• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ರಾಜ್ಯ ಸರ್ಕಾರ ಹಿಂದೂಗಳಿಗೆ ಅನ್ಯಾಯ ಮಾಡಿದೆ, ಸಿದ್ದರಾಮಯ್ಯ ನಾಟಕಕಾರ: ವಿಜಯ ಸಂಕೇಶ್ವರ

TNN Correspondent Posted On March 13, 2018
0


0
Shares
  • Share On Facebook
  • Tweet It

ಹುಬ್ಬಳ್ಳಿ: ಕರ್ನಾಟಕದಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಹಿಂದೂ ವಿರೋಧಿಯಾಗಿ ಕಾರ್ಯ ನಿರ್ವಹಿಸುತ್ತಿದೆ. ಜಾತಿಗಳನ್ನು ಒಡೆದು ಆಳುವ ಹುನ್ನಾರ ನಡೆಸುತ್ತಿದ್ದಾರೆ ಎಂದು ವಿಆರ್ ಎಲ್ ಸಮೂಹ ಸಂಸ್ಥೆಗಳ ಅಧ್ಯಕ್ಷ, ಬಿಜೆಪಿ ಮುಖಂಡ ವಿಜಯ ಸಂಕೇಶ್ವರ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾನು ಬಿಜೆಪಿಯ ನಿಷ್ಠಾವಂತ ಕಾರ್ಯಕರ್ತ 30 ವರ್ಷದಿಂದ ಬಿಜೆಪಿಯನ್ನು ಕಟ್ಟಲು ಶ್ರಮಿಸಿದ್ದೇನೆ. ಮುಂದೆಯೂ ಶ್ರಮಿಸುತ್ತೇನೆ. ಯಾವುದೇ ಕಾರಣಕ್ಕೂ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೇರಲು ಬಿಡುವುದಿಲ್ಲ. ಕಾಂಗ್ರೆಸ್ ಹಿಂದೂ ವಿರೋಧಿ ನೀತಿಯನ್ನು ಅನುಸರಿಸುತ್ತಿದೆ. ಕಾಂಗ್ರೆಸ್ ಹಠಾವೋ ಅಭಿಯಾನಕ್ಕೆ ಕೈ ಜೋಡಿಸುತ್ತೇನೆ. ನಾನು ಬಿಜೆಪಿಯ ಶಿಸ್ತಿನ ಕಾರ್ಯಕರ್ತ. ನಾನು ಬಿಜೆಪಿಯನ್ನು ಮದುವೆಯಾಗಿದ್ದೇನೆ. ನಾನು ಬಿಜೆಪಿಯ ಸೇವಕನಾಗಿದ್ದೇನೆ ಎಂದು ಹೇಳಿದರು.

ನನಗೆ ರಾಜ್ಯಸಭೆಯ ಸ್ಥಾನ ನೀಡದಿರುವುದಕ್ಕೆ ಯಾವುದೇ ಅಸಮಾಧಾನವಿಲ್ಲ. ರಾಜೀವ್ ಚಂದ್ರಶೇಖರ್ ಅವರಿಗೆ ಕೊಟ್ಟಿರುವುದರಿಂದ ಸಂತೋಷವಾಗಿದೆ. ಅವರು ಬಿಜೆಪಿಯ ನಿಷ್ಠಾವಂತ ಕಾರ್ಯಕರ್ತರಾಗಿ ಕೆಲಸ ಮಾಡುತ್ತಾರೆ ಎಂಬ ಭರವಸೆ ಇದೆ. ರಾಜೀವ್ ಚಂದ್ರಶೇಖರ್ ತಂದೆ ಜನಸಂಘದ ಸಂಸ್ಥಾಪಕರಲ್ಲಿ ಒಬ್ಬರು. ಅವರು ಅನ್ಯರಾಜ್ಯದವರು ಎಂಬ ಮಾತು ರಾಜ್ಯ ಸಭೆಗೆ ಅನ್ವಯವಾಗುವುದಿಲ್ಲ. ಕಾಂಗ್ರೆಸ್ ನವರು ನಾಟಕ ಮಾಡುತ್ತಿದ್ದಾರೆ. ಸೋನಿಯಾ, ಇಂದಿರಾಗಾಂಧಿಯನ್ನು ರಾಜ್ಯದಿಂದ ಆರಿಸಿ ಕಳಿಸಲಾಗಿತ್ತು. ಅದನ್ನು ಕಾಂಗ್ರೆಸ್ ನೆನಪು ಇಟ್ಟುಕೊಳ್ಳಬೇಕು.

ಸಿದ್ದರಾಮಯ್ಯ ನಾಟಕಕಾರ: ಮುಖ್ಯಮಂತ್ರಿ ಸಿದ್ದರಾಮಯ್ಯ ಮಹಾನ್ ನಾಟಕಕಾರ. ಜಾತಿ ಆಧಾರಿತವಾಗಿ ಮಾತನಾಡುತ್ತಾರೆ. ಧರ್ಮ ಒಡೆಯುವ ಹುನ್ನಾರ ನಡೆಸಿದ್ದಾರೆ. ಜಾತಿಯ ಆಧಾರದಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಲಿಂಗಾಯತ ಪ್ರತ್ಯೇಕತೆ ವರದಿಯನ್ನು ಸಿದ್ದರಾಮಯ್ಯ ಕೊಡಿಸಿದ್ದಾರೆ. ಈ ದೇಶಕ್ಕೆ ಅದ್ಭುತವಾದ ಪ್ರಧಾನಿ ದೊರಕಿದ್ದಾರೆ. ದೇಶ ಮೋದಿ ಅವರ ನೇತೃತ್ವದಲ್ಲಿ ಉತ್ತಮ ಕಾರ್ಯ ಮಾಡುತ್ತಿದ್ದಾರೆ. ದೇಶ ಅವರನ್ನು ಹೆಮ್ಮೆಯಿಂದ ಒಪ್ಪಿಕೊಳ್ಳುತ್ತಿದೆ ಎಂದು ಹೇಳಿದರು.

0
Shares
  • Share On Facebook
  • Tweet It




Trending Now
ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
Tulunadu News April 14, 2026
ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
Tulunadu News April 7, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!

  • Privacy Policy
  • Contact
© Tulunadu Infomedia.

Press enter/return to begin your search