• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ತನ್ನ ಮಗು ಎರಡು ತಿಂಗಳಲ್ಲಿ ಕಣ್ಣು ಬಿಡುವ ಮೊದಲೇ ಹುತಾತ್ಮನಾದ ಹಾಸನದ ಯೋಧ!

TNN Correspondent Posted On March 14, 2018
0


0
Shares
  • Share On Facebook
  • Tweet It

ಹಾಸನ: ಒಂದು ವರ್ಷದ ಹಿಂದೆ ಆ ಯೋಧನ ಮದುವೆಯಾಗಿತ್ತು. ವರ್ಷ ತುಂಬುವ ಮೊದಲೇ ಆ ಯೋಧನಿಗೆ ಸಿಹಿ ಸುದ್ದಿ ಕಾದಿತ್ತು. ಇನ್ನೆರಡು ತಿಂಗಳು ಕಳೆದಿದ್ದರೆ ತಮ್ಮ ದಾಂಪತ್ಯದ ಕುರುಹಾಗಿ ಮನೆ ಹಾಗೂ ಮನಕ್ಕೊಂದು ಕಂದಮ್ಮನ ಪ್ರವೇಶವಾಗುವುದಿತ್ತು. ಆ ಯೋಧನಿಗೂ ಗಡಿಯಲ್ಲಿ ಮಗ ಹುಟ್ಟಿದರೆ ಹೇಗಿರಬಹುದು, ಮಗಳು ಹುಟ್ಟಿದರೆ ಏನು ಹೆಸರಿಡುವುದು ಎಂದು ನೆನಪು ಬರುತ್ತಿತ್ತೇನೋ?

ಆದರೆ ವಿಧಿಯಾಟವೇ ಬೇರೆ ಇತ್ತು. ಅದರ ಲೆಕ್ಕಾಚಾರವೇ ಬೇರೆಯಾಗಿತ್ತು. ಹೊಸ ಚಿಗುರು ಹೊರಬರುವ ಮುನ್ನವೇ ಅಪ್ಪ ಎಂಬ ಆಲದ ಮರವೇ ಇಲ್ಲ ಎಂಬ ಮಾತೇ ಕರಳು ಚುರುಕ್ ಎನಿಸುತ್ತದೆ. ಅಂತಹ ದುರದೃಷ್ಟ ಶತ್ರುವಿನದ್ದೂ ಆಗಬಾರದು ಎನಿಸುತ್ತದೆ.

ಆದರೆ ಹಾಸನದ ಯೋಧರೊಬ್ಬರ ಬಾಳಲ್ಲಿ ವಿಧಿ ಇಂತಹ ಕ್ರೂರ ಆಟವೊಂದು ಆಡಿಬಿಟ್ಟಿದೆ. ಹೌದು, ಛತ್ತೀಸ್ ಗಡದ ಸುಕ್ಮಾದಲ್ಲಿ ನಕ್ಸಲರು ಮಾಡಿದ ಅಟ್ಟಹಾಸದಲ್ಲಿ ಹಾಸನದ ಹರದೂರು ಗ್ರಾಮದ ಯೋಧ, 29 ವರ್ಷದ ಚಂದ್ರು ಹುತಾತ್ಮರಾಗಿದ್ದಾರೆ. ದಾಳಿ ವೇಳೆ ಭಾರತದ ಒಂಬತ್ತು ಯೋಧರು ಹುತಾತ್ಮರಾಗಿದ್ದು, ಹಾಸನದ ಈ ವೀರಯೋಧನೂ ಸೇರಿದ್ದಾನೆ ಎಂಬುದೇ ರಾಜ್ಯವನ್ನು ದುಃಖತಪ್ತರನ್ನಾಗಿಸಿದೆ. ಇನ್ನು ಆ ಕುಟುಂಬದ ಪರಿಸ್ಥಿತಿ ಹೇಗಾಗಿರಬೇಡ?

ಸ್ವಾಮಿ ಗೌಡ ಎಂಬುವವರ ಪುತ್ರನಾಗಿರುವ ಚಂದ್ರು ಐದು ವರ್ಷಗಳ ಹಿಂದೆ ಸೈನ್ಯ ಸೇರಿದ್ದರು. ಕಳೆದ ವರ್ಷವಷ್ಟೇ ಅಕ್ಕನ ಮಗಳ ಜತೆ ಮದುವೆಯಾಗಿದ್ದ ಚಂದ್ರು ಇನ್ನೆರಡು ತಿಂಗಳಲ್ಲಿ ಮಗು ಎತ್ತಿ ಮುದ್ದಾಡುವ ತವಕದಲ್ಲಿದ್ದ. ಆದರೆ ವಿಧಿಯ ಆಟಕ್ಕೆ ಆ ವೀರ ಯೋಧ ಹುತಾತ್ಮನಾಗಿ ಹೋದನಲ್ಲ ಎಂಬ ಬೇಸರ ಎಲ್ಲರಲ್ಲೂ ಕಾಡುತ್ತಿದೆ. ಛೇ!

0
Shares
  • Share On Facebook
  • Tweet It




Trending Now
ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
Tulunadu News October 22, 2025
ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
Tulunadu News October 22, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
    • ದೀಪಾವಳಿ ಬೋನಸ್ ಕಡಿಮೆ ಕೊಟ್ಟಿದ್ದಕ್ಕೆ ಟೋಲ್ ಸಿಬ್ಬಂದಿಗಳು ಮಾಡಿದ್ದೇನು?
    • ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
    • ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
    • "ಒಂದು ಶೋಗಾಗಿ ಕೈಕಾಲು ಹಿಡಿಯುತ್ತಿದ್ದ ಕಾಲದಿಂದ..." ರಿಷಬ್ ಶೆಟ್ಟಿ 2016 ರ ಘಟನೆಯನ್ನು ನೆನಪಿಸಿಕೊಂಡದ್ದು ಯಾಕೆ?
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಕ್ರಮ ಕಸಾಯಿಖಾನೆ ಮುಟ್ಟುಗೋಲು ಹಾಕಿದ ಪ್ರಥಮ ಪ್ರಕರಣ ದಾಖಲು - ಎಸ್ಪಿ
    • ಗೆದ್ದರೂ ಟ್ರೋಫಿ ಪಡೆಯದೇ ದಿಟ್ಟ ಉತ್ತರ ನೀಡಿದ ಭಾರತೀಯ ತಂಡಕ್ಕೆ ಭೇಷ್!
    • ಕೇವಲ ₹100 ಲಂಚದ ಪ್ರಕರಣದಲ್ಲಿ 39 ವರ್ಷಗಳ ಬಳಿಕ ನಿರ್ದೋಷಿ ಘೋಷಣೆ!
    • ನಮ್ಮ ಜಿಲ್ಲೆಗೆ ಕಳುಹಿಸಬೇಡಿ, ಬೇಕಾದರೆ ಕಾಡಿಗೆ ಕಳುಹಿಸಿ ಎಂದು ರಾಯಚೂರಿನಲ್ಲಿ ತಿಮರೋಡಿ ವಿರುದ್ಧ ಪ್ರತಿಭಟನೆ!
  • Popular Posts

    • 1
      ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • 2
      ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
    • 3
      ದೀಪಾವಳಿ ಬೋನಸ್ ಕಡಿಮೆ ಕೊಟ್ಟಿದ್ದಕ್ಕೆ ಟೋಲ್ ಸಿಬ್ಬಂದಿಗಳು ಮಾಡಿದ್ದೇನು?

  • Privacy Policy
  • Contact
© Tulunadu Infomedia.

Press enter/return to begin your search