಿಸಿದ್ದವರಿಗೆ ತಕ್ಕ ಉತ್ತರವೇ ದೊರೆತಿದೆ ಹಾಗೂ ಭಾರತ ಏಳಿಗೆ ಸಾಧಿಸುತ್ತಿರುವುದು ಭಾರತೀಯರ ಪಾಲಿಗೆ ಖುಷಿಯ ವಿಚಾರವಾಗಿದೆ.

ಹೌದು, ನೋಟ್ ಬ್ಯಾನ್ ಹಾಗೂ ಜಿಎಸ್ಟಿ ಜಾರಿ ಬಳಿಕ ಭಾರತದ ವಿತ್ತೀಯ ಸ್ಥಿತಿ ತುಸು ಹದಗೆಟ್ಟಿತ್ತು. ಆದರೆ ಪ್ರಸ್ತುತ ಭಾರತದ ಆರ್ಥಿಕ ಸ್ಥಿತಿ ಏಳಿಗೆಯತ್ತ ದಾಪುಗಾಲು ಹಾಕುತ್ತಿದೆ ಎಂದು ಅಂತಾರಾಷ್ಟ್ರೀಯ ಹಣಕಾಸು ಸಂಸ್ಥೆ ಉಪ ವ್ಯವಸ್ಥಾಪಕ ನಿರ್ದೇಶಕ ತಾವೋ ಜಾಂಗ್ ತಿಳಿಸಿದ್ದಾರೆ.

ಭಾರತದಲ್ಲಿ ಸ್ವಾಗತಾರ್ಹ ಎನ್ನುವ ಬದಲಾವಣೆಗಳಾಗುತ್ತಿವೆ. ಇತ್ತೀಚೆಗೆ ಭಾರತದ ಆರ್ಥಿಕ ಪರಿಸ್ಥಿತಿ ಸದೃಢವಾಗಿದೆ. ಜಿಡಿಪಿ ಸಹ 7.2ನ್ನು ತಲುಪುವ ಮೂಲಕ ಭಾರತ ತನ್ನ ಆರ್ಥಿಕ ವೇಗವನ್ನು ಮರಳಿ ಪಡೆದಿದೆ. ಇದನ್ನು ಗಮನಿಸಿದರೆ ನೋಟು ನಿಷೇಧ ಹಾಗೂ ಜಿಎಸ್ಟಿ ಫಲಪ್ರದವಾಗಿವೆ ಎಂಬುದು ದಿಟವಾಗಿದೆ ಎಂದು ಜಾಂಗ್ ಮಾಹಿತಿ ನೀಡಿದ್ದಾರೆ.

ಅಷ್ಟೇ, ಅಲ್ಲ ಆರೋಗ್ಯ ಹಾಗೂ ಶಿಕ್ಷಣ ರಂಗಗಳಲ್ಲಿ ಭಾರತ ಮತ್ತಷ್ಟು ಸುಧಾರಣೆ ತರಬೇಕು. ಬ್ಯಾಂಕ್ ಹಾಗೂ ಆರ್ಥಿಕ ವ್ಯವಸ್ಥೆಯ ಕಡೆ ಮತ್ತಷ್ಟು ಗಮನ ಹರಿಸಿದರೆ ಭಾರತ ವಿಶ್ವದ ಶ್ರೀಮಂತ ರಾಷ್ಟ್ರಗಳ ಸಾಲಿಗೆ ಸೇರುವುದರಲ್ಲಿ ಅನುಮಾನವಿಲ್ಲ ಎಂದು ತಿಳಿಸಿರುವುದು ದೇಶದ ಏಳಿಗೆಗೆ ಹಾಗೂ ಭವಿಷ್ಯಕ್ಕೆ ಹಿಡಿದ ಕನ್ನಡಿಯಾಗಿದೆ.

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search