• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ತನ್ನ ಮಗು ಎರಡು ತಿಂಗಳಲ್ಲಿ ಕಣ್ಣು ಬಿಡುವ ಮೊದಲೇ ಹುತಾತ್ಮನಾದ ಹಾಸನದ ಯೋಧ!

TNN Correspondent Posted On March 14, 2018


  • Share On Facebook
  • Tweet It

ಹಾಸನ: ಒಂದು ವರ್ಷದ ಹಿಂದೆ ಆ ಯೋಧನ ಮದುವೆಯಾಗಿತ್ತು. ವರ್ಷ ತುಂಬುವ ಮೊದಲೇ ಆ ಯೋಧನಿಗೆ ಸಿಹಿ ಸುದ್ದಿ ಕಾದಿತ್ತು. ಇನ್ನೆರಡು ತಿಂಗಳು ಕಳೆದಿದ್ದರೆ ತಮ್ಮ ದಾಂಪತ್ಯದ ಕುರುಹಾಗಿ ಮನೆ ಹಾಗೂ ಮನಕ್ಕೊಂದು ಕಂದಮ್ಮನ ಪ್ರವೇಶವಾಗುವುದಿತ್ತು. ಆ ಯೋಧನಿಗೂ ಗಡಿಯಲ್ಲಿ ಮಗ ಹುಟ್ಟಿದರೆ ಹೇಗಿರಬಹುದು, ಮಗಳು ಹುಟ್ಟಿದರೆ ಏನು ಹೆಸರಿಡುವುದು ಎಂದು ನೆನಪು ಬರುತ್ತಿತ್ತೇನೋ?

ಆದರೆ ವಿಧಿಯಾಟವೇ ಬೇರೆ ಇತ್ತು. ಅದರ ಲೆಕ್ಕಾಚಾರವೇ ಬೇರೆಯಾಗಿತ್ತು. ಹೊಸ ಚಿಗುರು ಹೊರಬರುವ ಮುನ್ನವೇ ಅಪ್ಪ ಎಂಬ ಆಲದ ಮರವೇ ಇಲ್ಲ ಎಂಬ ಮಾತೇ ಕರಳು ಚುರುಕ್ ಎನಿಸುತ್ತದೆ. ಅಂತಹ ದುರದೃಷ್ಟ ಶತ್ರುವಿನದ್ದೂ ಆಗಬಾರದು ಎನಿಸುತ್ತದೆ.

ಆದರೆ ಹಾಸನದ ಯೋಧರೊಬ್ಬರ ಬಾಳಲ್ಲಿ ವಿಧಿ ಇಂತಹ ಕ್ರೂರ ಆಟವೊಂದು ಆಡಿಬಿಟ್ಟಿದೆ. ಹೌದು, ಛತ್ತೀಸ್ ಗಡದ ಸುಕ್ಮಾದಲ್ಲಿ ನಕ್ಸಲರು ಮಾಡಿದ ಅಟ್ಟಹಾಸದಲ್ಲಿ ಹಾಸನದ ಹರದೂರು ಗ್ರಾಮದ ಯೋಧ, 29 ವರ್ಷದ ಚಂದ್ರು ಹುತಾತ್ಮರಾಗಿದ್ದಾರೆ. ದಾಳಿ ವೇಳೆ ಭಾರತದ ಒಂಬತ್ತು ಯೋಧರು ಹುತಾತ್ಮರಾಗಿದ್ದು, ಹಾಸನದ ಈ ವೀರಯೋಧನೂ ಸೇರಿದ್ದಾನೆ ಎಂಬುದೇ ರಾಜ್ಯವನ್ನು ದುಃಖತಪ್ತರನ್ನಾಗಿಸಿದೆ. ಇನ್ನು ಆ ಕುಟುಂಬದ ಪರಿಸ್ಥಿತಿ ಹೇಗಾಗಿರಬೇಡ?

ಸ್ವಾಮಿ ಗೌಡ ಎಂಬುವವರ ಪುತ್ರನಾಗಿರುವ ಚಂದ್ರು ಐದು ವರ್ಷಗಳ ಹಿಂದೆ ಸೈನ್ಯ ಸೇರಿದ್ದರು. ಕಳೆದ ವರ್ಷವಷ್ಟೇ ಅಕ್ಕನ ಮಗಳ ಜತೆ ಮದುವೆಯಾಗಿದ್ದ ಚಂದ್ರು ಇನ್ನೆರಡು ತಿಂಗಳಲ್ಲಿ ಮಗು ಎತ್ತಿ ಮುದ್ದಾಡುವ ತವಕದಲ್ಲಿದ್ದ. ಆದರೆ ವಿಧಿಯ ಆಟಕ್ಕೆ ಆ ವೀರ ಯೋಧ ಹುತಾತ್ಮನಾಗಿ ಹೋದನಲ್ಲ ಎಂಬ ಬೇಸರ ಎಲ್ಲರಲ್ಲೂ ಕಾಡುತ್ತಿದೆ. ಛೇ!

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • 4
      ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • 5
      ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search