• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಬೀಡಾ ಜಗಿಯುತ್ತ ನಾಡಗೀತೆಗೆ ಅವಮಾನ ಮಾಡಿದ ಸಿದ್ದರಾಮಯ್ಯ. ಮರೆಯಾದ ಕನ್ನಡ ಹೋರಾಟಗಾರರು

TNN Correspondent Posted On March 14, 2018
0


0
Shares
  • Share On Facebook
  • Tweet It

ಹಾವೇರಿ: ರಾಜ್ಯಕ್ಕೆ ಪ್ರತ್ಯೇಕ ಧ್ವಜ, ಕನ್ನಡಿಗರ ಅಸ್ಮಿತೆ ಎಂದು ಬೊಂಬಡಾ ಬಾರಿಸುವ ಸಿದ್ದರಾಮಯ್ಯ, ಕನ್ನಡದ ಭಾಷೆ ಹೆಸರಲ್ಲಿ ತಮ್ಮ ರಾಜಕೀಯ ಬೇಳೆ ಬೇಯಿಸಿಕೊಳ್ಳುತ್ತಿರುವುದು ಇಡೀ ರಾಜ್ಯಕ್ಕೆ ಗೊತ್ತಿರುವ ವಿಚಾರ. ಭಾಷೆಯನ್ನು ತಮ್ಮ ರಾಜಕೀಯಕ್ಕೆ ಅಸ್ತ್ರವಾಗಿಟ್ಟುಕೊಂಡು ದೇಶದ ಏಕತೆಗೆ ಭಂಗ ಉಂಟು ಮಾಡಿದ ಸಿದ್ದರಾಮಯ್ಯಗೆ ವಾಸ್ತವದಲ್ಲಿ ರಾಜ್ಯ, ರಾಜ್ಯದ ಕನ್ನಡ, ನಾಡ ಗೀತೆಯ ಮೇಲೆ ಅಭಿಮಾನವಿಲ್ಲ ಎಂಬುದನ್ನು ಸಾಬೀತು ಮಾಡಿದ್ದಾರೆ. ಅದಕ್ಕೆ ಹಾವೇರಿಯಲ್ಲಿ ನಡೆದ ಕಾರ್ಯಕ್ರಮವೇ ಸಾಕ್ಷಿಯಾಗಿದೆ.

ರಾಜ್ಯದ ಏಕತೆ, ಕಲೆ, ಸಂಸ್ಕೃತಿಯನ್ನು ಬಿಂಬಿಸುವ ನಾಡಗೀತೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವಮಾನ ಮಾಡುವ ಮೂಲಕ ರಾಜ್ಯದ ಆರು ಕೋಟಿ ಕನ್ನಡಿಗರ ಭಾವನೆಗಳಿಗೆ ಧಕ್ಕೆತಂದಿದ್ದಾರೆ. ಸರ್ಕಾರಿ ಕಾರ್ಯಕ್ರಮಕ್ಕೆ ಆಗಮಿಸಿದ ಸಿಎಂ ಸಿದ್ದರಾಮಯ್ಯ ನಾಡಗೀತೆ ಹಾಡುವ ವೇಳೆ ಬೀಡ ಜಗಿಯುತ್ತಾ, ಮೋಜು ಮಾಡುತ್ತಾ ನಿಂತಿದ್ದಾರೆ. ಬೀಡಿ ಜಗಿಯುವುವುದು ನಾಡಗೀತೆ ಆರಂಭದ ನಂತರವೂ ಸ್ಥಗಿತವಾಗದೇ, ಇಡೀ ಗೀತೆ ಮುಗಿಯುವವರೆಗೆ ಬೀಡಾ ಜಗಿಯುತ್ತಾ ನಿಂತಿರುವುದು ಸಭೀಕರ ಆಕ್ರೋಶಕ್ಕೆ ಕಾರಣವಾಯಿತು.

ಹಾವೇರಿ ತಾಲೂಕಿನ ಅಸುಂಡಿ ಗ್ರಾಮದಲ್ಲಿ ಅಸುಂಡಿ ಕೆರೆ ಸೇರಿ 17 ಕೆರೆಗಳನ್ನು ತುಂಬಿಸುವ 92 ಕೋಟಿ ರೂ. ಮೊತ್ತದ ಏತ ನೀರಾವರಿ ಯೋಜನೆಗೆ ಚಾಲನೆ ನೀಡುವ ಕಾರ್ಯಕ್ರಮದಲ್ಲಿ ರಾಜಕೀಯ ಭಾಷಣ ಮಾಡಿದ ಸಿದ್ದರಾಮಯ್ಯ,  ತಮ್ಮ ಹಳೆಯ ಹಳಬಂಡಗಳನ್ನು ತೋರ್ಪಡಿಸಿ ಕುವೆಂಪು ಅವರ ನಾಡಗೀತೆಯ ಸಾಲುಗಳಾದ ಸರ್ವ ಜನಾಂಗದ ಶಾಂತಿಯ ತೋಟ ಸೇರಿ ನಾನಾ ಸಾಲುಗಳನ್ನು ಉಲ್ಲೇಖಿಸಿ, ಇದನ್ನು ಮೋಜಿಗಾಗಿ ಹಾಡುವುದಲ್ಲ. ಹಾಡಿದಂತೆ ನಡೆದುಕೊಳ್ಳಬೇಕು ಎಂದು ಹೇಳಿದ ಮಾತು ಹಾಸ್ಯಸ್ಪದವಾಗಿ ಮಾರ್ಪಟ್ಟಿತ್ತು. ನಾಡಗೀತೆಗೆ ಗೌರವ ನೀಡದ ವ್ಯಕ್ತಿ ಸಿಎಂ ತಮ್ಮ ಬಾಯಿಯಿಂದ ನುಡಿ ಮುತ್ತು ಉದುರಿಸಿರುವುದು ಜನರ ಲೇವಡಿಗೆ ಕಾರಣವಾಯಿತು.

0
Shares
  • Share On Facebook
  • Tweet It




Trending Now
7.25 ಕೋಟಿ ವೆಚ್ಚದಲ್ಲಿ ಸೊಳ್ಳೆ ನಿಯಂತ್ರಣಕ್ಕೆ ರಾಜ್ಯ ಸರಕಾರ ಸಜ್ಜು!
Tulunadu News July 12, 2025
ತರಗತಿಯಲ್ಲಿ ಲಾಸ್ಟ್ ಬೆಂಚ್ ಎನ್ನುವುದು ಕೇರಳದಲ್ಲಿ ಇನ್ನು ಇಲ್ಲ!
Tulunadu News July 12, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • 7.25 ಕೋಟಿ ವೆಚ್ಚದಲ್ಲಿ ಸೊಳ್ಳೆ ನಿಯಂತ್ರಣಕ್ಕೆ ರಾಜ್ಯ ಸರಕಾರ ಸಜ್ಜು!
    • ತರಗತಿಯಲ್ಲಿ ಲಾಸ್ಟ್ ಬೆಂಚ್ ಎನ್ನುವುದು ಕೇರಳದಲ್ಲಿ ಇನ್ನು ಇಲ್ಲ!
    • ಧರ್ಮಸ್ಥಳದಲ್ಲಿ ಗೌಪ್ಯವಾಗಿ ಹೆಣಗಳನ್ನು ವಿಲೇವಾರಿ ಮಾಡುತ್ತಿದ್ದೆ ಎಂದು ಹೇಳಿಕೊಂಡಿರುವ ಮಾಜಿ ಸ್ವಚ್ಚತಾ ಸಿಬ್ಬಂದಿ ನ್ಯಾಯಾಲಯಕ್ಕೆ ಹಾಜರು!
    • ಗಣೇಶೋತ್ಸವ ಇನ್ನು ಮಹಾರಾಷ್ಟ್ರದ ರಾಜ್ಯ ಹಬ್ಬ ಎಂದು ಸರಕಾರ ಘೋಷಣೆ!
    • ನಾಯಕರು 75 ಆಗುತ್ತಿದ್ದಂತೆ ಅಧಿಕಾರದಿಂದ ಕೆಳಗಿಳಿದು ಬೇರೆಯವರಿಗೆ ದಾರಿ ಮಾಡಿಕೊಡಲಿ - ಮೋಹನ್ ಭಾಗವತ್!
    • ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಕದ್ರಿ ಸಂಚಾರ ಪೊಲೀಸ್ ಕಾನ್‌ಸ್ಟೆಬಲ್ ತಸ್ಲೀಮ್ …!
    • ಬೀದಿನಾಯಿಗಳಿಗೆ ನಿತ್ಯ ಚಿಕನ್, ಮೊಟ್ಟೆ ನೀಡಲು ಬಿಬಿಎಂಪಿ ನಿರ್ಧಾರ!
    • ಜನಸಾಮಾನ್ಯರ ಕೈಗೆಟಕುತ್ತಿಲ್ಲ ತೆಂಗಿನಕಾಯಿ ದರ... ಪುತ್ತೂರಿನಲ್ಲಿ ಹೆಚ್ಚಿದ ಕಳವು!
    • ವಿಎಚ್ ಪಿ ಶರಣ್, ನವೀನ್ ಗೆ ರಿಲೀಫ್: ಅರುಣ್ ಶ್ಯಾಮ್ ವಾದ
    • ಯುಕೆ ಪ್ರಧಾನಿ ಪದದಿಂದ ಇಳಿದ ಬಳಿಕ ಖಾಸಗಿ ಉದ್ಯೋಗಕ್ಕೆ ಮರಳಿದ ರಿಶಿ ಸುನಾಕ್!
  • Popular Posts

    • 1
      7.25 ಕೋಟಿ ವೆಚ್ಚದಲ್ಲಿ ಸೊಳ್ಳೆ ನಿಯಂತ್ರಣಕ್ಕೆ ರಾಜ್ಯ ಸರಕಾರ ಸಜ್ಜು!
    • 2
      ತರಗತಿಯಲ್ಲಿ ಲಾಸ್ಟ್ ಬೆಂಚ್ ಎನ್ನುವುದು ಕೇರಳದಲ್ಲಿ ಇನ್ನು ಇಲ್ಲ!
    • 3
      ಧರ್ಮಸ್ಥಳದಲ್ಲಿ ಗೌಪ್ಯವಾಗಿ ಹೆಣಗಳನ್ನು ವಿಲೇವಾರಿ ಮಾಡುತ್ತಿದ್ದೆ ಎಂದು ಹೇಳಿಕೊಂಡಿರುವ ಮಾಜಿ ಸ್ವಚ್ಚತಾ ಸಿಬ್ಬಂದಿ ನ್ಯಾಯಾಲಯಕ್ಕೆ ಹಾಜರು!
    • 4
      ಗಣೇಶೋತ್ಸವ ಇನ್ನು ಮಹಾರಾಷ್ಟ್ರದ ರಾಜ್ಯ ಹಬ್ಬ ಎಂದು ಸರಕಾರ ಘೋಷಣೆ!
    • 5
      ನಾಯಕರು 75 ಆಗುತ್ತಿದ್ದಂತೆ ಅಧಿಕಾರದಿಂದ ಕೆಳಗಿಳಿದು ಬೇರೆಯವರಿಗೆ ದಾರಿ ಮಾಡಿಕೊಡಲಿ - ಮೋಹನ್ ಭಾಗವತ್!

  • Privacy Policy
  • Contact
© Tulunadu Infomedia.

Press enter/return to begin your search