• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮೋದಿ ವಿರೋಧಿಗಳೇ ಕೇಳಿ, ನೋಟ್ ಬ್ಯಾನ್, ಜಿಎಸ್ಟಿಯಿಂದ ಭಾರತ ಏಳಿಗೆಯ ಹಾದಿ ಹಿಡಿದಿದೆ!

TNN Correspondent Posted On March 11, 2018
0


0
Shares
  • Share On Facebook
  • Tweet It

ವಾಷಿಂಗ್ಟನ್: ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ನೋಟ್ ಬ್ಯಾನ್ ನಿಷೇಧಿಸುತ್ತಲೇ, ಅಯ್ಯೋ ದೇಶದ ಜನರೆಲ್ಲ ಬ್ಯಾಂಕ್ ಎದುರು ನಿಂತುಕೊಳ್ಳುವಂತಾಯಿತು, ಇದರಿಂದ ಯಾವುದೇ ಪ್ರಯೋಜನವಾಗಲಿಲ್ಲ ಎಂದು ಬೊಬ್ಬೆ ಹಾಕಿದರು. ಅತ್ತ ತೆರಿಗೆ ಸುಧಾರಣೆಗಾಗಿ ಸರಕು ಮತ್ತು ಸೇವಾ ತೆರಿಗೆ ಜಾರಿಗೊಳಿಸುತ್ತಲೇ, ಅಯ್ಯೋ ಭಾರತದ ಆರ್ಥಿಕ ಸ್ಥಿತಿಯ ಅಂತ್ಯದ ಆರಂಭವಾಯಿತು, ನೋಡಿ ಜಿಡಿಪಿ ಕುಸಿಯಿತು ಎಂದು ಬೊಬ್ಬೆ ಹಾಕಿದರು ಮೋದಿ ವಿರೋಧಿಗಳು.

ಆದರೆ ನೋಟ್ ಬ್ಯಾನ್ ಹಾಗೂ ಸರಕು ಮತ್ತು ಸೇವಾ ತೆರಿಗೆ ಜಾರಿಯಾದ ಈ ಅವಧಿಯಲ್ಲಿ ಭಾರತ ಪ್ರಗತಿಯ ಹಾದಿಯಲ್ಲಿ ಎಂದು ಅಂತಾರಾಷ್ಟ್ರೀಯ ಹಣಕಾಸು ಸಂಸ್ಥೆಯೇ ತಿಳಿಸಿದ್ದು, ಮೋದಿ ನಡೆ ವಿರೋಧಿಸಿದ್ದವರಿಗೆ ತಕ್ಕ ಉತ್ತರವೇ ದೊರೆತಿದೆ ಹಾಗೂ ಭಾರತ ಏಳಿಗೆ ಸಾಧಿಸುತ್ತಿರುವುದು ಭಾರತೀಯರ ಪಾಲಿಗೆ ಖುಷಿಯ ವಿಚಾರವಾಗಿದೆ.

ಹೌದು, ನೋಟ್ ಬ್ಯಾನ್ ಹಾಗೂ ಜಿಎಸ್ಟಿ ಜಾರಿ ಬಳಿಕ ಭಾರತದ ವಿತ್ತೀಯ ಸ್ಥಿತಿ ತುಸು ಹದಗೆಟ್ಟಿತ್ತು. ಆದರೆ ಪ್ರಸ್ತುತ ಭಾರತದ ಆರ್ಥಿಕ ಸ್ಥಿತಿ ಏಳಿಗೆಯತ್ತ ದಾಪುಗಾಲು ಹಾಕುತ್ತಿದೆ ಎಂದು ಅಂತಾರಾಷ್ಟ್ರೀಯ ಹಣಕಾಸು ಸಂಸ್ಥೆ ಉಪ ವ್ಯವಸ್ಥಾಪಕ ನಿರ್ದೇಶಕ ತಾವೋ ಜಾಂಗ್ ತಿಳಿಸಿದ್ದಾರೆ.

ಭಾರತದಲ್ಲಿ ಸ್ವಾಗತಾರ್ಹ ಎನ್ನುವ ಬದಲಾವಣೆಗಳಾಗುತ್ತಿವೆ. ಇತ್ತೀಚೆಗೆ ಭಾರತದ ಆರ್ಥಿಕ ಪರಿಸ್ಥಿತಿ ಸದೃಢವಾಗಿದೆ. ಜಿಡಿಪಿ ಸಹ 7.2ನ್ನು ತಲುಪುವ ಮೂಲಕ ಭಾರತ ತನ್ನ ಆರ್ಥಿಕ ವೇಗವನ್ನು ಮರಳಿ ಪಡೆದಿದೆ. ಇದನ್ನು ಗಮನಿಸಿದರೆ ನೋಟು ನಿಷೇಧ ಹಾಗೂ ಜಿಎಸ್ಟಿ ಫಲಪ್ರದವಾಗಿವೆ ಎಂಬುದು ದಿಟವಾಗಿದೆ ಎಂದು ಜಾಂಗ್ ಮಾಹಿತಿ ನೀಡಿದ್ದಾರೆ.

ಅಷ್ಟೇ, ಅಲ್ಲ ಆರೋಗ್ಯ ಹಾಗೂ ಶಿಕ್ಷಣ ರಂಗಗಳಲ್ಲಿ ಭಾರತ ಮತ್ತಷ್ಟು ಸುಧಾರಣೆ ತರಬೇಕು. ಬ್ಯಾಂಕ್ ಹಾಗೂ ಆರ್ಥಿಕ ವ್ಯವಸ್ಥೆಯ ಕಡೆ ಮತ್ತಷ್ಟು ಗಮನ ಹರಿಸಿದರೆ ಭಾರತ ವಿಶ್ವದ ಶ್ರೀಮಂತ ರಾಷ್ಟ್ರಗಳ ಸಾಲಿಗೆ ಸೇರುವುದರಲ್ಲಿ ಅನುಮಾನವಿಲ್ಲ ಎಂದು ತಿಳಿಸಿರುವುದು ದೇಶದ ಏಳಿಗೆಗೆ ಹಾಗೂ ಭವಿಷ್ಯಕ್ಕೆ ಹಿಡಿದ ಕನ್ನಡಿಯಾಗಿದೆ.

0
Shares
  • Share On Facebook
  • Tweet It




Trending Now
ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
Tulunadu News February 12, 2026
ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
Tulunadu News February 12, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
  • Popular Posts

    • 1
      ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • 2
      ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 3
      'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • 4
      ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • 5
      ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್

  • Privacy Policy
  • Contact
© Tulunadu Infomedia.

Press enter/return to begin your search