• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಬೆಂಗಳೂರು ವಿವಿ ಆವರಣದ ಶ್ರೀಗಂಧ ಕಳ್ಳತನವಾದರೂ ಮಲಗಿದೆಯಾ ಅರಣ್ಯ ಇಲಾಖೆ, ವಿವಿ ಆಡಳಿತ?

TNN Correspondent Posted On March 13, 2018
0


0
Shares
  • Share On Facebook
  • Tweet It

ಬೆಂಗಳೂರು: ಕಸ ವಿಲೇವಾರಿ ಮಾಡದೆ, ರಸ್ತೆಯ ಗುಂಡಿ ಮುಚ್ಚದೆ ಸಿಲಿಕಾನ್ ಸಿಟಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಸುದ್ದಿಯಾದ ಬೆನ್ನಲ್ಲೇ, ಈಗ ಬೆಂಗಳೂರಿನಲ್ಲಿ ಮತ್ತೊಂದು ಪ್ರಮಾದ ನಡೆದಿದ್ದು, ಸರ್ಕಾರ, ವಿವಿ ಆಡಳಿತ ಮಂಡಳಿ ಏನು ಮಾಡುತ್ತಿದೆ ಎಂಬ ಮಾತುಕೇಳಿಬಂದಿವೆ.

ಹೌದು, ಬೆಂಗಳೂರು ವಿಶ್ವವಿದ್ಯಾಲಯ ಆವರಣದ ಜೈವಿಕ ಉದ್ಯಾನದಲ್ಲಿ ಹೇರಳವಾಗಿ ಶ್ರೀಗಂಧದ ಮರ ಬೆಳೆದಿದ್ದು, ಕಳೆದ ಒಂದು ವರ್ಷದಲ್ಲಿ ಸುಮಾರು 36ಕ್ಕೂ ಅಧಿಕ ಶ್ರೀಗಂಧದ ಮರಗಳನ್ನು ಕಳ್ಳತನ ಮಾಡಲಾಗಿದೆ ಎಂದು ತಿಳಿದುಬಂದಿದೆ.

ಮಾಹಿತಿ ಹಕ್ಕು ಕಾಯಿದೆ (ಆರ್ ಟಿಇ) ಅನ್ವಯ ವಿಶ್ವವಿದ್ಯಾಲಯವೇ ಈ ಕುರಿತು ಮಾಹಿತಿ ನೀಡಿದ್ದು, ಕಳೆದ ವರ್ಷದ ಡಿಸೆಂಬರ್ ತಿಂಗಳೊಂದರಲ್ಲೇ ಸುಮಾರು 26 ಶ್ರೀಗಂಧದ ಮರಗಳನ್ನು ಕಡಿದು ಅಕ್ರಮವಾಗಿ ಸಾಗಣೆ ಮಾಡಲಾಗಿದೆ ಎಂದು ಮಾಹಿತಿ ನೀಡಲಾಗಿದೆ.

ಆದಾಗ್ಯೂ, ಒಂದು ಸಾವಿರ ಎಕರೆಯಲ್ಲಿ ವಿವಿ ಕ್ಯಾಂಪಸ್ ವ್ಯಾಪಿಸಿದ್ದು, ಹೇರಳವಾಗಿ ಶ್ರೀಗಂಧದ ಮರಗಳು ಬೆಳೆದಿವೆ. ಆದರೆ ಕೆಲವು ಕಾಳಧನಿಕರು, ದಂಧೆಕೋರರು ಮರಗಳನ್ನು ಕಡಿಯಲು ಮುಂದಾಗಿದ್ದು, ಇಷ್ಟಾದರೂ ವಿವಿ ಆಡಳಿತವಾಗಲಿ, ಅರಣ್ಯ ಇಲಾಖೆಯಾಗಲಿ ಯಾವುದೇ ಕ್ರಮ ಕೈಗೊಂಡಿಲ್ಲ ಎಂಬುದು ನಿರ್ಲಕ್ಷ್ಯಕ್ಕೆ ಹಿಡಿದ ಕನ್ನಡಿಯಾಗಿದೆ.

ಆದಾಗ್ಯೂ, ಈ ಕುರಿತು ಹಲವು ಆರ್ಟಿಇ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದು, ನಾವು ಪ್ರತಿ ಬಾರಿ ದೂರು ನೀಡಿದಾಗಲೂ ವಿವಿ ಆಡಳಿತ ಮಂಡಳಿ ಗಸ್ತುಪಡೆ ನಿಯೋಜಿಸುತ್ತದೆ. ಆದರೆ ಆ ಗಸ್ತು ಪಡೆ ಕೆಲವೇ ದಿನಗಳಿಗೆ ಸೀಮಿತವಾಗಲಿದ್ದು, ಮತ್ತೆ ಎಂದಿನ ಚಾಳಿ ಮುಂದುವರಿಯಲಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ವಿಶ್ವವಿದ್ಯಾಲಯದ ಆಡಳಿತ ಮಂಡಳಿಯ ನಿರ್ಲಕ್ಷ್ಯ ಖಂಡಿಸದ ಅರಣ್ಯ ಇಲಾಖೆ, ಸರ್ಕಾರವೇನು ಮಲಗಿದೆಯಾ ಎಂಬುದು ಸಿಲಿಕಾನ್ ಸಿಟಿ ಜನರ ಆಕ್ರೋಶಭರಿತ ಪ್ರಶ್ನೆಯಾಗಿದೆ.

0
Shares
  • Share On Facebook
  • Tweet It




Trending Now
ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
Tulunadu News February 12, 2026
ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
Tulunadu News February 12, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
  • Popular Posts

    • 1
      ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • 2
      ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!

  • Privacy Policy
  • Contact
© Tulunadu Infomedia.

Press enter/return to begin your search