• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ರಾಜ್ಯ ಸರ್ಕಾರ ಹಿಂದೂಗಳಿಗೆ ಅನ್ಯಾಯ ಮಾಡಿದೆ, ಸಿದ್ದರಾಮಯ್ಯ ನಾಟಕಕಾರ: ವಿಜಯ ಸಂಕೇಶ್ವರ

TNN Correspondent Posted On March 13, 2018
0


0
Shares
  • Share On Facebook
  • Tweet It

ಹುಬ್ಬಳ್ಳಿ: ಕರ್ನಾಟಕದಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಹಿಂದೂ ವಿರೋಧಿಯಾಗಿ ಕಾರ್ಯ ನಿರ್ವಹಿಸುತ್ತಿದೆ. ಜಾತಿಗಳನ್ನು ಒಡೆದು ಆಳುವ ಹುನ್ನಾರ ನಡೆಸುತ್ತಿದ್ದಾರೆ ಎಂದು ವಿಆರ್ ಎಲ್ ಸಮೂಹ ಸಂಸ್ಥೆಗಳ ಅಧ್ಯಕ್ಷ, ಬಿಜೆಪಿ ಮುಖಂಡ ವಿಜಯ ಸಂಕೇಶ್ವರ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾನು ಬಿಜೆಪಿಯ ನಿಷ್ಠಾವಂತ ಕಾರ್ಯಕರ್ತ 30 ವರ್ಷದಿಂದ ಬಿಜೆಪಿಯನ್ನು ಕಟ್ಟಲು ಶ್ರಮಿಸಿದ್ದೇನೆ. ಮುಂದೆಯೂ ಶ್ರಮಿಸುತ್ತೇನೆ. ಯಾವುದೇ ಕಾರಣಕ್ಕೂ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೇರಲು ಬಿಡುವುದಿಲ್ಲ. ಕಾಂಗ್ರೆಸ್ ಹಿಂದೂ ವಿರೋಧಿ ನೀತಿಯನ್ನು ಅನುಸರಿಸುತ್ತಿದೆ. ಕಾಂಗ್ರೆಸ್ ಹಠಾವೋ ಅಭಿಯಾನಕ್ಕೆ ಕೈ ಜೋಡಿಸುತ್ತೇನೆ. ನಾನು ಬಿಜೆಪಿಯ ಶಿಸ್ತಿನ ಕಾರ್ಯಕರ್ತ. ನಾನು ಬಿಜೆಪಿಯನ್ನು ಮದುವೆಯಾಗಿದ್ದೇನೆ. ನಾನು ಬಿಜೆಪಿಯ ಸೇವಕನಾಗಿದ್ದೇನೆ ಎಂದು ಹೇಳಿದರು.

ನನಗೆ ರಾಜ್ಯಸಭೆಯ ಸ್ಥಾನ ನೀಡದಿರುವುದಕ್ಕೆ ಯಾವುದೇ ಅಸಮಾಧಾನವಿಲ್ಲ. ರಾಜೀವ್ ಚಂದ್ರಶೇಖರ್ ಅವರಿಗೆ ಕೊಟ್ಟಿರುವುದರಿಂದ ಸಂತೋಷವಾಗಿದೆ. ಅವರು ಬಿಜೆಪಿಯ ನಿಷ್ಠಾವಂತ ಕಾರ್ಯಕರ್ತರಾಗಿ ಕೆಲಸ ಮಾಡುತ್ತಾರೆ ಎಂಬ ಭರವಸೆ ಇದೆ. ರಾಜೀವ್ ಚಂದ್ರಶೇಖರ್ ತಂದೆ ಜನಸಂಘದ ಸಂಸ್ಥಾಪಕರಲ್ಲಿ ಒಬ್ಬರು. ಅವರು ಅನ್ಯರಾಜ್ಯದವರು ಎಂಬ ಮಾತು ರಾಜ್ಯ ಸಭೆಗೆ ಅನ್ವಯವಾಗುವುದಿಲ್ಲ. ಕಾಂಗ್ರೆಸ್ ನವರು ನಾಟಕ ಮಾಡುತ್ತಿದ್ದಾರೆ. ಸೋನಿಯಾ, ಇಂದಿರಾಗಾಂಧಿಯನ್ನು ರಾಜ್ಯದಿಂದ ಆರಿಸಿ ಕಳಿಸಲಾಗಿತ್ತು. ಅದನ್ನು ಕಾಂಗ್ರೆಸ್ ನೆನಪು ಇಟ್ಟುಕೊಳ್ಳಬೇಕು.

ಸಿದ್ದರಾಮಯ್ಯ ನಾಟಕಕಾರ: ಮುಖ್ಯಮಂತ್ರಿ ಸಿದ್ದರಾಮಯ್ಯ ಮಹಾನ್ ನಾಟಕಕಾರ. ಜಾತಿ ಆಧಾರಿತವಾಗಿ ಮಾತನಾಡುತ್ತಾರೆ. ಧರ್ಮ ಒಡೆಯುವ ಹುನ್ನಾರ ನಡೆಸಿದ್ದಾರೆ. ಜಾತಿಯ ಆಧಾರದಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಲಿಂಗಾಯತ ಪ್ರತ್ಯೇಕತೆ ವರದಿಯನ್ನು ಸಿದ್ದರಾಮಯ್ಯ ಕೊಡಿಸಿದ್ದಾರೆ. ಈ ದೇಶಕ್ಕೆ ಅದ್ಭುತವಾದ ಪ್ರಧಾನಿ ದೊರಕಿದ್ದಾರೆ. ದೇಶ ಮೋದಿ ಅವರ ನೇತೃತ್ವದಲ್ಲಿ ಉತ್ತಮ ಕಾರ್ಯ ಮಾಡುತ್ತಿದ್ದಾರೆ. ದೇಶ ಅವರನ್ನು ಹೆಮ್ಮೆಯಿಂದ ಒಪ್ಪಿಕೊಳ್ಳುತ್ತಿದೆ ಎಂದು ಹೇಳಿದರು.

0
Shares
  • Share On Facebook
  • Tweet It




Trending Now
ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
Tulunadu News February 4, 2026
ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
Tulunadu News January 30, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
  • Popular Posts

    • 1
      ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!

  • Privacy Policy
  • Contact
© Tulunadu Infomedia.

Press enter/return to begin your search