• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮಂಗಳೂರು ಪಬ್ ಮೇಲೆ ದಾಳಿ ಪ್ರಕರಣ: 30 ಹಿಂದೂ ಕಾರ್ಯಕರ್ತರು ನಿರ್ದೋಷಿ ಎಂದ ನ್ಯಾಯಾಲಯ

TNN Correspondent Posted On March 12, 2018
0


0
Shares
  • Share On Facebook
  • Tweet It

ಮಂಗಳೂರು: ಮಂಗಳೂರಿನ ಪಬ್ ಒಂದರ ಮೇಲೆ ದಾಳಿ ನಡೆಸಿದ ಪ್ರಕರಣದಲ್ಲಿ ಬರೋಬ್ಬರಿ ಒಂಬತ್ತು ವರ್ಷಗಳ ಬಳಿಕ ಹಿಂದೂ ಕಾರ್ಯಕರ್ತರಿಗೆ ಕೊನೆಗೂ ಮುನ್ನಡೆ ಸಿಕ್ಕಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ 30 ಜನರ ವಿರುದ್ಧದ ಪ್ರಕರಣವನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ.

2009ರ ಪ್ರೇಮಿಗಳ ದಿನಾಚರಣೆಯಂದು ಪಬ್ ವೊಂದರಲ್ಲಿ ಮಹಿಳೆಯರು ಅಶ್ಲೀಲ ಉಡುಪು ತೊಟ್ಟಿದ್ದಾರೆ ಎಂಬ ಕಾರಣಕ್ಕಾಗಿ ಶ್ರೀರಾಮಸೇನೆ ಹಿಂದೂ ಸಂಘಟನೆಯ ಕಾರ್ಯಕರ್ತರು ದಾಳಿ ಮಾಡಿ, ಹಲ್ಲೆ ನಡೆಸಿದ್ದಾರೆ ಎಂಬ ಆರೋಪದಲ್ಲಿ ಪ್ರಕರಣ ದಾಖಲಿಸಲಾಗಿತ್ತು.

ಈಗ ಪ್ರಕರಣದ ಆರೋಪಿಗಳ ವಿಚಾರಣೆ ನಡೆಸಿದ ಮಂಗಳೂರು ನ್ಯಾಯಾಲಯ, ಸಾಕ್ಷ್ಯಾಧಾರಗಳ ಕೊರತೆ ಇರುವ ಕಾರಣದಿಂದ ಹಿಂದೂ ಕಾರ್ಯಕರ್ತರ ವಿರುದ್ಧದ ಪ್ರಕರಣ ಖುಲಾಸೆಗೊಳಿಸಿದೆ.

ಆದಾಗ್ಯೂ, ನ್ಯಾಯಾಲಯದ ತೀರ್ಪಿನಿಂದ ಶ್ರೀರಾಮಸೇನೆ ಸಂಘಟನೆಯ ಮುಖಂಡ ಪ್ರಮೋದ್ ಮುತಾಲಿಕ್ ಸಂತಸ ವ್ಯಕ್ತಪಡಿಸಿದ್ದು, ಇದು ಸತ್ಯಕ್ಕೆ ಸಿಕ್ಕ ಜಯ ಎಂದು ವರ್ಣಿಸಿದ್ದಾರೆ.

ಪಬ್ ಮೇಲೆ ದಾಳಿ ಪ್ರಕರಣ ಇಡೀ ದೇಶದ ಗಮನ ಸೆಳೆದಿದ್ದು, ವ್ಯಕ್ತಿ ಸ್ವಾತಂತ್ರ್ಯದ ಹರಣ, ಹಿಂದೂ ಗೂಂಡಾಗಿರಿ ಎಂದೆಲ್ಲ ಸಂಘಟನೆಯ ಕಾರ್ಯಕರ್ತರ ವಿರುದ್ಧ ಆರೋಪ ಮಾಡಲಾಗಿತ್ತು. ಆದರೆ ಕೊನೆಗೂ 30 ಜನರ ವಿರುದ್ಧದ ಪ್ರಕರಣ ಖುಲಾಸೆಗೊಳಿಸುವ ಮೂಲಕ ಹಿಂದೂ ಕಾರ್ಯಕರ್ತರ ಕೈವಾಡ ಅಲ್ಲಗಳೆದಂತಾಗಿದೆ.

0
Shares
  • Share On Facebook
  • Tweet It




Trending Now
ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
Tulunadu News January 1, 2026
ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
Tulunadu News December 27, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!
    • ಭಕ್ತಿಗೀತೆ ಹಾಡುತ್ತಿದ್ದ ಗಾಯಕಿಯ ಮೇಲೆ ದರ್ಪ! ಜಾತ್ಯಾತೀತ ಗೀತೆ ಹಾಡಲು ಒತ್ತಾಯ!
    • ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 10 ಲಕ್ಷ ನೀಡಿ - ಸರಕಾರಕ್ಕೆ ಶಾಸಕ ಆಗ್ರಹ!
    • ವಿಡಿಯೋ ಕಾಲ್ ನಲ್ಲಿ ನಿಶ್ಚಿತಾರ್ಥ-ಎಲ್ ಇಡಿ ಸ್ಕ್ರೀನ್ ಗೆ ಆರತಿ!
  • Popular Posts

    • 1
      ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • 2
      ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!

  • Privacy Policy
  • Contact
© Tulunadu Infomedia.

Press enter/return to begin your search