• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಬೀಡಾ ಜಗಿಯುತ್ತ ನಾಡಗೀತೆಗೆ ಅವಮಾನ ಮಾಡಿದ ಸಿದ್ದರಾಮಯ್ಯ. ಮರೆಯಾದ ಕನ್ನಡ ಹೋರಾಟಗಾರರು

TNN Correspondent Posted On March 14, 2018
0


0
Shares
  • Share On Facebook
  • Tweet It

ಹಾವೇರಿ: ರಾಜ್ಯಕ್ಕೆ ಪ್ರತ್ಯೇಕ ಧ್ವಜ, ಕನ್ನಡಿಗರ ಅಸ್ಮಿತೆ ಎಂದು ಬೊಂಬಡಾ ಬಾರಿಸುವ ಸಿದ್ದರಾಮಯ್ಯ, ಕನ್ನಡದ ಭಾಷೆ ಹೆಸರಲ್ಲಿ ತಮ್ಮ ರಾಜಕೀಯ ಬೇಳೆ ಬೇಯಿಸಿಕೊಳ್ಳುತ್ತಿರುವುದು ಇಡೀ ರಾಜ್ಯಕ್ಕೆ ಗೊತ್ತಿರುವ ವಿಚಾರ. ಭಾಷೆಯನ್ನು ತಮ್ಮ ರಾಜಕೀಯಕ್ಕೆ ಅಸ್ತ್ರವಾಗಿಟ್ಟುಕೊಂಡು ದೇಶದ ಏಕತೆಗೆ ಭಂಗ ಉಂಟು ಮಾಡಿದ ಸಿದ್ದರಾಮಯ್ಯಗೆ ವಾಸ್ತವದಲ್ಲಿ ರಾಜ್ಯ, ರಾಜ್ಯದ ಕನ್ನಡ, ನಾಡ ಗೀತೆಯ ಮೇಲೆ ಅಭಿಮಾನವಿಲ್ಲ ಎಂಬುದನ್ನು ಸಾಬೀತು ಮಾಡಿದ್ದಾರೆ. ಅದಕ್ಕೆ ಹಾವೇರಿಯಲ್ಲಿ ನಡೆದ ಕಾರ್ಯಕ್ರಮವೇ ಸಾಕ್ಷಿಯಾಗಿದೆ.

ರಾಜ್ಯದ ಏಕತೆ, ಕಲೆ, ಸಂಸ್ಕೃತಿಯನ್ನು ಬಿಂಬಿಸುವ ನಾಡಗೀತೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವಮಾನ ಮಾಡುವ ಮೂಲಕ ರಾಜ್ಯದ ಆರು ಕೋಟಿ ಕನ್ನಡಿಗರ ಭಾವನೆಗಳಿಗೆ ಧಕ್ಕೆತಂದಿದ್ದಾರೆ. ಸರ್ಕಾರಿ ಕಾರ್ಯಕ್ರಮಕ್ಕೆ ಆಗಮಿಸಿದ ಸಿಎಂ ಸಿದ್ದರಾಮಯ್ಯ ನಾಡಗೀತೆ ಹಾಡುವ ವೇಳೆ ಬೀಡ ಜಗಿಯುತ್ತಾ, ಮೋಜು ಮಾಡುತ್ತಾ ನಿಂತಿದ್ದಾರೆ. ಬೀಡಿ ಜಗಿಯುವುವುದು ನಾಡಗೀತೆ ಆರಂಭದ ನಂತರವೂ ಸ್ಥಗಿತವಾಗದೇ, ಇಡೀ ಗೀತೆ ಮುಗಿಯುವವರೆಗೆ ಬೀಡಾ ಜಗಿಯುತ್ತಾ ನಿಂತಿರುವುದು ಸಭೀಕರ ಆಕ್ರೋಶಕ್ಕೆ ಕಾರಣವಾಯಿತು.

ಹಾವೇರಿ ತಾಲೂಕಿನ ಅಸುಂಡಿ ಗ್ರಾಮದಲ್ಲಿ ಅಸುಂಡಿ ಕೆರೆ ಸೇರಿ 17 ಕೆರೆಗಳನ್ನು ತುಂಬಿಸುವ 92 ಕೋಟಿ ರೂ. ಮೊತ್ತದ ಏತ ನೀರಾವರಿ ಯೋಜನೆಗೆ ಚಾಲನೆ ನೀಡುವ ಕಾರ್ಯಕ್ರಮದಲ್ಲಿ ರಾಜಕೀಯ ಭಾಷಣ ಮಾಡಿದ ಸಿದ್ದರಾಮಯ್ಯ,  ತಮ್ಮ ಹಳೆಯ ಹಳಬಂಡಗಳನ್ನು ತೋರ್ಪಡಿಸಿ ಕುವೆಂಪು ಅವರ ನಾಡಗೀತೆಯ ಸಾಲುಗಳಾದ ಸರ್ವ ಜನಾಂಗದ ಶಾಂತಿಯ ತೋಟ ಸೇರಿ ನಾನಾ ಸಾಲುಗಳನ್ನು ಉಲ್ಲೇಖಿಸಿ, ಇದನ್ನು ಮೋಜಿಗಾಗಿ ಹಾಡುವುದಲ್ಲ. ಹಾಡಿದಂತೆ ನಡೆದುಕೊಳ್ಳಬೇಕು ಎಂದು ಹೇಳಿದ ಮಾತು ಹಾಸ್ಯಸ್ಪದವಾಗಿ ಮಾರ್ಪಟ್ಟಿತ್ತು. ನಾಡಗೀತೆಗೆ ಗೌರವ ನೀಡದ ವ್ಯಕ್ತಿ ಸಿಎಂ ತಮ್ಮ ಬಾಯಿಯಿಂದ ನುಡಿ ಮುತ್ತು ಉದುರಿಸಿರುವುದು ಜನರ ಲೇವಡಿಗೆ ಕಾರಣವಾಯಿತು.

0
Shares
  • Share On Facebook
  • Tweet It




Trending Now
ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
Tulunadu News February 25, 2026
ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
Tulunadu News February 25, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
    • ಕೇರಳ ಇನ್ನು ಮುಂದೆ ಕೇರಳಂ!
    • ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
    • ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
    • ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
  • Popular Posts

    • 1
      ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • 2
      ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
    • 3
      ಕೇರಳ ಇನ್ನು ಮುಂದೆ ಕೇರಳಂ!
    • 4
      ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!

  • Privacy Policy
  • Contact
© Tulunadu Infomedia.

Press enter/return to begin your search