• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಉತ್ತರಾಖಂಡದಲ್ಲಿ ಮತಾಂತರಗೊಳಿಸಿದರೆ ಇನ್ನು ಐದು ವರ್ಷ ಜೈಲು ಶಿಕ್ಷೆ, ಧರ್ಮಾಂಧರಿಗೆ ಬಿಜೆಪಿ ಸರ್ಕಾರ ಗುನ್ನ!

TNN Correspondent Posted On March 14, 2018


  • Share On Facebook
  • Tweet It

ಡೆಹ್ರಾಡೂನ್: ಕೇರಳ, ಕರ್ನಾಟಕ, ಮಹಾರಾಷ್ಟ್ರ ಸೇರಿ ಹಲವು ರಾಜ್ಯಗಳ ಇಸ್ಲಾಂ ಧರ್ಮಗುರುಗಳು ಹಾಗೂ ಕ್ರೈಸ್ತ ಮಿಷನರಿಗಳು ಹಿಂದೂಗಳ ಮತಾಂತರದಲ್ಲಿ ತೊಡಗಿರುವ ಪ್ರಕರಣಗಳು ಸುದ್ದಿಯಾಗುತ್ತಿರುವ ಬೆನ್ನಲ್ಲೇ, ಉತ್ತರಾಖಂಡದಲ್ಲಿ ಮತಾಂತರ ವಿರುದ್ಧ ಬಿಜೆಪಿ ಸರ್ಕಾರ ಮಹತ್ತರ ಹೆಜ್ಜೆಯೊಂದನ್ನು ಇಟ್ಟಿದೆ.

ಹಣ, ಮನೆ, ಕಾರು, ಉದ್ಯೋಗ ಸೇರಿ ಹಲವು ಆಮಿಷವೊಡ್ಡಿ ಅಕ್ರಮವಾಗಿ ಮತಾಂತರ ಮಾಡುವುದನ್ನು ನಿಷೇಧಿಸಲು ಉತ್ತರಾಖಂಡ ರಾಜ್ಯ ಸರ್ಕಾರ “ಧರ್ಮ ಸ್ವತಂತ್ರತಾ ಅಧಿನಿಯಮ” ಎಂಬ ಕರಡು ಮಸೂದೆಯನ್ನು ಅಂಗೀಕರಿಸಿದೆ.

ಯಾವುದೇ ವ್ಯಕ್ತಿಗೆ ಹಣ, ಕಾರು ಸೇರಿ ಯಾವುದೇ ಆಮಿಷ ಒಡ್ಡಿ ಮತಾಂತರ ಮಾಡುವಂತಿಲ್ಲ. ಒಂದು ವೇಳೆ ಹೀಗೆ ಅಕ್ರಮವಾಗಿ ಮತಾಂತರ ಮಾಡುವುದು ಕಂಡು ಬಂದರೆ, ಅಂತಹವರಿಗೆ ಒಂದರಿಂದ ಐದು ವರ್ಷದವರೆಗೆ ಜೈಲು ಶಿಕ್ಷೆ ವಿಧಿಸಲಾಗುವುದು ಎಂದು ಮಸೂದೆಯಲ್ಲಿ ಉಲ್ಲೇಖಿಸಲಾಗಿದೆ.

ಆದಾಗ್ಯೂ, ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಬಡವರೇ ಇವರ ಗುರಿಯಾಗಿರುವುದರಿಂದ ಮಸೂದೆ ರಚನೆ ವೇಳೆ ಜಾಣತನ ಮೆರೆದಿರುವ ರಾಜ್ಯ ಸರ್ಕಾರ, ಎಸ್ಸಿ, ಎಸ್ಟಿಯವರನ್ನು ಮತಾಂತರಗೊಳಿಸಿದರೆ ಕನಿಷ್ಠ 2 ವರ್ಷ ಜೈಲು ಶಿಕ್ಷೆ ವಿಧಿಸುವುದಾಗಿ ತಿಳಿಸಿದೆ.

ಮುಖ್ಯಮಂತ್ರಿ ತ್ರಿವೇಂದ್ರ ಸಿಂಗ್ ರಾವತ್ ನೇತೃತ್ವದ ರಾಜ್ಯ ಸರ್ಕಾರ ಈ ಕರಡು ಮಸೂದೆಗೆ ಅಂಗೀಕಾರ ನೀಡಿದ್ದು, ಈ ಮಸೂದೆ ಕಾಯಿದೆಯಾಗಿ ಜಾರಿಯಾದರೆ ಮತಾಂತರಿಗಳ ವಿರುದ್ಧ ಕ್ರಮ ಕೈಗೊಳ್ಳಬಹುದಾಗಿದೆ.

ಒಟ್ಟಿನಲ್ಲಿ ದೇಶಾದ್ಯಂತ ಲವ್ ಜಿಹಾದ್, ಕ್ರಿಶ್ಚಿಯನ್ ಮಿಷನರಿಗಳ ಮತಾಂತರ, ಇಸ್ಲಾಂ ಮೂಲಭೂತವಾದಿಗಳ ಉಪಟಳದಿಂದ ಹಲವು ಹಿಂದೂಗಳು ಮತಾಂತರದ ಪಿಡುಗಿಗೆ ಬಲಿಯಾಗುತ್ತಿದ್ದು, ರಾಜ್ಯ ಸರ್ಕಾರದ ಈ ಕರಡು ಮಸೂದೆ ಮತಾಂತರಿಗಳಿಗೆ ಗುನ್ನ ನೀಡಿದಂತಾಗಿದೆ. ಎಲ್ಲ ರಾಜ್ಯಗಳಲ್ಲೂ ಇಂಥದ್ದೊಂದು ಕಾನೂನು ಜಾರಿಗೊಳಿಸುವುದು ಧರ್ಮ ರಕ್ಷಣೆ ದೃಷ್ಟಿಯಿಂದ ಒಳಿತು.

  • Share On Facebook
  • Tweet It


- Advertisement -


Trending Now
ಬ್ರಿಜ್ ವಿರುದ್ಧ ಪ್ರತಿಭಟನೆಯ ಹಿಂದಿನ ಸತ್ಯ!!
Tulunadu News June 1, 2023
ಕೇರಳ ಸ್ಟೋರಿ ಸಿನೆಮಾ ಕಾಲ್ಪನಿಕ ಕಥೆ ಅಲ್ಲ!!
Tulunadu News May 31, 2023
Leave A Reply

  • Recent Posts

    • ಬ್ರಿಜ್ ವಿರುದ್ಧ ಪ್ರತಿಭಟನೆಯ ಹಿಂದಿನ ಸತ್ಯ!!
    • ಕೇರಳ ಸ್ಟೋರಿ ಸಿನೆಮಾ ಕಾಲ್ಪನಿಕ ಕಥೆ ಅಲ್ಲ!!
    • ಕಾಂಗ್ರೆಸ್ ಸರಕಾರ ಹೊಸ ಸಂಸತ್ ಭವನ ನಿರ್ಮಿಸಿದ್ದರೆ ಏನಾಗುತ್ತಿತ್ತು?
    • ಗ್ಯಾರಂಟಿ ಇಲ್ಲದ ಸರಕಾರದಿಂದ ದ್ವೇಷದ ಆಡಳಿತ: ವೇದವ್ಯಾಸ್ ಕಾಮತ್
    • ನಾವು ಬೇರೆ ಧರ್ಮದ ಯುವಕರ ಜಾಲಕ್ಕೆ ಬಲಿಯಾಗಲ್ಲ!
    • ಗೆದ್ದ ಕೂಡಲೇ ಕಾಂಗ್ರೆಸ್ಸಿಗರ ದಬ್ಬಾಳಿಕೆ ಶುರು!!
    • ಮೇ ಮಳೆ ತೆರೆದಿಟ್ಟಿತ್ತು ಹಣೆಬರಹ!
    • ಚುನಾವಣೆ ಪ್ರಜಾಪ್ರಭುತ್ವದ ಹಬ್ಬ ಬೆಟ್ಟಿಂಗ್ ನವರಿಗೆ!!
    • ಕೇರಳ ಸ್ಟೋರಿ ಮೇ ಮೇರಾ ಅಬ್ದುಲ್ಲಾ ಅಲಗ್ ಹೇ?
    • ಪ್ರಣಾಳಿಕೆಯಲ್ಲಿ ಪಾರ್ಕಿಂಗ್ ಸಮಸ್ಯೆ ಪರಿಹರಿಸಲು ಮೂರು ಸೂತ್ರ!!
  • Popular Posts

    • 1
      ಬ್ರಿಜ್ ವಿರುದ್ಧ ಪ್ರತಿಭಟನೆಯ ಹಿಂದಿನ ಸತ್ಯ!!
    • 2
      ಕೇರಳ ಸ್ಟೋರಿ ಸಿನೆಮಾ ಕಾಲ್ಪನಿಕ ಕಥೆ ಅಲ್ಲ!!
    • 3
      ಕಾಂಗ್ರೆಸ್ ಸರಕಾರ ಹೊಸ ಸಂಸತ್ ಭವನ ನಿರ್ಮಿಸಿದ್ದರೆ ಏನಾಗುತ್ತಿತ್ತು?
    • 4
      ಗ್ಯಾರಂಟಿ ಇಲ್ಲದ ಸರಕಾರದಿಂದ ದ್ವೇಷದ ಆಡಳಿತ: ವೇದವ್ಯಾಸ್ ಕಾಮತ್
    • 5
      ನಾವು ಬೇರೆ ಧರ್ಮದ ಯುವಕರ ಜಾಲಕ್ಕೆ ಬಲಿಯಾಗಲ್ಲ!


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search