• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮುಖ್ಯಮಂತ್ರಿ ಸಿದ್ದರಾಮಯ್ಯನವರೇ, ಈ ಅಧಿಕಾರಿಗಳ ಗೋಳು ನಿಮಗೆ ಕೇಳುವುದಿಲ್ಲವೇ?

TNN Correspondent Posted On March 15, 2018
0


0
Shares
  • Share On Facebook
  • Tweet It

ಬೆಂಗಳೂರು: ಹಾಗೆ ನೋಡಿದರೆ ರಾಜ್ಯ ಸರ್ಕಾರವೇ ಅಧಿಕಾರಿಗಳ ವಿರುದ್ಧ ಸಮರ ಸಾರಿದಂತೆ ವರ್ತಿಸುತ್ತಿದೆ. ಐಎಎಸ್, ಐಪಿಎಸ್ ಅಧಿಕಾರಿಗಳನ್ನು ಮನಬಂದಂತೆ ವರ್ಗಾಯಿಸುವ ಮೂಲಕ ರಾಜ್ಯಾದ್ಯಂತ ನಕಾರಾತ್ಮಕವಾಗಿ ಸುದ್ದಿಯಲ್ಲಿದೆ. ಅದರಲ್ಲೂ ಹಾಸನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿಯವರಂತೂ ಸರ್ಕಾರದ ವಿರುದ್ಧವೇ ಹೋರಾಟಕ್ಕೆ ಮುಂದಾಗಿದ್ದಾರೆ.

ಇದರ ಬೆನ್ನಲ್ಲೇ, ಪೊಲೀಸ್ ಇಲಾಖೆಯಲ್ಲಿರುವ ವೈಫಲ್ಯ, ಹಿರಿಯ ಅಧಿಕಾರಿಗಳ ದರ್ಪದ ಕುರಿತು ಮಂಡ್ಯದಲ್ಲಿರುವ ರಾಜ್ಯ ಪೊಲೀಸ್ ಸಶಸ್ತ್ರ ಮೀಸಲು ಪಡೆ ಪೊಲೀಸರು ಮೇಲಧಿಕಾರಿಗಳ ಕಿರುಕುಳ ತಾಳಲಾರದ ಸರ್ಕಾರದ ಮುಖ್ಯ ಕಾರ್ಯದರ್ಶಿ ರತ್ನಪ್ರಭಾ ಅವರಿಗೆ ಮನವಿ ಮಾಡಿದ್ದಾರೆ.

ಈ ಕುರಿತು ಕರ್ನಾಟಕ ರಾಜ್ಯ ಸಶಸ್ತ್ರ ಮೀಸಲು ಪಡೆಗಳ ಪೊಲೀಸ್ ಸಂಘ, ಐದು ಪುಟಗಳ ದೀರ್ಘ ಪತ್ರವನ್ನು ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದಿದ್ದು, “ಬ್ರಿಟಿಷರ ಕಾಲದ ಕಾನೂನಿನ ನಿರ್ಬಂದದಿಂದಾಗಿ ನೋಂದಣಿಯಾಗಿಲ್ಲದ ಹಾಗೂ ಮಾನ್ಯತೆ ಪಡೆಯದ ಸಂಘ ನಮ್ಮದಾಗಿದ್ದರೂ, ರಾಜ್ಯದಲ್ಲಿ ನಡೆಯುತ್ತಿರುವ ಐಪಿಎಸ್ ಅಧಿಕಾರಿಗಳ ಕಾರ್ಯವೈಖರಿ, ಪ್ರಾಮಾಣಿಕತೆಯ ಕೊರತೆ ಇರುವುದಕ್ಕೆ ಸಿಬ್ಬಂದಿ ಪರವಾಗಿ ವಿಷಾದಿಸುತ್ತೇನೆ” ಎಂದು ಸಂಘದ ಅಧ್ಯಕ್ಷ ಪತ್ರ ಬರೆದಿದ್ದಾರೆ.

ಅಷ್ಟೇ ಅಲ್ಲ, ಪೊಲೀಸ್ ಇಲಾಖೆಯಲ್ಲಿ ಇನ್ನೂ ಜೀತ ಪದ್ಧತಿ ಜೀವಂತವಾಗಿದೆ, ಕೆಳಹಂತದ ಅಧಿಕಾರಿಗಳಿಗೆ ಹಿಂಸೆ ನೀಡಲಾಗುತ್ತಿದೆ, ಅಧಿಕಾರದ ದುರುಪಯೋಗ ಮಾಡಿಕೊಳ್ಳಲಾಗುತ್ತಿದೆ, ಜಾತೀಯತೆ, ಅದಕ್ಷತೆ ತುಂಬಿ ತುಳುಕುತ್ತಿದೆ. ಈ ಕುರಿತು ಕ್ರಮ ಕೈಗೊಳ್ಳಬೇಕು ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.

ಯಾವಾಗಲೂ ಪೊಲೀಸ್ ಇಲಾಖೆ ಎಂದರೆ ಶಸ್ತಿಗೆ, ರಕ್ಷಣೆಗೆ ಹೆಸರಾಗಿದೆ. ಆದರೆ ಮಂಡ್ಯದಲ್ಲಿ ಹಿರಿಯ ಅಧಿಕಾರಿಗಳ ಉಪಟಳದಿಂದ ಸಶಸ್ತ್ರ ಮೀಸಲು ಪಡೆ ಸಿಬ್ಬಂದಿ ಬಸವಳಿದಿದ್ದು, ಸರ್ಕಾರ ಈ ಸಮಸ್ಯೆ ಬಗೆಹರಿಸುವುದೇ, ಸಿದ್ದರಾಮಯ್ಯನವರಿಗೆ ಅಧಿಕಾರಿಗಳ ಈ ಕೂಗು ಕೇಳುವುದೇ ಎಂಬುದೇ ಸದ್ಯದ ಪ್ರಶ್ನೆ.

0
Shares
  • Share On Facebook
  • Tweet It




Trending Now
ಕೇರಳ ಇನ್ನು ಮುಂದೆ ಕೇರಳಂ!
Tulunadu News February 24, 2026
ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
Tulunadu News February 19, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕೇರಳ ಇನ್ನು ಮುಂದೆ ಕೇರಳಂ!
    • ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
    • ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
    • ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
  • Popular Posts

    • 1
      ಕೇರಳ ಇನ್ನು ಮುಂದೆ ಕೇರಳಂ!
    • 2
      ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!

  • Privacy Policy
  • Contact
© Tulunadu Infomedia.

Press enter/return to begin your search