• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಉತ್ತರಾಖಂಡದಲ್ಲಿ ಮತಾಂತರಗೊಳಿಸಿದರೆ ಇನ್ನು ಐದು ವರ್ಷ ಜೈಲು ಶಿಕ್ಷೆ, ಧರ್ಮಾಂಧರಿಗೆ ಬಿಜೆಪಿ ಸರ್ಕಾರ ಗುನ್ನ!

TNN Correspondent Posted On March 14, 2018
0


0
Shares
  • Share On Facebook
  • Tweet It

ಡೆಹ್ರಾಡೂನ್: ಕೇರಳ, ಕರ್ನಾಟಕ, ಮಹಾರಾಷ್ಟ್ರ ಸೇರಿ ಹಲವು ರಾಜ್ಯಗಳ ಇಸ್ಲಾಂ ಧರ್ಮಗುರುಗಳು ಹಾಗೂ ಕ್ರೈಸ್ತ ಮಿಷನರಿಗಳು ಹಿಂದೂಗಳ ಮತಾಂತರದಲ್ಲಿ ತೊಡಗಿರುವ ಪ್ರಕರಣಗಳು ಸುದ್ದಿಯಾಗುತ್ತಿರುವ ಬೆನ್ನಲ್ಲೇ, ಉತ್ತರಾಖಂಡದಲ್ಲಿ ಮತಾಂತರ ವಿರುದ್ಧ ಬಿಜೆಪಿ ಸರ್ಕಾರ ಮಹತ್ತರ ಹೆಜ್ಜೆಯೊಂದನ್ನು ಇಟ್ಟಿದೆ.

ಹಣ, ಮನೆ, ಕಾರು, ಉದ್ಯೋಗ ಸೇರಿ ಹಲವು ಆಮಿಷವೊಡ್ಡಿ ಅಕ್ರಮವಾಗಿ ಮತಾಂತರ ಮಾಡುವುದನ್ನು ನಿಷೇಧಿಸಲು ಉತ್ತರಾಖಂಡ ರಾಜ್ಯ ಸರ್ಕಾರ “ಧರ್ಮ ಸ್ವತಂತ್ರತಾ ಅಧಿನಿಯಮ” ಎಂಬ ಕರಡು ಮಸೂದೆಯನ್ನು ಅಂಗೀಕರಿಸಿದೆ.

ಯಾವುದೇ ವ್ಯಕ್ತಿಗೆ ಹಣ, ಕಾರು ಸೇರಿ ಯಾವುದೇ ಆಮಿಷ ಒಡ್ಡಿ ಮತಾಂತರ ಮಾಡುವಂತಿಲ್ಲ. ಒಂದು ವೇಳೆ ಹೀಗೆ ಅಕ್ರಮವಾಗಿ ಮತಾಂತರ ಮಾಡುವುದು ಕಂಡು ಬಂದರೆ, ಅಂತಹವರಿಗೆ ಒಂದರಿಂದ ಐದು ವರ್ಷದವರೆಗೆ ಜೈಲು ಶಿಕ್ಷೆ ವಿಧಿಸಲಾಗುವುದು ಎಂದು ಮಸೂದೆಯಲ್ಲಿ ಉಲ್ಲೇಖಿಸಲಾಗಿದೆ.

ಆದಾಗ್ಯೂ, ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಬಡವರೇ ಇವರ ಗುರಿಯಾಗಿರುವುದರಿಂದ ಮಸೂದೆ ರಚನೆ ವೇಳೆ ಜಾಣತನ ಮೆರೆದಿರುವ ರಾಜ್ಯ ಸರ್ಕಾರ, ಎಸ್ಸಿ, ಎಸ್ಟಿಯವರನ್ನು ಮತಾಂತರಗೊಳಿಸಿದರೆ ಕನಿಷ್ಠ 2 ವರ್ಷ ಜೈಲು ಶಿಕ್ಷೆ ವಿಧಿಸುವುದಾಗಿ ತಿಳಿಸಿದೆ.

ಮುಖ್ಯಮಂತ್ರಿ ತ್ರಿವೇಂದ್ರ ಸಿಂಗ್ ರಾವತ್ ನೇತೃತ್ವದ ರಾಜ್ಯ ಸರ್ಕಾರ ಈ ಕರಡು ಮಸೂದೆಗೆ ಅಂಗೀಕಾರ ನೀಡಿದ್ದು, ಈ ಮಸೂದೆ ಕಾಯಿದೆಯಾಗಿ ಜಾರಿಯಾದರೆ ಮತಾಂತರಿಗಳ ವಿರುದ್ಧ ಕ್ರಮ ಕೈಗೊಳ್ಳಬಹುದಾಗಿದೆ.

ಒಟ್ಟಿನಲ್ಲಿ ದೇಶಾದ್ಯಂತ ಲವ್ ಜಿಹಾದ್, ಕ್ರಿಶ್ಚಿಯನ್ ಮಿಷನರಿಗಳ ಮತಾಂತರ, ಇಸ್ಲಾಂ ಮೂಲಭೂತವಾದಿಗಳ ಉಪಟಳದಿಂದ ಹಲವು ಹಿಂದೂಗಳು ಮತಾಂತರದ ಪಿಡುಗಿಗೆ ಬಲಿಯಾಗುತ್ತಿದ್ದು, ರಾಜ್ಯ ಸರ್ಕಾರದ ಈ ಕರಡು ಮಸೂದೆ ಮತಾಂತರಿಗಳಿಗೆ ಗುನ್ನ ನೀಡಿದಂತಾಗಿದೆ. ಎಲ್ಲ ರಾಜ್ಯಗಳಲ್ಲೂ ಇಂಥದ್ದೊಂದು ಕಾನೂನು ಜಾರಿಗೊಳಿಸುವುದು ಧರ್ಮ ರಕ್ಷಣೆ ದೃಷ್ಟಿಯಿಂದ ಒಳಿತು.

0
Shares
  • Share On Facebook
  • Tweet It




Trending Now
ಮಹಾನಗರ ಪಾಲಿಕೆ ಮೇ 1ರಿಂದ ನೀರಿನ ರೇಷನಿಂಗ್ ಘೋಷಣೆ!
Tulunadu News April 27, 2026
ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
Tulunadu News April 14, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮಹಾನಗರ ಪಾಲಿಕೆ ಮೇ 1ರಿಂದ ನೀರಿನ ರೇಷನಿಂಗ್ ಘೋಷಣೆ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
  • Popular Posts

    • 1
      ಮಹಾನಗರ ಪಾಲಿಕೆ ಮೇ 1ರಿಂದ ನೀರಿನ ರೇಷನಿಂಗ್ ಘೋಷಣೆ!

  • Privacy Policy
  • Contact
© Tulunadu Infomedia.

Press enter/return to begin your search