• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮುಖ್ಯಮಂತ್ರಿ ಸಿದ್ದರಾಮಯ್ಯನವರೇ, ಈ ಅಧಿಕಾರಿಗಳ ಗೋಳು ನಿಮಗೆ ಕೇಳುವುದಿಲ್ಲವೇ?

TNN Correspondent Posted On March 15, 2018
0


0
Shares
  • Share On Facebook
  • Tweet It

ಬೆಂಗಳೂರು: ಹಾಗೆ ನೋಡಿದರೆ ರಾಜ್ಯ ಸರ್ಕಾರವೇ ಅಧಿಕಾರಿಗಳ ವಿರುದ್ಧ ಸಮರ ಸಾರಿದಂತೆ ವರ್ತಿಸುತ್ತಿದೆ. ಐಎಎಸ್, ಐಪಿಎಸ್ ಅಧಿಕಾರಿಗಳನ್ನು ಮನಬಂದಂತೆ ವರ್ಗಾಯಿಸುವ ಮೂಲಕ ರಾಜ್ಯಾದ್ಯಂತ ನಕಾರಾತ್ಮಕವಾಗಿ ಸುದ್ದಿಯಲ್ಲಿದೆ. ಅದರಲ್ಲೂ ಹಾಸನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿಯವರಂತೂ ಸರ್ಕಾರದ ವಿರುದ್ಧವೇ ಹೋರಾಟಕ್ಕೆ ಮುಂದಾಗಿದ್ದಾರೆ.

ಇದರ ಬೆನ್ನಲ್ಲೇ, ಪೊಲೀಸ್ ಇಲಾಖೆಯಲ್ಲಿರುವ ವೈಫಲ್ಯ, ಹಿರಿಯ ಅಧಿಕಾರಿಗಳ ದರ್ಪದ ಕುರಿತು ಮಂಡ್ಯದಲ್ಲಿರುವ ರಾಜ್ಯ ಪೊಲೀಸ್ ಸಶಸ್ತ್ರ ಮೀಸಲು ಪಡೆ ಪೊಲೀಸರು ಮೇಲಧಿಕಾರಿಗಳ ಕಿರುಕುಳ ತಾಳಲಾರದ ಸರ್ಕಾರದ ಮುಖ್ಯ ಕಾರ್ಯದರ್ಶಿ ರತ್ನಪ್ರಭಾ ಅವರಿಗೆ ಮನವಿ ಮಾಡಿದ್ದಾರೆ.

ಈ ಕುರಿತು ಕರ್ನಾಟಕ ರಾಜ್ಯ ಸಶಸ್ತ್ರ ಮೀಸಲು ಪಡೆಗಳ ಪೊಲೀಸ್ ಸಂಘ, ಐದು ಪುಟಗಳ ದೀರ್ಘ ಪತ್ರವನ್ನು ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದಿದ್ದು, “ಬ್ರಿಟಿಷರ ಕಾಲದ ಕಾನೂನಿನ ನಿರ್ಬಂದದಿಂದಾಗಿ ನೋಂದಣಿಯಾಗಿಲ್ಲದ ಹಾಗೂ ಮಾನ್ಯತೆ ಪಡೆಯದ ಸಂಘ ನಮ್ಮದಾಗಿದ್ದರೂ, ರಾಜ್ಯದಲ್ಲಿ ನಡೆಯುತ್ತಿರುವ ಐಪಿಎಸ್ ಅಧಿಕಾರಿಗಳ ಕಾರ್ಯವೈಖರಿ, ಪ್ರಾಮಾಣಿಕತೆಯ ಕೊರತೆ ಇರುವುದಕ್ಕೆ ಸಿಬ್ಬಂದಿ ಪರವಾಗಿ ವಿಷಾದಿಸುತ್ತೇನೆ” ಎಂದು ಸಂಘದ ಅಧ್ಯಕ್ಷ ಪತ್ರ ಬರೆದಿದ್ದಾರೆ.

ಅಷ್ಟೇ ಅಲ್ಲ, ಪೊಲೀಸ್ ಇಲಾಖೆಯಲ್ಲಿ ಇನ್ನೂ ಜೀತ ಪದ್ಧತಿ ಜೀವಂತವಾಗಿದೆ, ಕೆಳಹಂತದ ಅಧಿಕಾರಿಗಳಿಗೆ ಹಿಂಸೆ ನೀಡಲಾಗುತ್ತಿದೆ, ಅಧಿಕಾರದ ದುರುಪಯೋಗ ಮಾಡಿಕೊಳ್ಳಲಾಗುತ್ತಿದೆ, ಜಾತೀಯತೆ, ಅದಕ್ಷತೆ ತುಂಬಿ ತುಳುಕುತ್ತಿದೆ. ಈ ಕುರಿತು ಕ್ರಮ ಕೈಗೊಳ್ಳಬೇಕು ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.

ಯಾವಾಗಲೂ ಪೊಲೀಸ್ ಇಲಾಖೆ ಎಂದರೆ ಶಸ್ತಿಗೆ, ರಕ್ಷಣೆಗೆ ಹೆಸರಾಗಿದೆ. ಆದರೆ ಮಂಡ್ಯದಲ್ಲಿ ಹಿರಿಯ ಅಧಿಕಾರಿಗಳ ಉಪಟಳದಿಂದ ಸಶಸ್ತ್ರ ಮೀಸಲು ಪಡೆ ಸಿಬ್ಬಂದಿ ಬಸವಳಿದಿದ್ದು, ಸರ್ಕಾರ ಈ ಸಮಸ್ಯೆ ಬಗೆಹರಿಸುವುದೇ, ಸಿದ್ದರಾಮಯ್ಯನವರಿಗೆ ಅಧಿಕಾರಿಗಳ ಈ ಕೂಗು ಕೇಳುವುದೇ ಎಂಬುದೇ ಸದ್ಯದ ಪ್ರಶ್ನೆ.

0
Shares
  • Share On Facebook
  • Tweet It




Trending Now
ಮಹಾನಗರ ಪಾಲಿಕೆ ಮೇ 1ರಿಂದ ನೀರಿನ ರೇಷನಿಂಗ್ ಘೋಷಣೆ!
Tulunadu News April 27, 2026
ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
Tulunadu News April 14, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮಹಾನಗರ ಪಾಲಿಕೆ ಮೇ 1ರಿಂದ ನೀರಿನ ರೇಷನಿಂಗ್ ಘೋಷಣೆ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
  • Popular Posts

    • 1
      ಮಹಾನಗರ ಪಾಲಿಕೆ ಮೇ 1ರಿಂದ ನೀರಿನ ರೇಷನಿಂಗ್ ಘೋಷಣೆ!

  • Privacy Policy
  • Contact
© Tulunadu Infomedia.

Press enter/return to begin your search