• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಬೆಂಗಳೂರು ವಿವಿ ಆವರಣದ ಶ್ರೀಗಂಧ ಕಳ್ಳತನವಾದರೂ ಮಲಗಿದೆಯಾ ಅರಣ್ಯ ಇಲಾಖೆ, ವಿವಿ ಆಡಳಿತ?

TNN Correspondent Posted On March 13, 2018
0


0
Shares
  • Share On Facebook
  • Tweet It

ಬೆಂಗಳೂರು: ಕಸ ವಿಲೇವಾರಿ ಮಾಡದೆ, ರಸ್ತೆಯ ಗುಂಡಿ ಮುಚ್ಚದೆ ಸಿಲಿಕಾನ್ ಸಿಟಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಸುದ್ದಿಯಾದ ಬೆನ್ನಲ್ಲೇ, ಈಗ ಬೆಂಗಳೂರಿನಲ್ಲಿ ಮತ್ತೊಂದು ಪ್ರಮಾದ ನಡೆದಿದ್ದು, ಸರ್ಕಾರ, ವಿವಿ ಆಡಳಿತ ಮಂಡಳಿ ಏನು ಮಾಡುತ್ತಿದೆ ಎಂಬ ಮಾತುಕೇಳಿಬಂದಿವೆ.

ಹೌದು, ಬೆಂಗಳೂರು ವಿಶ್ವವಿದ್ಯಾಲಯ ಆವರಣದ ಜೈವಿಕ ಉದ್ಯಾನದಲ್ಲಿ ಹೇರಳವಾಗಿ ಶ್ರೀಗಂಧದ ಮರ ಬೆಳೆದಿದ್ದು, ಕಳೆದ ಒಂದು ವರ್ಷದಲ್ಲಿ ಸುಮಾರು 36ಕ್ಕೂ ಅಧಿಕ ಶ್ರೀಗಂಧದ ಮರಗಳನ್ನು ಕಳ್ಳತನ ಮಾಡಲಾಗಿದೆ ಎಂದು ತಿಳಿದುಬಂದಿದೆ.

ಮಾಹಿತಿ ಹಕ್ಕು ಕಾಯಿದೆ (ಆರ್ ಟಿಇ) ಅನ್ವಯ ವಿಶ್ವವಿದ್ಯಾಲಯವೇ ಈ ಕುರಿತು ಮಾಹಿತಿ ನೀಡಿದ್ದು, ಕಳೆದ ವರ್ಷದ ಡಿಸೆಂಬರ್ ತಿಂಗಳೊಂದರಲ್ಲೇ ಸುಮಾರು 26 ಶ್ರೀಗಂಧದ ಮರಗಳನ್ನು ಕಡಿದು ಅಕ್ರಮವಾಗಿ ಸಾಗಣೆ ಮಾಡಲಾಗಿದೆ ಎಂದು ಮಾಹಿತಿ ನೀಡಲಾಗಿದೆ.

ಆದಾಗ್ಯೂ, ಒಂದು ಸಾವಿರ ಎಕರೆಯಲ್ಲಿ ವಿವಿ ಕ್ಯಾಂಪಸ್ ವ್ಯಾಪಿಸಿದ್ದು, ಹೇರಳವಾಗಿ ಶ್ರೀಗಂಧದ ಮರಗಳು ಬೆಳೆದಿವೆ. ಆದರೆ ಕೆಲವು ಕಾಳಧನಿಕರು, ದಂಧೆಕೋರರು ಮರಗಳನ್ನು ಕಡಿಯಲು ಮುಂದಾಗಿದ್ದು, ಇಷ್ಟಾದರೂ ವಿವಿ ಆಡಳಿತವಾಗಲಿ, ಅರಣ್ಯ ಇಲಾಖೆಯಾಗಲಿ ಯಾವುದೇ ಕ್ರಮ ಕೈಗೊಂಡಿಲ್ಲ ಎಂಬುದು ನಿರ್ಲಕ್ಷ್ಯಕ್ಕೆ ಹಿಡಿದ ಕನ್ನಡಿಯಾಗಿದೆ.

ಆದಾಗ್ಯೂ, ಈ ಕುರಿತು ಹಲವು ಆರ್ಟಿಇ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದು, ನಾವು ಪ್ರತಿ ಬಾರಿ ದೂರು ನೀಡಿದಾಗಲೂ ವಿವಿ ಆಡಳಿತ ಮಂಡಳಿ ಗಸ್ತುಪಡೆ ನಿಯೋಜಿಸುತ್ತದೆ. ಆದರೆ ಆ ಗಸ್ತು ಪಡೆ ಕೆಲವೇ ದಿನಗಳಿಗೆ ಸೀಮಿತವಾಗಲಿದ್ದು, ಮತ್ತೆ ಎಂದಿನ ಚಾಳಿ ಮುಂದುವರಿಯಲಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ವಿಶ್ವವಿದ್ಯಾಲಯದ ಆಡಳಿತ ಮಂಡಳಿಯ ನಿರ್ಲಕ್ಷ್ಯ ಖಂಡಿಸದ ಅರಣ್ಯ ಇಲಾಖೆ, ಸರ್ಕಾರವೇನು ಮಲಗಿದೆಯಾ ಎಂಬುದು ಸಿಲಿಕಾನ್ ಸಿಟಿ ಜನರ ಆಕ್ರೋಶಭರಿತ ಪ್ರಶ್ನೆಯಾಗಿದೆ.

0
Shares
  • Share On Facebook
  • Tweet It




Trending Now
ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
Tulunadu News January 23, 2026
ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
Tulunadu News January 20, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
  • Popular Posts

    • 1
      ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • 2
      ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • 3
      ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • 4
      ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!

  • Privacy Policy
  • Contact
© Tulunadu Infomedia.

Press enter/return to begin your search