• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ರಾಜಸ್ಥಾನದ ಗಡಿಯಲ್ಲಿ ವೈರಿಗಳ ನಿಗ್ರಹಕ್ಕೆ ಭಾರತ ಉಪಯೋಗಿಸುತ್ತಿರುವ ತಂತ್ರಜ್ಞಾನ ಯಾವುದು ಗೊತ್ತಾ?

TNN Correspondent Posted On March 14, 2018


  • Share On Facebook
  • Tweet It

ದೆಹಲಿ: ಶತಾಯ-ಗತಾಯ ಶತ್ರುರಾಷ್ಟ್ರ ಪಾಕಿಸ್ತಾನಕ್ಕೆ ಪಾಠ ಕಲಿಸಲೇಬೇಕು ಎಂದು ನಿರ್ಧರಿಸಿದಂತಿರುವ ಭಾರತೀಯ ಸೇನೆ ಪಾಕಿಸ್ತಾನದ ವಿರುದ್ಧ ದಿನೇದಿನೆ ನೂತನ ತಂತ್ರಗಳನ್ನು ಹೆಣೆಯುತ್ತಲೇ ಇದೆ.

ಇದಕ್ಕೆ ಮುನ್ನುಡಿಯಾಗಿ ಈಗ ರಾಜಸ್ಥಾನದ ಹಿಂದುಮಲ್ಕೋಟ್ ಇಂಡೋ-ಪಾಕ್ ಗಡಿಯಲ್ಲಿ ವೈರಿಗಳ ರಕ್ಷಣೆಗಾಗಿ ಭಾರತೀಯ ಸೇನೆ ನೂತನ ತಂತ್ರಜ್ಞಾನ ಅಳವಡಿಸಿಕೊಂಡಿದೆ.

ವಿಶ್ವದಲ್ಲೇ ಸೂಕ್ಷ್ಮ ಪ್ರದೇಶಗಳಲ್ಲಿ ಒಂದು ಎಂದು ಖ್ಯಾತಿಯಾಗಿರುವ ರಾಜಸ್ಥಾನದ ಗಡಿಯಲ್ಲಿ ಭಾರತೀಯ ಸೇನೆ ಕೋಬ್ರಾ ಎಂಬ ವೈರ್ ಅಳವಡಿಸಿದ್ದು, ಇದು ವೈರಿಗಳ ದಾಳಿಯನ್ನು ಪತ್ತೆಹಚ್ಚಲು ಸಹಕಾರಿಯಾಗಿದೆ ಎಂದು ತಿಳಿದುಬಂದಿದೆ.

ಗಡಿಯ ಬೇಲಿಗೆ ವೈರ್ ಅಳವಡಿಸಲಾಗಿದ್ದು, ವೈರಿಗಳು ಮೂರ್ನಾಲ್ಕು ಕಿಲೋ ಮೀಟರ್ ದೂರದಲ್ಲಿ ಕಾಣಿಸಿಕೊಂಡರೆ ತಂತ್ರಜ್ಞಾನದ ಮೂಲಕ ಮಾಹಿತಿ ರವಾನಿಸುತ್ತದೆ. ಅಷ್ಟೇ ಅಲ್ಲ, ಈ ವೈರನ್ನು ಮುಟ್ಟಿದರೆ ಭಾರಿ ಶಾರ್ಟ್ ಸರ್ಕ್ಯೂಟ್ ಹೊಡೆಯಲಿದ್ದು, ವೈರಿಗಳಿಗೆ ನಡುಕ ಹುಟ್ಟಿಸುತ್ತದೆ ಎಂದೇ ಹೇಳಲಾಗುತ್ತಿದೆ.

ಇದಲ್ಲದೆ ಎಚ್ಎಚ್ ಟಿಐ (ಹ್ಯಾಂಡ್ ಹೆಲ್ಡ್ ಥರ್ಮಲ್ ಇಮೇಜರ್) ಎಂಬ ಗ್ಯಾಜೆಟ್ಅನ್ನು ಸಹ ಭಾರತೀಯ ಸೇನೆ ಅಳವಡಿಸಿಕೊಂಡಿದ್ದು, ಇದು ಸಹ ಮುರ್ನಾಲ್ಕು ಕಿ.ಮೀ. ದೂರದಲ್ಲಿ ಪಾಕಿಸ್ತಾನಿ ಸೈನಿಕರು, ಉಗ್ರರು ಸುಳಿದಾಡುವುದು ಕಂಡು ಬಂದರೆ ಅದರ ಸಂಪೂರ್ಣ ಚಿತ್ರ ನೀಡುತ್ತದೆ ಎಂದು ಮೂಲಗಳು ತಿಳಿಸಿವೆ.

ಒಟ್ಟಿನಲ್ಲಿ, ಗಡಿಯಲ್ಲಿ ಯಾವಾಗಲೂ ದಾಳಿ, ಕದನ ವಿರಾಮ ಉಲ್ಲಂಘನೆ, ಒಳನುಸುಳುವಿಕೆ ಮೂಲಕ ಉದ್ಧಟತನ ಮೆರೆಯುವ ಪಾಕಸ್ತಾನಕ್ಕೆ ಭಾರತೀಯ ಸೇನೆ ಅಳವಡಿಸಿಕೊಂಡಿರುವ ಈ ತಂತ್ರಜ್ಞಾನ ಸಿಂಹಸ್ವಪ್ನವಾಗುತ್ತದೆ ಎಂಬುದರಲ್ಲಿ ಎರಡು ಮಾತಿಲ್ಲ.

  • Share On Facebook
  • Tweet It


- Advertisement -


Trending Now
ಮಂಗಳೂರಿನಲ್ಲಿ ಪೈಪುಗಳ ಮೇಲಿನ ಮಣ್ಣು ತೆಗೆಸಬಲ್ಲ ಗಂಡಸರು ಯಾರಿದ್ದಾರೆ!!
Tulunadu News January 28, 2023
ಮೋದಿ ವಿರುದ್ಧ ಬಿಬಿಸಿ, ಪರ ಆಂಟೋನಿ!!
Tulunadu News January 27, 2023
Leave A Reply

  • Recent Posts

    • ಮಂಗಳೂರಿನಲ್ಲಿ ಪೈಪುಗಳ ಮೇಲಿನ ಮಣ್ಣು ತೆಗೆಸಬಲ್ಲ ಗಂಡಸರು ಯಾರಿದ್ದಾರೆ!!
    • ಮೋದಿ ವಿರುದ್ಧ ಬಿಬಿಸಿ, ಪರ ಆಂಟೋನಿ!!
    • ಮುತಾಲಿಕ್ ಖಡ್ಗಕ್ಕೆ ಸಾಣೆ ಹಾಕಿಸಿಕೊಟ್ಟ ಚಾಣಾಕ್ಷ ಯಾರು?
    • ವೆನಲಾಕ್ ನಲ್ಲಿ ಕ್ಯಾನ್ಸರ್ ಚಿಕಿತ್ಸಾ ಘಟಕ ಯಾಕಿಲ್ಲ!!
    • ನಕಲಿ ಕಾಂತಾರಗಳು ನಮ್ಮ ನಂಬಿಕೆಗೆ ಪೆಟ್ಟು ಕೊಡಬಾರದು!!
    • ಶರದ್ ಪವಾರ್ ಕೂಡ ಗಡಿಯಲ್ಲಿ ಕಡ್ಡಿ ಅಲ್ಲಾಡಿಸಲು ಹೊರಟಿದ್ದಾರೆ!
    • ಮಂಗಳಾ ಕ್ರೀಡಾಂಗಣದ ಹೊರಗೆ ಸಿಂಗಾರ, ಒಳಗೆ ಗೋಳಿಸೊಪ್ಪು!!
    • ಹಿಂದೂಗಳ ಫಲವತ್ತತೆಯ ತಾಕತ್ತು ಪರೀಕ್ಷಿಸುತ್ತೀಯಾ ಬದ್ರುದ್ದೀನ್?
    • ಮಕ್ಕಳ ಬ್ಯಾಗಿನಲ್ಲಿ ಕಾಂಡೋಮ್ ಉತ್ತಮ ಲಕ್ಷಣವಲ್ಲ!!
    • ಬೊಮ್ಮಾಯಿ ಕಣ್ಣು ಮುಚ್ಚಿ ಕೊಟ್ಟ ಮುಸ್ಲಿಂ ಕಾಲೇಜು ಪ್ರಪಂಚ ನೋಡಿತು!!
  • Popular Posts

    • 1
      ಮಂಗಳೂರಿನಲ್ಲಿ ಪೈಪುಗಳ ಮೇಲಿನ ಮಣ್ಣು ತೆಗೆಸಬಲ್ಲ ಗಂಡಸರು ಯಾರಿದ್ದಾರೆ!!
    • 2
      ಮೋದಿ ವಿರುದ್ಧ ಬಿಬಿಸಿ, ಪರ ಆಂಟೋನಿ!!
    • 3
      ಮುತಾಲಿಕ್ ಖಡ್ಗಕ್ಕೆ ಸಾಣೆ ಹಾಕಿಸಿಕೊಟ್ಟ ಚಾಣಾಕ್ಷ ಯಾರು?


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search