• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಬೆಂಗಳೂರು ವಿವಿ ಆವರಣದ ಶ್ರೀಗಂಧ ಕಳ್ಳತನವಾದರೂ ಮಲಗಿದೆಯಾ ಅರಣ್ಯ ಇಲಾಖೆ, ವಿವಿ ಆಡಳಿತ?

TNN Correspondent Posted On March 13, 2018


  • Share On Facebook
  • Tweet It

ಬೆಂಗಳೂರು: ಕಸ ವಿಲೇವಾರಿ ಮಾಡದೆ, ರಸ್ತೆಯ ಗುಂಡಿ ಮುಚ್ಚದೆ ಸಿಲಿಕಾನ್ ಸಿಟಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಸುದ್ದಿಯಾದ ಬೆನ್ನಲ್ಲೇ, ಈಗ ಬೆಂಗಳೂರಿನಲ್ಲಿ ಮತ್ತೊಂದು ಪ್ರಮಾದ ನಡೆದಿದ್ದು, ಸರ್ಕಾರ, ವಿವಿ ಆಡಳಿತ ಮಂಡಳಿ ಏನು ಮಾಡುತ್ತಿದೆ ಎಂಬ ಮಾತುಕೇಳಿಬಂದಿವೆ.

ಹೌದು, ಬೆಂಗಳೂರು ವಿಶ್ವವಿದ್ಯಾಲಯ ಆವರಣದ ಜೈವಿಕ ಉದ್ಯಾನದಲ್ಲಿ ಹೇರಳವಾಗಿ ಶ್ರೀಗಂಧದ ಮರ ಬೆಳೆದಿದ್ದು, ಕಳೆದ ಒಂದು ವರ್ಷದಲ್ಲಿ ಸುಮಾರು 36ಕ್ಕೂ ಅಧಿಕ ಶ್ರೀಗಂಧದ ಮರಗಳನ್ನು ಕಳ್ಳತನ ಮಾಡಲಾಗಿದೆ ಎಂದು ತಿಳಿದುಬಂದಿದೆ.

ಮಾಹಿತಿ ಹಕ್ಕು ಕಾಯಿದೆ (ಆರ್ ಟಿಇ) ಅನ್ವಯ ವಿಶ್ವವಿದ್ಯಾಲಯವೇ ಈ ಕುರಿತು ಮಾಹಿತಿ ನೀಡಿದ್ದು, ಕಳೆದ ವರ್ಷದ ಡಿಸೆಂಬರ್ ತಿಂಗಳೊಂದರಲ್ಲೇ ಸುಮಾರು 26 ಶ್ರೀಗಂಧದ ಮರಗಳನ್ನು ಕಡಿದು ಅಕ್ರಮವಾಗಿ ಸಾಗಣೆ ಮಾಡಲಾಗಿದೆ ಎಂದು ಮಾಹಿತಿ ನೀಡಲಾಗಿದೆ.

ಆದಾಗ್ಯೂ, ಒಂದು ಸಾವಿರ ಎಕರೆಯಲ್ಲಿ ವಿವಿ ಕ್ಯಾಂಪಸ್ ವ್ಯಾಪಿಸಿದ್ದು, ಹೇರಳವಾಗಿ ಶ್ರೀಗಂಧದ ಮರಗಳು ಬೆಳೆದಿವೆ. ಆದರೆ ಕೆಲವು ಕಾಳಧನಿಕರು, ದಂಧೆಕೋರರು ಮರಗಳನ್ನು ಕಡಿಯಲು ಮುಂದಾಗಿದ್ದು, ಇಷ್ಟಾದರೂ ವಿವಿ ಆಡಳಿತವಾಗಲಿ, ಅರಣ್ಯ ಇಲಾಖೆಯಾಗಲಿ ಯಾವುದೇ ಕ್ರಮ ಕೈಗೊಂಡಿಲ್ಲ ಎಂಬುದು ನಿರ್ಲಕ್ಷ್ಯಕ್ಕೆ ಹಿಡಿದ ಕನ್ನಡಿಯಾಗಿದೆ.

ಆದಾಗ್ಯೂ, ಈ ಕುರಿತು ಹಲವು ಆರ್ಟಿಇ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದು, ನಾವು ಪ್ರತಿ ಬಾರಿ ದೂರು ನೀಡಿದಾಗಲೂ ವಿವಿ ಆಡಳಿತ ಮಂಡಳಿ ಗಸ್ತುಪಡೆ ನಿಯೋಜಿಸುತ್ತದೆ. ಆದರೆ ಆ ಗಸ್ತು ಪಡೆ ಕೆಲವೇ ದಿನಗಳಿಗೆ ಸೀಮಿತವಾಗಲಿದ್ದು, ಮತ್ತೆ ಎಂದಿನ ಚಾಳಿ ಮುಂದುವರಿಯಲಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ವಿಶ್ವವಿದ್ಯಾಲಯದ ಆಡಳಿತ ಮಂಡಳಿಯ ನಿರ್ಲಕ್ಷ್ಯ ಖಂಡಿಸದ ಅರಣ್ಯ ಇಲಾಖೆ, ಸರ್ಕಾರವೇನು ಮಲಗಿದೆಯಾ ಎಂಬುದು ಸಿಲಿಕಾನ್ ಸಿಟಿ ಜನರ ಆಕ್ರೋಶಭರಿತ ಪ್ರಶ್ನೆಯಾಗಿದೆ.

  • Share On Facebook
  • Tweet It


- Advertisement -


Trending Now
ಓಡಿಶಾದಲ್ಲಿ ಮುಂದುವರೆದ ರೈಲು ಅಪಘಾತ
Tulunadu News June 8, 2023
ರಾತ್ರಿ ಸ್ನೇಹಿತೆ ಜೊತೆ ಚಾಟ್, ಡೆತ್ ನೋಟ್, ಆತ್ಮ ಹತ್ಯೆ!
Tulunadu News June 8, 2023
Leave A Reply

  • Recent Posts

    • ಓಡಿಶಾದಲ್ಲಿ ಮುಂದುವರೆದ ರೈಲು ಅಪಘಾತ
    • ರಾತ್ರಿ ಸ್ನೇಹಿತೆ ಜೊತೆ ಚಾಟ್, ಡೆತ್ ನೋಟ್, ಆತ್ಮ ಹತ್ಯೆ!
    • ಇಂಟರ್ ಲಾಕಿಂಗ್ ಕೇಂದ್ರ ಸ್ಥಾನ ಪಶ್ಚಿಮ ಬಂಗಾಲದಲ್ಲಿ!
    • ಹೆಣ್ಣು ಕಾಮದ ಸರಕಲ್ಲ!
    • ಎರಡೂವರೆ ವರ್ಷ ಬಳಿಕ ಸಚಿವರಾಗಿ ಇರುವುದೇ ಡೌಟು!
    • ದೇವರು ಕೊಟ್ಟರೂ ಅರ್ಚಕ ಕೊಟ್ಟಿಲ್ಲ ಎಂದು ಇನ್ನು ಆಗಲಿಕ್ಕಿಲ್ಲ!!
    • ವಾಹನ ಸವಾರರೇ, ನಿಮ್ಮ ಜೇಬಿಗೆ ಬೀಳಲಿದೆ ಕತ್ತರಿ!
    • ಬ್ರಿಜ್ ವಿರುದ್ಧ ಪ್ರತಿಭಟನೆಯ ಹಿಂದಿನ ಸತ್ಯ!!
    • ಕೇರಳ ಸ್ಟೋರಿ ಸಿನೆಮಾ ಕಾಲ್ಪನಿಕ ಕಥೆ ಅಲ್ಲ!!
    • ಕಾಂಗ್ರೆಸ್ ಸರಕಾರ ಹೊಸ ಸಂಸತ್ ಭವನ ನಿರ್ಮಿಸಿದ್ದರೆ ಏನಾಗುತ್ತಿತ್ತು?
  • Popular Posts

    • 1
      ಓಡಿಶಾದಲ್ಲಿ ಮುಂದುವರೆದ ರೈಲು ಅಪಘಾತ
    • 2
      ರಾತ್ರಿ ಸ್ನೇಹಿತೆ ಜೊತೆ ಚಾಟ್, ಡೆತ್ ನೋಟ್, ಆತ್ಮ ಹತ್ಯೆ!
    • 3
      ಇಂಟರ್ ಲಾಕಿಂಗ್ ಕೇಂದ್ರ ಸ್ಥಾನ ಪಶ್ಚಿಮ ಬಂಗಾಲದಲ್ಲಿ!
    • 4
      ಹೆಣ್ಣು ಕಾಮದ ಸರಕಲ್ಲ!
    • 5
      ಎರಡೂವರೆ ವರ್ಷ ಬಳಿಕ ಸಚಿವರಾಗಿ ಇರುವುದೇ ಡೌಟು!


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search