• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮುಖ್ಯಮಂತ್ರಿ ಸಿದ್ದರಾಮಯ್ಯನವರೇ, ಈ ಅಧಿಕಾರಿಗಳ ಗೋಳು ನಿಮಗೆ ಕೇಳುವುದಿಲ್ಲವೇ?

TNN Correspondent Posted On March 15, 2018
0


0
Shares
  • Share On Facebook
  • Tweet It

ಬೆಂಗಳೂರು: ಹಾಗೆ ನೋಡಿದರೆ ರಾಜ್ಯ ಸರ್ಕಾರವೇ ಅಧಿಕಾರಿಗಳ ವಿರುದ್ಧ ಸಮರ ಸಾರಿದಂತೆ ವರ್ತಿಸುತ್ತಿದೆ. ಐಎಎಸ್, ಐಪಿಎಸ್ ಅಧಿಕಾರಿಗಳನ್ನು ಮನಬಂದಂತೆ ವರ್ಗಾಯಿಸುವ ಮೂಲಕ ರಾಜ್ಯಾದ್ಯಂತ ನಕಾರಾತ್ಮಕವಾಗಿ ಸುದ್ದಿಯಲ್ಲಿದೆ. ಅದರಲ್ಲೂ ಹಾಸನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿಯವರಂತೂ ಸರ್ಕಾರದ ವಿರುದ್ಧವೇ ಹೋರಾಟಕ್ಕೆ ಮುಂದಾಗಿದ್ದಾರೆ.

ಇದರ ಬೆನ್ನಲ್ಲೇ, ಪೊಲೀಸ್ ಇಲಾಖೆಯಲ್ಲಿರುವ ವೈಫಲ್ಯ, ಹಿರಿಯ ಅಧಿಕಾರಿಗಳ ದರ್ಪದ ಕುರಿತು ಮಂಡ್ಯದಲ್ಲಿರುವ ರಾಜ್ಯ ಪೊಲೀಸ್ ಸಶಸ್ತ್ರ ಮೀಸಲು ಪಡೆ ಪೊಲೀಸರು ಮೇಲಧಿಕಾರಿಗಳ ಕಿರುಕುಳ ತಾಳಲಾರದ ಸರ್ಕಾರದ ಮುಖ್ಯ ಕಾರ್ಯದರ್ಶಿ ರತ್ನಪ್ರಭಾ ಅವರಿಗೆ ಮನವಿ ಮಾಡಿದ್ದಾರೆ.

ಈ ಕುರಿತು ಕರ್ನಾಟಕ ರಾಜ್ಯ ಸಶಸ್ತ್ರ ಮೀಸಲು ಪಡೆಗಳ ಪೊಲೀಸ್ ಸಂಘ, ಐದು ಪುಟಗಳ ದೀರ್ಘ ಪತ್ರವನ್ನು ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದಿದ್ದು, “ಬ್ರಿಟಿಷರ ಕಾಲದ ಕಾನೂನಿನ ನಿರ್ಬಂದದಿಂದಾಗಿ ನೋಂದಣಿಯಾಗಿಲ್ಲದ ಹಾಗೂ ಮಾನ್ಯತೆ ಪಡೆಯದ ಸಂಘ ನಮ್ಮದಾಗಿದ್ದರೂ, ರಾಜ್ಯದಲ್ಲಿ ನಡೆಯುತ್ತಿರುವ ಐಪಿಎಸ್ ಅಧಿಕಾರಿಗಳ ಕಾರ್ಯವೈಖರಿ, ಪ್ರಾಮಾಣಿಕತೆಯ ಕೊರತೆ ಇರುವುದಕ್ಕೆ ಸಿಬ್ಬಂದಿ ಪರವಾಗಿ ವಿಷಾದಿಸುತ್ತೇನೆ” ಎಂದು ಸಂಘದ ಅಧ್ಯಕ್ಷ ಪತ್ರ ಬರೆದಿದ್ದಾರೆ.

ಅಷ್ಟೇ ಅಲ್ಲ, ಪೊಲೀಸ್ ಇಲಾಖೆಯಲ್ಲಿ ಇನ್ನೂ ಜೀತ ಪದ್ಧತಿ ಜೀವಂತವಾಗಿದೆ, ಕೆಳಹಂತದ ಅಧಿಕಾರಿಗಳಿಗೆ ಹಿಂಸೆ ನೀಡಲಾಗುತ್ತಿದೆ, ಅಧಿಕಾರದ ದುರುಪಯೋಗ ಮಾಡಿಕೊಳ್ಳಲಾಗುತ್ತಿದೆ, ಜಾತೀಯತೆ, ಅದಕ್ಷತೆ ತುಂಬಿ ತುಳುಕುತ್ತಿದೆ. ಈ ಕುರಿತು ಕ್ರಮ ಕೈಗೊಳ್ಳಬೇಕು ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.

ಯಾವಾಗಲೂ ಪೊಲೀಸ್ ಇಲಾಖೆ ಎಂದರೆ ಶಸ್ತಿಗೆ, ರಕ್ಷಣೆಗೆ ಹೆಸರಾಗಿದೆ. ಆದರೆ ಮಂಡ್ಯದಲ್ಲಿ ಹಿರಿಯ ಅಧಿಕಾರಿಗಳ ಉಪಟಳದಿಂದ ಸಶಸ್ತ್ರ ಮೀಸಲು ಪಡೆ ಸಿಬ್ಬಂದಿ ಬಸವಳಿದಿದ್ದು, ಸರ್ಕಾರ ಈ ಸಮಸ್ಯೆ ಬಗೆಹರಿಸುವುದೇ, ಸಿದ್ದರಾಮಯ್ಯನವರಿಗೆ ಅಧಿಕಾರಿಗಳ ಈ ಕೂಗು ಕೇಳುವುದೇ ಎಂಬುದೇ ಸದ್ಯದ ಪ್ರಶ್ನೆ.

0
Shares
  • Share On Facebook
  • Tweet It




Trending Now
ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
Tulunadu News December 23, 2025
ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
Tulunadu News December 23, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!
    • ಭಕ್ತಿಗೀತೆ ಹಾಡುತ್ತಿದ್ದ ಗಾಯಕಿಯ ಮೇಲೆ ದರ್ಪ! ಜಾತ್ಯಾತೀತ ಗೀತೆ ಹಾಡಲು ಒತ್ತಾಯ!
    • ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 10 ಲಕ್ಷ ನೀಡಿ - ಸರಕಾರಕ್ಕೆ ಶಾಸಕ ಆಗ್ರಹ!
    • ವಿಡಿಯೋ ಕಾಲ್ ನಲ್ಲಿ ನಿಶ್ಚಿತಾರ್ಥ-ಎಲ್ ಇಡಿ ಸ್ಕ್ರೀನ್ ಗೆ ಆರತಿ!
    • ಅಜಾನ್ ಚರ್ಚೆಯ ಸಂದರ್ಭದಲ್ಲಿ ದೀಪಾವಳಿ ಪಟಾಕಿ ವಿಷಯ ಎತ್ತಿದ ಸಚಿವ!
    • ಇಷ್ಟು ಚಿಕ್ಕ ವಯಸ್ಸಿಗೆ ಭಾರತೀಯ ಜನತಾ ಪಾರ್ಟಿಯ ರಾಷ್ಟ್ರೀಯ ಕಾರ್ಯಾಧ್ಯಕ್ಷ ಪಟ್ಟ!
  • Popular Posts

    • 1
      ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • 2
      ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • 3
      ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • 4
      ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • 5
      ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!

  • Privacy Policy
  • Contact
© Tulunadu Infomedia.

Press enter/return to begin your search