• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ರಾಜಸ್ಥಾನದ ಗಡಿಯಲ್ಲಿ ವೈರಿಗಳ ನಿಗ್ರಹಕ್ಕೆ ಭಾರತ ಉಪಯೋಗಿಸುತ್ತಿರುವ ತಂತ್ರಜ್ಞಾನ ಯಾವುದು ಗೊತ್ತಾ?

TNN Correspondent Posted On March 14, 2018
0


0
Shares
  • Share On Facebook
  • Tweet It

ದೆಹಲಿ: ಶತಾಯ-ಗತಾಯ ಶತ್ರುರಾಷ್ಟ್ರ ಪಾಕಿಸ್ತಾನಕ್ಕೆ ಪಾಠ ಕಲಿಸಲೇಬೇಕು ಎಂದು ನಿರ್ಧರಿಸಿದಂತಿರುವ ಭಾರತೀಯ ಸೇನೆ ಪಾಕಿಸ್ತಾನದ ವಿರುದ್ಧ ದಿನೇದಿನೆ ನೂತನ ತಂತ್ರಗಳನ್ನು ಹೆಣೆಯುತ್ತಲೇ ಇದೆ.

ಇದಕ್ಕೆ ಮುನ್ನುಡಿಯಾಗಿ ಈಗ ರಾಜಸ್ಥಾನದ ಹಿಂದುಮಲ್ಕೋಟ್ ಇಂಡೋ-ಪಾಕ್ ಗಡಿಯಲ್ಲಿ ವೈರಿಗಳ ರಕ್ಷಣೆಗಾಗಿ ಭಾರತೀಯ ಸೇನೆ ನೂತನ ತಂತ್ರಜ್ಞಾನ ಅಳವಡಿಸಿಕೊಂಡಿದೆ.

ವಿಶ್ವದಲ್ಲೇ ಸೂಕ್ಷ್ಮ ಪ್ರದೇಶಗಳಲ್ಲಿ ಒಂದು ಎಂದು ಖ್ಯಾತಿಯಾಗಿರುವ ರಾಜಸ್ಥಾನದ ಗಡಿಯಲ್ಲಿ ಭಾರತೀಯ ಸೇನೆ ಕೋಬ್ರಾ ಎಂಬ ವೈರ್ ಅಳವಡಿಸಿದ್ದು, ಇದು ವೈರಿಗಳ ದಾಳಿಯನ್ನು ಪತ್ತೆಹಚ್ಚಲು ಸಹಕಾರಿಯಾಗಿದೆ ಎಂದು ತಿಳಿದುಬಂದಿದೆ.

ಗಡಿಯ ಬೇಲಿಗೆ ವೈರ್ ಅಳವಡಿಸಲಾಗಿದ್ದು, ವೈರಿಗಳು ಮೂರ್ನಾಲ್ಕು ಕಿಲೋ ಮೀಟರ್ ದೂರದಲ್ಲಿ ಕಾಣಿಸಿಕೊಂಡರೆ ತಂತ್ರಜ್ಞಾನದ ಮೂಲಕ ಮಾಹಿತಿ ರವಾನಿಸುತ್ತದೆ. ಅಷ್ಟೇ ಅಲ್ಲ, ಈ ವೈರನ್ನು ಮುಟ್ಟಿದರೆ ಭಾರಿ ಶಾರ್ಟ್ ಸರ್ಕ್ಯೂಟ್ ಹೊಡೆಯಲಿದ್ದು, ವೈರಿಗಳಿಗೆ ನಡುಕ ಹುಟ್ಟಿಸುತ್ತದೆ ಎಂದೇ ಹೇಳಲಾಗುತ್ತಿದೆ.

ಇದಲ್ಲದೆ ಎಚ್ಎಚ್ ಟಿಐ (ಹ್ಯಾಂಡ್ ಹೆಲ್ಡ್ ಥರ್ಮಲ್ ಇಮೇಜರ್) ಎಂಬ ಗ್ಯಾಜೆಟ್ಅನ್ನು ಸಹ ಭಾರತೀಯ ಸೇನೆ ಅಳವಡಿಸಿಕೊಂಡಿದ್ದು, ಇದು ಸಹ ಮುರ್ನಾಲ್ಕು ಕಿ.ಮೀ. ದೂರದಲ್ಲಿ ಪಾಕಿಸ್ತಾನಿ ಸೈನಿಕರು, ಉಗ್ರರು ಸುಳಿದಾಡುವುದು ಕಂಡು ಬಂದರೆ ಅದರ ಸಂಪೂರ್ಣ ಚಿತ್ರ ನೀಡುತ್ತದೆ ಎಂದು ಮೂಲಗಳು ತಿಳಿಸಿವೆ.

ಒಟ್ಟಿನಲ್ಲಿ, ಗಡಿಯಲ್ಲಿ ಯಾವಾಗಲೂ ದಾಳಿ, ಕದನ ವಿರಾಮ ಉಲ್ಲಂಘನೆ, ಒಳನುಸುಳುವಿಕೆ ಮೂಲಕ ಉದ್ಧಟತನ ಮೆರೆಯುವ ಪಾಕಸ್ತಾನಕ್ಕೆ ಭಾರತೀಯ ಸೇನೆ ಅಳವಡಿಸಿಕೊಂಡಿರುವ ಈ ತಂತ್ರಜ್ಞಾನ ಸಿಂಹಸ್ವಪ್ನವಾಗುತ್ತದೆ ಎಂಬುದರಲ್ಲಿ ಎರಡು ಮಾತಿಲ್ಲ.

0
Shares
  • Share On Facebook
  • Tweet It




Trending Now
ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
Tulunadu News November 1, 2025
ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
Tulunadu News October 31, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
    • ದೀಪಾವಳಿ ಬೋನಸ್ ಕಡಿಮೆ ಕೊಟ್ಟಿದ್ದಕ್ಕೆ ಟೋಲ್ ಸಿಬ್ಬಂದಿಗಳು ಮಾಡಿದ್ದೇನು?
  • Popular Posts

    • 1
      ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • 2
      ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!

  • Privacy Policy
  • Contact
© Tulunadu Infomedia.

Press enter/return to begin your search