• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಬೀಡಾ ಜಗಿಯುತ್ತ ನಾಡಗೀತೆಗೆ ಅವಮಾನ ಮಾಡಿದ ಸಿದ್ದರಾಮಯ್ಯ. ಮರೆಯಾದ ಕನ್ನಡ ಹೋರಾಟಗಾರರು

TNN Correspondent Posted On March 14, 2018
0


0
Shares
  • Share On Facebook
  • Tweet It

ಹಾವೇರಿ: ರಾಜ್ಯಕ್ಕೆ ಪ್ರತ್ಯೇಕ ಧ್ವಜ, ಕನ್ನಡಿಗರ ಅಸ್ಮಿತೆ ಎಂದು ಬೊಂಬಡಾ ಬಾರಿಸುವ ಸಿದ್ದರಾಮಯ್ಯ, ಕನ್ನಡದ ಭಾಷೆ ಹೆಸರಲ್ಲಿ ತಮ್ಮ ರಾಜಕೀಯ ಬೇಳೆ ಬೇಯಿಸಿಕೊಳ್ಳುತ್ತಿರುವುದು ಇಡೀ ರಾಜ್ಯಕ್ಕೆ ಗೊತ್ತಿರುವ ವಿಚಾರ. ಭಾಷೆಯನ್ನು ತಮ್ಮ ರಾಜಕೀಯಕ್ಕೆ ಅಸ್ತ್ರವಾಗಿಟ್ಟುಕೊಂಡು ದೇಶದ ಏಕತೆಗೆ ಭಂಗ ಉಂಟು ಮಾಡಿದ ಸಿದ್ದರಾಮಯ್ಯಗೆ ವಾಸ್ತವದಲ್ಲಿ ರಾಜ್ಯ, ರಾಜ್ಯದ ಕನ್ನಡ, ನಾಡ ಗೀತೆಯ ಮೇಲೆ ಅಭಿಮಾನವಿಲ್ಲ ಎಂಬುದನ್ನು ಸಾಬೀತು ಮಾಡಿದ್ದಾರೆ. ಅದಕ್ಕೆ ಹಾವೇರಿಯಲ್ಲಿ ನಡೆದ ಕಾರ್ಯಕ್ರಮವೇ ಸಾಕ್ಷಿಯಾಗಿದೆ.

ರಾಜ್ಯದ ಏಕತೆ, ಕಲೆ, ಸಂಸ್ಕೃತಿಯನ್ನು ಬಿಂಬಿಸುವ ನಾಡಗೀತೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವಮಾನ ಮಾಡುವ ಮೂಲಕ ರಾಜ್ಯದ ಆರು ಕೋಟಿ ಕನ್ನಡಿಗರ ಭಾವನೆಗಳಿಗೆ ಧಕ್ಕೆತಂದಿದ್ದಾರೆ. ಸರ್ಕಾರಿ ಕಾರ್ಯಕ್ರಮಕ್ಕೆ ಆಗಮಿಸಿದ ಸಿಎಂ ಸಿದ್ದರಾಮಯ್ಯ ನಾಡಗೀತೆ ಹಾಡುವ ವೇಳೆ ಬೀಡ ಜಗಿಯುತ್ತಾ, ಮೋಜು ಮಾಡುತ್ತಾ ನಿಂತಿದ್ದಾರೆ. ಬೀಡಿ ಜಗಿಯುವುವುದು ನಾಡಗೀತೆ ಆರಂಭದ ನಂತರವೂ ಸ್ಥಗಿತವಾಗದೇ, ಇಡೀ ಗೀತೆ ಮುಗಿಯುವವರೆಗೆ ಬೀಡಾ ಜಗಿಯುತ್ತಾ ನಿಂತಿರುವುದು ಸಭೀಕರ ಆಕ್ರೋಶಕ್ಕೆ ಕಾರಣವಾಯಿತು.

ಹಾವೇರಿ ತಾಲೂಕಿನ ಅಸುಂಡಿ ಗ್ರಾಮದಲ್ಲಿ ಅಸುಂಡಿ ಕೆರೆ ಸೇರಿ 17 ಕೆರೆಗಳನ್ನು ತುಂಬಿಸುವ 92 ಕೋಟಿ ರೂ. ಮೊತ್ತದ ಏತ ನೀರಾವರಿ ಯೋಜನೆಗೆ ಚಾಲನೆ ನೀಡುವ ಕಾರ್ಯಕ್ರಮದಲ್ಲಿ ರಾಜಕೀಯ ಭಾಷಣ ಮಾಡಿದ ಸಿದ್ದರಾಮಯ್ಯ,  ತಮ್ಮ ಹಳೆಯ ಹಳಬಂಡಗಳನ್ನು ತೋರ್ಪಡಿಸಿ ಕುವೆಂಪು ಅವರ ನಾಡಗೀತೆಯ ಸಾಲುಗಳಾದ ಸರ್ವ ಜನಾಂಗದ ಶಾಂತಿಯ ತೋಟ ಸೇರಿ ನಾನಾ ಸಾಲುಗಳನ್ನು ಉಲ್ಲೇಖಿಸಿ, ಇದನ್ನು ಮೋಜಿಗಾಗಿ ಹಾಡುವುದಲ್ಲ. ಹಾಡಿದಂತೆ ನಡೆದುಕೊಳ್ಳಬೇಕು ಎಂದು ಹೇಳಿದ ಮಾತು ಹಾಸ್ಯಸ್ಪದವಾಗಿ ಮಾರ್ಪಟ್ಟಿತ್ತು. ನಾಡಗೀತೆಗೆ ಗೌರವ ನೀಡದ ವ್ಯಕ್ತಿ ಸಿಎಂ ತಮ್ಮ ಬಾಯಿಯಿಂದ ನುಡಿ ಮುತ್ತು ಉದುರಿಸಿರುವುದು ಜನರ ಲೇವಡಿಗೆ ಕಾರಣವಾಯಿತು.

0
Shares
  • Share On Facebook
  • Tweet It




Trending Now
'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
Tulunadu News February 11, 2026
ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
Tulunadu News February 10, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • 'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
  • Popular Posts

    • 1
      'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • 2
      ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • 3
      ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್

  • Privacy Policy
  • Contact
© Tulunadu Infomedia.

Press enter/return to begin your search