• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ರಾಜಸ್ಥಾನದ ಗಡಿಯಲ್ಲಿ ವೈರಿಗಳ ನಿಗ್ರಹಕ್ಕೆ ಭಾರತ ಉಪಯೋಗಿಸುತ್ತಿರುವ ತಂತ್ರಜ್ಞಾನ ಯಾವುದು ಗೊತ್ತಾ?

TNN Correspondent Posted On March 14, 2018
0


0
Shares
  • Share On Facebook
  • Tweet It

ದೆಹಲಿ: ಶತಾಯ-ಗತಾಯ ಶತ್ರುರಾಷ್ಟ್ರ ಪಾಕಿಸ್ತಾನಕ್ಕೆ ಪಾಠ ಕಲಿಸಲೇಬೇಕು ಎಂದು ನಿರ್ಧರಿಸಿದಂತಿರುವ ಭಾರತೀಯ ಸೇನೆ ಪಾಕಿಸ್ತಾನದ ವಿರುದ್ಧ ದಿನೇದಿನೆ ನೂತನ ತಂತ್ರಗಳನ್ನು ಹೆಣೆಯುತ್ತಲೇ ಇದೆ.

ಇದಕ್ಕೆ ಮುನ್ನುಡಿಯಾಗಿ ಈಗ ರಾಜಸ್ಥಾನದ ಹಿಂದುಮಲ್ಕೋಟ್ ಇಂಡೋ-ಪಾಕ್ ಗಡಿಯಲ್ಲಿ ವೈರಿಗಳ ರಕ್ಷಣೆಗಾಗಿ ಭಾರತೀಯ ಸೇನೆ ನೂತನ ತಂತ್ರಜ್ಞಾನ ಅಳವಡಿಸಿಕೊಂಡಿದೆ.

ವಿಶ್ವದಲ್ಲೇ ಸೂಕ್ಷ್ಮ ಪ್ರದೇಶಗಳಲ್ಲಿ ಒಂದು ಎಂದು ಖ್ಯಾತಿಯಾಗಿರುವ ರಾಜಸ್ಥಾನದ ಗಡಿಯಲ್ಲಿ ಭಾರತೀಯ ಸೇನೆ ಕೋಬ್ರಾ ಎಂಬ ವೈರ್ ಅಳವಡಿಸಿದ್ದು, ಇದು ವೈರಿಗಳ ದಾಳಿಯನ್ನು ಪತ್ತೆಹಚ್ಚಲು ಸಹಕಾರಿಯಾಗಿದೆ ಎಂದು ತಿಳಿದುಬಂದಿದೆ.

ಗಡಿಯ ಬೇಲಿಗೆ ವೈರ್ ಅಳವಡಿಸಲಾಗಿದ್ದು, ವೈರಿಗಳು ಮೂರ್ನಾಲ್ಕು ಕಿಲೋ ಮೀಟರ್ ದೂರದಲ್ಲಿ ಕಾಣಿಸಿಕೊಂಡರೆ ತಂತ್ರಜ್ಞಾನದ ಮೂಲಕ ಮಾಹಿತಿ ರವಾನಿಸುತ್ತದೆ. ಅಷ್ಟೇ ಅಲ್ಲ, ಈ ವೈರನ್ನು ಮುಟ್ಟಿದರೆ ಭಾರಿ ಶಾರ್ಟ್ ಸರ್ಕ್ಯೂಟ್ ಹೊಡೆಯಲಿದ್ದು, ವೈರಿಗಳಿಗೆ ನಡುಕ ಹುಟ್ಟಿಸುತ್ತದೆ ಎಂದೇ ಹೇಳಲಾಗುತ್ತಿದೆ.

ಇದಲ್ಲದೆ ಎಚ್ಎಚ್ ಟಿಐ (ಹ್ಯಾಂಡ್ ಹೆಲ್ಡ್ ಥರ್ಮಲ್ ಇಮೇಜರ್) ಎಂಬ ಗ್ಯಾಜೆಟ್ಅನ್ನು ಸಹ ಭಾರತೀಯ ಸೇನೆ ಅಳವಡಿಸಿಕೊಂಡಿದ್ದು, ಇದು ಸಹ ಮುರ್ನಾಲ್ಕು ಕಿ.ಮೀ. ದೂರದಲ್ಲಿ ಪಾಕಿಸ್ತಾನಿ ಸೈನಿಕರು, ಉಗ್ರರು ಸುಳಿದಾಡುವುದು ಕಂಡು ಬಂದರೆ ಅದರ ಸಂಪೂರ್ಣ ಚಿತ್ರ ನೀಡುತ್ತದೆ ಎಂದು ಮೂಲಗಳು ತಿಳಿಸಿವೆ.

ಒಟ್ಟಿನಲ್ಲಿ, ಗಡಿಯಲ್ಲಿ ಯಾವಾಗಲೂ ದಾಳಿ, ಕದನ ವಿರಾಮ ಉಲ್ಲಂಘನೆ, ಒಳನುಸುಳುವಿಕೆ ಮೂಲಕ ಉದ್ಧಟತನ ಮೆರೆಯುವ ಪಾಕಸ್ತಾನಕ್ಕೆ ಭಾರತೀಯ ಸೇನೆ ಅಳವಡಿಸಿಕೊಂಡಿರುವ ಈ ತಂತ್ರಜ್ಞಾನ ಸಿಂಹಸ್ವಪ್ನವಾಗುತ್ತದೆ ಎಂಬುದರಲ್ಲಿ ಎರಡು ಮಾತಿಲ್ಲ.

0
Shares
  • Share On Facebook
  • Tweet It




Trending Now
ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
Tulunadu News October 6, 2025
ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
Tulunadu News October 6, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
    • ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
    • "ಒಂದು ಶೋಗಾಗಿ ಕೈಕಾಲು ಹಿಡಿಯುತ್ತಿದ್ದ ಕಾಲದಿಂದ..." ರಿಷಬ್ ಶೆಟ್ಟಿ 2016 ರ ಘಟನೆಯನ್ನು ನೆನಪಿಸಿಕೊಂಡದ್ದು ಯಾಕೆ?
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಕ್ರಮ ಕಸಾಯಿಖಾನೆ ಮುಟ್ಟುಗೋಲು ಹಾಕಿದ ಪ್ರಥಮ ಪ್ರಕರಣ ದಾಖಲು - ಎಸ್ಪಿ
    • ಗೆದ್ದರೂ ಟ್ರೋಫಿ ಪಡೆಯದೇ ದಿಟ್ಟ ಉತ್ತರ ನೀಡಿದ ಭಾರತೀಯ ತಂಡಕ್ಕೆ ಭೇಷ್!
    • ಕೇವಲ ₹100 ಲಂಚದ ಪ್ರಕರಣದಲ್ಲಿ 39 ವರ್ಷಗಳ ಬಳಿಕ ನಿರ್ದೋಷಿ ಘೋಷಣೆ!
    • ನಮ್ಮ ಜಿಲ್ಲೆಗೆ ಕಳುಹಿಸಬೇಡಿ, ಬೇಕಾದರೆ ಕಾಡಿಗೆ ಕಳುಹಿಸಿ ಎಂದು ರಾಯಚೂರಿನಲ್ಲಿ ತಿಮರೋಡಿ ವಿರುದ್ಧ ಪ್ರತಿಭಟನೆ!
    • ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸರ್ಪ ಸಂಸ್ಕಾರ: 6 ತಿಂಗಳಲ್ಲಿ ಕತ್ರೀನಾ ಕೈಪ್ ಸಂತಾನ ಭಾಗ್ಯ!
    • ಪ್ರಧಾನ ಮಂತ್ರಿಯವರ ನಿವಾಸದ ಮುಂಭಾಗದಲ್ಲಿಯೂ ಸಹ ಗುಂಡಿಗಳು ಇವೆ- ಡಿಸಿಎಂ ಡಿಕೆಶಿ.
    • ಹಿಂದೂ ದೇವರ ಹಾಡನ್ನು ಹಾಡಿದ್ದ ಸುಹಾನಾ ತಮ್ಮ ಭಾವಿ ಪತಿಯ ಬಗ್ಗೆ ಹೇಳಿದ್ದಾರೆ! ಆ ಹಿಂದೂ ಯುವಕ ಯಾರು ಗೊತ್ತಾ!

  • Privacy Policy
  • Contact
© Tulunadu Infomedia.

Press enter/return to begin your search