• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಬೆಂಗಳೂರು ವಿವಿ ಆವರಣದ ಶ್ರೀಗಂಧ ಕಳ್ಳತನವಾದರೂ ಮಲಗಿದೆಯಾ ಅರಣ್ಯ ಇಲಾಖೆ, ವಿವಿ ಆಡಳಿತ?

TNN Correspondent Posted On March 13, 2018


  • Share On Facebook
  • Tweet It

ಬೆಂಗಳೂರು: ಕಸ ವಿಲೇವಾರಿ ಮಾಡದೆ, ರಸ್ತೆಯ ಗುಂಡಿ ಮುಚ್ಚದೆ ಸಿಲಿಕಾನ್ ಸಿಟಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಸುದ್ದಿಯಾದ ಬೆನ್ನಲ್ಲೇ, ಈಗ ಬೆಂಗಳೂರಿನಲ್ಲಿ ಮತ್ತೊಂದು ಪ್ರಮಾದ ನಡೆದಿದ್ದು, ಸರ್ಕಾರ, ವಿವಿ ಆಡಳಿತ ಮಂಡಳಿ ಏನು ಮಾಡುತ್ತಿದೆ ಎಂಬ ಮಾತುಕೇಳಿಬಂದಿವೆ.

ಹೌದು, ಬೆಂಗಳೂರು ವಿಶ್ವವಿದ್ಯಾಲಯ ಆವರಣದ ಜೈವಿಕ ಉದ್ಯಾನದಲ್ಲಿ ಹೇರಳವಾಗಿ ಶ್ರೀಗಂಧದ ಮರ ಬೆಳೆದಿದ್ದು, ಕಳೆದ ಒಂದು ವರ್ಷದಲ್ಲಿ ಸುಮಾರು 36ಕ್ಕೂ ಅಧಿಕ ಶ್ರೀಗಂಧದ ಮರಗಳನ್ನು ಕಳ್ಳತನ ಮಾಡಲಾಗಿದೆ ಎಂದು ತಿಳಿದುಬಂದಿದೆ.

ಮಾಹಿತಿ ಹಕ್ಕು ಕಾಯಿದೆ (ಆರ್ ಟಿಇ) ಅನ್ವಯ ವಿಶ್ವವಿದ್ಯಾಲಯವೇ ಈ ಕುರಿತು ಮಾಹಿತಿ ನೀಡಿದ್ದು, ಕಳೆದ ವರ್ಷದ ಡಿಸೆಂಬರ್ ತಿಂಗಳೊಂದರಲ್ಲೇ ಸುಮಾರು 26 ಶ್ರೀಗಂಧದ ಮರಗಳನ್ನು ಕಡಿದು ಅಕ್ರಮವಾಗಿ ಸಾಗಣೆ ಮಾಡಲಾಗಿದೆ ಎಂದು ಮಾಹಿತಿ ನೀಡಲಾಗಿದೆ.

ಆದಾಗ್ಯೂ, ಒಂದು ಸಾವಿರ ಎಕರೆಯಲ್ಲಿ ವಿವಿ ಕ್ಯಾಂಪಸ್ ವ್ಯಾಪಿಸಿದ್ದು, ಹೇರಳವಾಗಿ ಶ್ರೀಗಂಧದ ಮರಗಳು ಬೆಳೆದಿವೆ. ಆದರೆ ಕೆಲವು ಕಾಳಧನಿಕರು, ದಂಧೆಕೋರರು ಮರಗಳನ್ನು ಕಡಿಯಲು ಮುಂದಾಗಿದ್ದು, ಇಷ್ಟಾದರೂ ವಿವಿ ಆಡಳಿತವಾಗಲಿ, ಅರಣ್ಯ ಇಲಾಖೆಯಾಗಲಿ ಯಾವುದೇ ಕ್ರಮ ಕೈಗೊಂಡಿಲ್ಲ ಎಂಬುದು ನಿರ್ಲಕ್ಷ್ಯಕ್ಕೆ ಹಿಡಿದ ಕನ್ನಡಿಯಾಗಿದೆ.

ಆದಾಗ್ಯೂ, ಈ ಕುರಿತು ಹಲವು ಆರ್ಟಿಇ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದು, ನಾವು ಪ್ರತಿ ಬಾರಿ ದೂರು ನೀಡಿದಾಗಲೂ ವಿವಿ ಆಡಳಿತ ಮಂಡಳಿ ಗಸ್ತುಪಡೆ ನಿಯೋಜಿಸುತ್ತದೆ. ಆದರೆ ಆ ಗಸ್ತು ಪಡೆ ಕೆಲವೇ ದಿನಗಳಿಗೆ ಸೀಮಿತವಾಗಲಿದ್ದು, ಮತ್ತೆ ಎಂದಿನ ಚಾಳಿ ಮುಂದುವರಿಯಲಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ವಿಶ್ವವಿದ್ಯಾಲಯದ ಆಡಳಿತ ಮಂಡಳಿಯ ನಿರ್ಲಕ್ಷ್ಯ ಖಂಡಿಸದ ಅರಣ್ಯ ಇಲಾಖೆ, ಸರ್ಕಾರವೇನು ಮಲಗಿದೆಯಾ ಎಂಬುದು ಸಿಲಿಕಾನ್ ಸಿಟಿ ಜನರ ಆಕ್ರೋಶಭರಿತ ಪ್ರಶ್ನೆಯಾಗಿದೆ.

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • 4
      ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • 5
      ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search