• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ರಾಜಸ್ಥಾನದ ಗಡಿಯಲ್ಲಿ ವೈರಿಗಳ ನಿಗ್ರಹಕ್ಕೆ ಭಾರತ ಉಪಯೋಗಿಸುತ್ತಿರುವ ತಂತ್ರಜ್ಞಾನ ಯಾವುದು ಗೊತ್ತಾ?

TNN Correspondent Posted On March 14, 2018


  • Share On Facebook
  • Tweet It

ದೆಹಲಿ: ಶತಾಯ-ಗತಾಯ ಶತ್ರುರಾಷ್ಟ್ರ ಪಾಕಿಸ್ತಾನಕ್ಕೆ ಪಾಠ ಕಲಿಸಲೇಬೇಕು ಎಂದು ನಿರ್ಧರಿಸಿದಂತಿರುವ ಭಾರತೀಯ ಸೇನೆ ಪಾಕಿಸ್ತಾನದ ವಿರುದ್ಧ ದಿನೇದಿನೆ ನೂತನ ತಂತ್ರಗಳನ್ನು ಹೆಣೆಯುತ್ತಲೇ ಇದೆ.

ಇದಕ್ಕೆ ಮುನ್ನುಡಿಯಾಗಿ ಈಗ ರಾಜಸ್ಥಾನದ ಹಿಂದುಮಲ್ಕೋಟ್ ಇಂಡೋ-ಪಾಕ್ ಗಡಿಯಲ್ಲಿ ವೈರಿಗಳ ರಕ್ಷಣೆಗಾಗಿ ಭಾರತೀಯ ಸೇನೆ ನೂತನ ತಂತ್ರಜ್ಞಾನ ಅಳವಡಿಸಿಕೊಂಡಿದೆ.

ವಿಶ್ವದಲ್ಲೇ ಸೂಕ್ಷ್ಮ ಪ್ರದೇಶಗಳಲ್ಲಿ ಒಂದು ಎಂದು ಖ್ಯಾತಿಯಾಗಿರುವ ರಾಜಸ್ಥಾನದ ಗಡಿಯಲ್ಲಿ ಭಾರತೀಯ ಸೇನೆ ಕೋಬ್ರಾ ಎಂಬ ವೈರ್ ಅಳವಡಿಸಿದ್ದು, ಇದು ವೈರಿಗಳ ದಾಳಿಯನ್ನು ಪತ್ತೆಹಚ್ಚಲು ಸಹಕಾರಿಯಾಗಿದೆ ಎಂದು ತಿಳಿದುಬಂದಿದೆ.

ಗಡಿಯ ಬೇಲಿಗೆ ವೈರ್ ಅಳವಡಿಸಲಾಗಿದ್ದು, ವೈರಿಗಳು ಮೂರ್ನಾಲ್ಕು ಕಿಲೋ ಮೀಟರ್ ದೂರದಲ್ಲಿ ಕಾಣಿಸಿಕೊಂಡರೆ ತಂತ್ರಜ್ಞಾನದ ಮೂಲಕ ಮಾಹಿತಿ ರವಾನಿಸುತ್ತದೆ. ಅಷ್ಟೇ ಅಲ್ಲ, ಈ ವೈರನ್ನು ಮುಟ್ಟಿದರೆ ಭಾರಿ ಶಾರ್ಟ್ ಸರ್ಕ್ಯೂಟ್ ಹೊಡೆಯಲಿದ್ದು, ವೈರಿಗಳಿಗೆ ನಡುಕ ಹುಟ್ಟಿಸುತ್ತದೆ ಎಂದೇ ಹೇಳಲಾಗುತ್ತಿದೆ.

ಇದಲ್ಲದೆ ಎಚ್ಎಚ್ ಟಿಐ (ಹ್ಯಾಂಡ್ ಹೆಲ್ಡ್ ಥರ್ಮಲ್ ಇಮೇಜರ್) ಎಂಬ ಗ್ಯಾಜೆಟ್ಅನ್ನು ಸಹ ಭಾರತೀಯ ಸೇನೆ ಅಳವಡಿಸಿಕೊಂಡಿದ್ದು, ಇದು ಸಹ ಮುರ್ನಾಲ್ಕು ಕಿ.ಮೀ. ದೂರದಲ್ಲಿ ಪಾಕಿಸ್ತಾನಿ ಸೈನಿಕರು, ಉಗ್ರರು ಸುಳಿದಾಡುವುದು ಕಂಡು ಬಂದರೆ ಅದರ ಸಂಪೂರ್ಣ ಚಿತ್ರ ನೀಡುತ್ತದೆ ಎಂದು ಮೂಲಗಳು ತಿಳಿಸಿವೆ.

ಒಟ್ಟಿನಲ್ಲಿ, ಗಡಿಯಲ್ಲಿ ಯಾವಾಗಲೂ ದಾಳಿ, ಕದನ ವಿರಾಮ ಉಲ್ಲಂಘನೆ, ಒಳನುಸುಳುವಿಕೆ ಮೂಲಕ ಉದ್ಧಟತನ ಮೆರೆಯುವ ಪಾಕಸ್ತಾನಕ್ಕೆ ಭಾರತೀಯ ಸೇನೆ ಅಳವಡಿಸಿಕೊಂಡಿರುವ ಈ ತಂತ್ರಜ್ಞಾನ ಸಿಂಹಸ್ವಪ್ನವಾಗುತ್ತದೆ ಎಂಬುದರಲ್ಲಿ ಎರಡು ಮಾತಿಲ್ಲ.

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • 4
      ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • 5
      ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search