• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ತನ್ನ ಮಗು ಎರಡು ತಿಂಗಳಲ್ಲಿ ಕಣ್ಣು ಬಿಡುವ ಮೊದಲೇ ಹುತಾತ್ಮನಾದ ಹಾಸನದ ಯೋಧ!

TNN Correspondent Posted On March 14, 2018
0


0
Shares
  • Share On Facebook
  • Tweet It

ಹಾಸನ: ಒಂದು ವರ್ಷದ ಹಿಂದೆ ಆ ಯೋಧನ ಮದುವೆಯಾಗಿತ್ತು. ವರ್ಷ ತುಂಬುವ ಮೊದಲೇ ಆ ಯೋಧನಿಗೆ ಸಿಹಿ ಸುದ್ದಿ ಕಾದಿತ್ತು. ಇನ್ನೆರಡು ತಿಂಗಳು ಕಳೆದಿದ್ದರೆ ತಮ್ಮ ದಾಂಪತ್ಯದ ಕುರುಹಾಗಿ ಮನೆ ಹಾಗೂ ಮನಕ್ಕೊಂದು ಕಂದಮ್ಮನ ಪ್ರವೇಶವಾಗುವುದಿತ್ತು. ಆ ಯೋಧನಿಗೂ ಗಡಿಯಲ್ಲಿ ಮಗ ಹುಟ್ಟಿದರೆ ಹೇಗಿರಬಹುದು, ಮಗಳು ಹುಟ್ಟಿದರೆ ಏನು ಹೆಸರಿಡುವುದು ಎಂದು ನೆನಪು ಬರುತ್ತಿತ್ತೇನೋ?

ಆದರೆ ವಿಧಿಯಾಟವೇ ಬೇರೆ ಇತ್ತು. ಅದರ ಲೆಕ್ಕಾಚಾರವೇ ಬೇರೆಯಾಗಿತ್ತು. ಹೊಸ ಚಿಗುರು ಹೊರಬರುವ ಮುನ್ನವೇ ಅಪ್ಪ ಎಂಬ ಆಲದ ಮರವೇ ಇಲ್ಲ ಎಂಬ ಮಾತೇ ಕರಳು ಚುರುಕ್ ಎನಿಸುತ್ತದೆ. ಅಂತಹ ದುರದೃಷ್ಟ ಶತ್ರುವಿನದ್ದೂ ಆಗಬಾರದು ಎನಿಸುತ್ತದೆ.

ಆದರೆ ಹಾಸನದ ಯೋಧರೊಬ್ಬರ ಬಾಳಲ್ಲಿ ವಿಧಿ ಇಂತಹ ಕ್ರೂರ ಆಟವೊಂದು ಆಡಿಬಿಟ್ಟಿದೆ. ಹೌದು, ಛತ್ತೀಸ್ ಗಡದ ಸುಕ್ಮಾದಲ್ಲಿ ನಕ್ಸಲರು ಮಾಡಿದ ಅಟ್ಟಹಾಸದಲ್ಲಿ ಹಾಸನದ ಹರದೂರು ಗ್ರಾಮದ ಯೋಧ, 29 ವರ್ಷದ ಚಂದ್ರು ಹುತಾತ್ಮರಾಗಿದ್ದಾರೆ. ದಾಳಿ ವೇಳೆ ಭಾರತದ ಒಂಬತ್ತು ಯೋಧರು ಹುತಾತ್ಮರಾಗಿದ್ದು, ಹಾಸನದ ಈ ವೀರಯೋಧನೂ ಸೇರಿದ್ದಾನೆ ಎಂಬುದೇ ರಾಜ್ಯವನ್ನು ದುಃಖತಪ್ತರನ್ನಾಗಿಸಿದೆ. ಇನ್ನು ಆ ಕುಟುಂಬದ ಪರಿಸ್ಥಿತಿ ಹೇಗಾಗಿರಬೇಡ?

ಸ್ವಾಮಿ ಗೌಡ ಎಂಬುವವರ ಪುತ್ರನಾಗಿರುವ ಚಂದ್ರು ಐದು ವರ್ಷಗಳ ಹಿಂದೆ ಸೈನ್ಯ ಸೇರಿದ್ದರು. ಕಳೆದ ವರ್ಷವಷ್ಟೇ ಅಕ್ಕನ ಮಗಳ ಜತೆ ಮದುವೆಯಾಗಿದ್ದ ಚಂದ್ರು ಇನ್ನೆರಡು ತಿಂಗಳಲ್ಲಿ ಮಗು ಎತ್ತಿ ಮುದ್ದಾಡುವ ತವಕದಲ್ಲಿದ್ದ. ಆದರೆ ವಿಧಿಯ ಆಟಕ್ಕೆ ಆ ವೀರ ಯೋಧ ಹುತಾತ್ಮನಾಗಿ ಹೋದನಲ್ಲ ಎಂಬ ಬೇಸರ ಎಲ್ಲರಲ್ಲೂ ಕಾಡುತ್ತಿದೆ. ಛೇ!

0
Shares
  • Share On Facebook
  • Tweet It




Trending Now
ಯುಕೆ ಪ್ರಧಾನಿ ಪದದಿಂದ ಇಳಿದ ಬಳಿಕ ಖಾಸಗಿ ಉದ್ಯೋಗಕ್ಕೆ ಮರಳಿದ ರಿಶಿ ಸುನಾಕ್!
Tulunadu News July 9, 2025
ಉದಯಪುರ್ ಫೈಲ್ಸ್ ಸಿನೆಮಾಗೆ ತಡೆಯಾಜ್ಞೆ ನೀಡಲು ಸುಪ್ರೀಂಕೋರ್ಟ್ ನಕಾರ!
Tulunadu News July 9, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಯುಕೆ ಪ್ರಧಾನಿ ಪದದಿಂದ ಇಳಿದ ಬಳಿಕ ಖಾಸಗಿ ಉದ್ಯೋಗಕ್ಕೆ ಮರಳಿದ ರಿಶಿ ಸುನಾಕ್!
    • ಉದಯಪುರ್ ಫೈಲ್ಸ್ ಸಿನೆಮಾಗೆ ತಡೆಯಾಜ್ಞೆ ನೀಡಲು ಸುಪ್ರೀಂಕೋರ್ಟ್ ನಕಾರ!
    • ಚರ್ಚಿನಲ್ಲಿ ಪ್ರಾರ್ಥನೆ: ಟಿಟಿಡಿ ಅಧಿಕಾರಿ ಸಸ್ಪೆಂಡ್!
    • ಹೇರ್ ಪಿನ್ ಹಾಗೂ ಪಾಕೆಟ್ ಚಾಕು ಬಳಸಿ ಪ್ಲಾಟ್ ಫಾರಂನಲ್ಲಿ ಹೆರಿಗೆ ಮಾಡಿದ ವೈದ್ಯ!
    • ಅನ್ನಭಾಗ್ಯ ಅಕ್ಕಿ ಸಾಗಿಸಿದ ಮಾಲೀಕರಿಗೆ ಹಣ ಬಾಕಿ.. ರಾಜ್ಯ ಸರಕಾರದ ವಿರುದ್ಧ ಅನಿರ್ದಿಷ್ಟಾವಧಿ ಲಾರಿ ಮುಷ್ಕರ!
    • ನನಗಾಗಿ ಚಿಂತಿಸಬೇಡಾ, ದೇಶಕ್ಕಾಗಿ ಆಡು.. ಆಕಾಶ್ ದೀಪ್ ತಂಗಿಯ ಭಾವನಾತ್ಮಕ ಮಾತು! ಏನಾಗಿದೆ ಆಕೆಗೆ...
    • ಕನ್ನಯ್ಯ ಲಾಲ್ ಹತ್ಯಾ ಕಥೆಯುಳ್ಳ ಉದಯಪುರ್ ಫೈಲ್ ಸಿನೆಮಾ ಬಿಡುಗಡೆಗೆ ತಡೆ ಕೋರಿ ಜಮಿಯತ್ ಉಲ್ಮಾ ಐ ಹಿಂದ್ ಉಚ್ಚನ್ಯಾಯಾಲಯಕ್ಕೆ!
    • ಕರ್ನಾಟಕದಲ್ಲಿ ಮುಸ್ಲಿಮರಿಲ್ಲದ ಊರಿನಲ್ಲಿ ಹಿಂದೂ ಸಮಾಜದಿಂದ ಮೊಹರಂ ಆಚರಣೆ!
    • ಗ್ಯಾರಂಟಿ ಅಥವಾ ಅಭಿವೃದ್ಧಿ: ಸಿಎಂ ಆರ್ಥಿಕ ಸಲಹೆಗಾರ ರಾಯರೆಡ್ಡಿ ಜನರ ಮುಂದೆ ಆಯ್ಕೆ ಇಟ್ರಾ?
    • 20 ವರ್ಷಗಳ ಬಳಿಕ ರಾಜ್ ಠಾಕ್ರೆ ಹಾಗೂ ಉದ್ದವ್ ಠಾಕ್ರೆ ಸಮ್ಮಿಲನ!
  • Popular Posts

    • 1
      ಯುಕೆ ಪ್ರಧಾನಿ ಪದದಿಂದ ಇಳಿದ ಬಳಿಕ ಖಾಸಗಿ ಉದ್ಯೋಗಕ್ಕೆ ಮರಳಿದ ರಿಶಿ ಸುನಾಕ್!
    • 2
      ಉದಯಪುರ್ ಫೈಲ್ಸ್ ಸಿನೆಮಾಗೆ ತಡೆಯಾಜ್ಞೆ ನೀಡಲು ಸುಪ್ರೀಂಕೋರ್ಟ್ ನಕಾರ!
    • 3
      ಚರ್ಚಿನಲ್ಲಿ ಪ್ರಾರ್ಥನೆ: ಟಿಟಿಡಿ ಅಧಿಕಾರಿ ಸಸ್ಪೆಂಡ್!
    • 4
      ಹೇರ್ ಪಿನ್ ಹಾಗೂ ಪಾಕೆಟ್ ಚಾಕು ಬಳಸಿ ಪ್ಲಾಟ್ ಫಾರಂನಲ್ಲಿ ಹೆರಿಗೆ ಮಾಡಿದ ವೈದ್ಯ!
    • 5
      ಅನ್ನಭಾಗ್ಯ ಅಕ್ಕಿ ಸಾಗಿಸಿದ ಮಾಲೀಕರಿಗೆ ಹಣ ಬಾಕಿ.. ರಾಜ್ಯ ಸರಕಾರದ ವಿರುದ್ಧ ಅನಿರ್ದಿಷ್ಟಾವಧಿ ಲಾರಿ ಮುಷ್ಕರ!

  • Privacy Policy
  • Contact
© Tulunadu Infomedia.

Press enter/return to begin your search