• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ರೈತರು ಹೋರಾಟ ಮಾಡಿದರೆ ಆಕ್ರೋಶವಂತೆ, ವಾಪಸ್ ಪಡೆದರೆ ಫಿಕ್ಸಿಂಗ್ ಅಂತೆ. ಈ ಕಾಂಗಿಗಳಿಗೆ ಬುದ್ಧಿ ಬರುವುದು ಯಾವಾಗ?

TNN Correspondent Posted On March 13, 2018
0


0
Shares
  • Share On Facebook
  • Tweet It

ಮುಂಬೈ: ಯಾವುದೇ ಸರ್ಕಾರದ ವಿರುದ್ಧ ಜನ ಅಕ್ರೋಶ ವ್ಯಕ್ತಪಡಿಸುವುದು, ಪ್ರತಿಭಟನೆ ಮಾಡುವುದು ಸಾಮಾನ್ಯ. ಅದರಲ್ಲೂ ರೈತರ ಸಮಸ್ಯೆ ಸಾರ್ವಕಾಲಿಕವಾಗಿರುವುದರಿಂದ ಎಲ್ಲ ಸರ್ಕಾರದ ವಿರುದ್ಧವೂ ರೈತರು ಪ್ರತಿಭಟನೆ ಮಾಡುತ್ತಾರೆ ಹಾಗೂ ಅವರು ಪ್ರತಿಭಟನೆ ಮಾಡುವುದರಲ್ಲಿ ನ್ಯಾಯ ಇರುತ್ತದೆ.

ಆದರೆ ರೈತರ ವಿಷಯದಲ್ಲೂ ರಾಜಕೀಯ ಮಾಡುವ ಈ ಕಾಂಗ್ರೆಸ್ಸಿಗರ ಬುದ್ಧಿಗೆ ಏನಾಗಿದೆ? ರೈತರ ನೋವಿನಲ್ಲೂ ಇವರು ತಮ್ಮ ಬೇಳೆ ಬೇಯಿಸಿಕೊಳ್ಳಾತರಲ್ಲ ಏನೆನ್ನಬೇಕು ಇವರಿಗೆ? ರೈತರೂ ಇವರ ಮತಗಳ ದಾಳವಾದರೆ ಇವರು ಸ್ವಲ್ಪವಾದರೂ ನೈತಿಕತೆ ಉಳಿಸಿಕೊಂಡಿದ್ದಾರೆ ಎಂದು ಅನಿಸುತ್ತಿದೆಯೇ?

ನೀವೇ ಯೋಚಿಸಿ ನೋಡಿ, ಮಹಾರಾಷ್ಟ್ರದಲ್ಲಿ ಕಿಸಾನ್ ಸಭಾ ನೇತೃತ್ವದಲ್ಲಿ ಸಾವಿರಾರು ರೈತರು ಹಲವು ಬೇಡಿಕೆ ಈಡೇರಿಸಬೇಕು ಎಂದು ಒತ್ತಾಯಿಸಿ ಪ್ರತಿಭಟನೆ ನಡೆಸಿದರು. ಅದಕ್ಕೆ ಪ್ರತಿಪಕ್ಷಗಳು ಸೇರಿ ಹಲವು ರಾಜಕೀಯ ಪಕ್ಷಗಳು ಬೆಂಬಲ ವ್ಯಕ್ತಪಡಿಸಿದವು. ಎಲ್ಲವೂ ಸರಿಯಾಗಿಯೇ ಇತ್ತು.

ಆದರೆ, ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ರೈತರ ಪರವಾಗಿಯೇ ನಿಂತುಬಿಟ್ಟರು. ನನಗೆ ಆರು ತಿಂಗಳು ಸಮಯ ಕೊಡಿ ನಿಮ್ಮ ಎಲ್ಲ ಸಮಸ್ಯೆಗಳನ್ನು ನಾನು ಬಗೆಹರಿಸುತ್ತೇನೆ, ಬೇಡಿಕೆಗಳೆಲ್ಲವನ್ನೂ ಈಡೇರಿಸುತ್ತೇನೆ ಎಂದು ಒಬ್ಬ ಉತ್ತಮ ಆಡಳಿತಗಾರನಾಗಿ ಹೇಳಿಬಿಟ್ಟರು.

ಈ ಕಾಂಗ್ರೆಸ್ಸು, ಎನ್ಸಿಪಿ ಪಕ್ಷಗಳಿಗೆ ಹೊಟ್ಟೆ ಉರಿದಿದ್ದೇ ಆಗ. ಯಾವಾಗ ರೈತರು ಹೋರಾಟ ಮಾಡಲು ಆರಂಭಿಸಿದರೋ, ಈ ಪಕ್ಷಗಳು ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಮುಂದಾದವು. ಸರ್ಕಾರದ ವಿರುದ್ಧ ರೈತರ ಆಕ್ರೋಶ ಕಟ್ಟೆಯೊಡೆದಿದೆ ಎಂದೆಲ್ಲ ಬೊಬ್ಬೆ ಹಾಕಿದವು.

ಆದರೆ ಮುಖ್ಯಮಂತ್ರಿ ಭರವಸೆ ಮೇರೆಗೆ ರೈತರು ಪ್ರತಿಭಟನೆ ವಾಪಸ್ ಪಡೆಯುತ್ತಲೇ ಹೊಟ್ಟೆ ಉರಿದುಕೊಂಡ ಇವರು ಈಗ ಇದೊಂದು ಫಿಕ್ಸಿಂಗ್, ಒಳಒಪ್ಪಂದ ಎಂದು ಕಾಂಗ್ರೆಸ್, ಎನ್ಸಿಪಿ ಬೊಬ್ಬೆ ಹಾಕುತ್ತಿದೆ. ಇಂತಹವರಿಂದ ಇಂತಹ ಬೊಬ್ಬೆ ಬಿಟ್ಟರೆ ಇನ್ನೇನು ನಿರೀಕ್ಷಿಸಲು ಸಾಧ್ಯ ಬಿಡಿ.

0
Shares
  • Share On Facebook
  • Tweet It




Trending Now
ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
Tulunadu News February 12, 2026
ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
Tulunadu News February 12, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
  • Popular Posts

    • 1
      ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • 2
      ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 3
      'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • 4
      ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್

  • Privacy Policy
  • Contact
© Tulunadu Infomedia.

Press enter/return to begin your search