• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮುಖ್ಯಮಂತ್ರಿ ಸಿದ್ದರಾಮಯ್ಯನವರೇ, ಈ ಅಧಿಕಾರಿಗಳ ಗೋಳು ನಿಮಗೆ ಕೇಳುವುದಿಲ್ಲವೇ?

TNN Correspondent Posted On March 15, 2018
0


0
Shares
  • Share On Facebook
  • Tweet It

ಬೆಂಗಳೂರು: ಹಾಗೆ ನೋಡಿದರೆ ರಾಜ್ಯ ಸರ್ಕಾರವೇ ಅಧಿಕಾರಿಗಳ ವಿರುದ್ಧ ಸಮರ ಸಾರಿದಂತೆ ವರ್ತಿಸುತ್ತಿದೆ. ಐಎಎಸ್, ಐಪಿಎಸ್ ಅಧಿಕಾರಿಗಳನ್ನು ಮನಬಂದಂತೆ ವರ್ಗಾಯಿಸುವ ಮೂಲಕ ರಾಜ್ಯಾದ್ಯಂತ ನಕಾರಾತ್ಮಕವಾಗಿ ಸುದ್ದಿಯಲ್ಲಿದೆ. ಅದರಲ್ಲೂ ಹಾಸನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿಯವರಂತೂ ಸರ್ಕಾರದ ವಿರುದ್ಧವೇ ಹೋರಾಟಕ್ಕೆ ಮುಂದಾಗಿದ್ದಾರೆ.

ಇದರ ಬೆನ್ನಲ್ಲೇ, ಪೊಲೀಸ್ ಇಲಾಖೆಯಲ್ಲಿರುವ ವೈಫಲ್ಯ, ಹಿರಿಯ ಅಧಿಕಾರಿಗಳ ದರ್ಪದ ಕುರಿತು ಮಂಡ್ಯದಲ್ಲಿರುವ ರಾಜ್ಯ ಪೊಲೀಸ್ ಸಶಸ್ತ್ರ ಮೀಸಲು ಪಡೆ ಪೊಲೀಸರು ಮೇಲಧಿಕಾರಿಗಳ ಕಿರುಕುಳ ತಾಳಲಾರದ ಸರ್ಕಾರದ ಮುಖ್ಯ ಕಾರ್ಯದರ್ಶಿ ರತ್ನಪ್ರಭಾ ಅವರಿಗೆ ಮನವಿ ಮಾಡಿದ್ದಾರೆ.

ಈ ಕುರಿತು ಕರ್ನಾಟಕ ರಾಜ್ಯ ಸಶಸ್ತ್ರ ಮೀಸಲು ಪಡೆಗಳ ಪೊಲೀಸ್ ಸಂಘ, ಐದು ಪುಟಗಳ ದೀರ್ಘ ಪತ್ರವನ್ನು ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದಿದ್ದು, “ಬ್ರಿಟಿಷರ ಕಾಲದ ಕಾನೂನಿನ ನಿರ್ಬಂದದಿಂದಾಗಿ ನೋಂದಣಿಯಾಗಿಲ್ಲದ ಹಾಗೂ ಮಾನ್ಯತೆ ಪಡೆಯದ ಸಂಘ ನಮ್ಮದಾಗಿದ್ದರೂ, ರಾಜ್ಯದಲ್ಲಿ ನಡೆಯುತ್ತಿರುವ ಐಪಿಎಸ್ ಅಧಿಕಾರಿಗಳ ಕಾರ್ಯವೈಖರಿ, ಪ್ರಾಮಾಣಿಕತೆಯ ಕೊರತೆ ಇರುವುದಕ್ಕೆ ಸಿಬ್ಬಂದಿ ಪರವಾಗಿ ವಿಷಾದಿಸುತ್ತೇನೆ” ಎಂದು ಸಂಘದ ಅಧ್ಯಕ್ಷ ಪತ್ರ ಬರೆದಿದ್ದಾರೆ.

ಅಷ್ಟೇ ಅಲ್ಲ, ಪೊಲೀಸ್ ಇಲಾಖೆಯಲ್ಲಿ ಇನ್ನೂ ಜೀತ ಪದ್ಧತಿ ಜೀವಂತವಾಗಿದೆ, ಕೆಳಹಂತದ ಅಧಿಕಾರಿಗಳಿಗೆ ಹಿಂಸೆ ನೀಡಲಾಗುತ್ತಿದೆ, ಅಧಿಕಾರದ ದುರುಪಯೋಗ ಮಾಡಿಕೊಳ್ಳಲಾಗುತ್ತಿದೆ, ಜಾತೀಯತೆ, ಅದಕ್ಷತೆ ತುಂಬಿ ತುಳುಕುತ್ತಿದೆ. ಈ ಕುರಿತು ಕ್ರಮ ಕೈಗೊಳ್ಳಬೇಕು ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.

ಯಾವಾಗಲೂ ಪೊಲೀಸ್ ಇಲಾಖೆ ಎಂದರೆ ಶಸ್ತಿಗೆ, ರಕ್ಷಣೆಗೆ ಹೆಸರಾಗಿದೆ. ಆದರೆ ಮಂಡ್ಯದಲ್ಲಿ ಹಿರಿಯ ಅಧಿಕಾರಿಗಳ ಉಪಟಳದಿಂದ ಸಶಸ್ತ್ರ ಮೀಸಲು ಪಡೆ ಸಿಬ್ಬಂದಿ ಬಸವಳಿದಿದ್ದು, ಸರ್ಕಾರ ಈ ಸಮಸ್ಯೆ ಬಗೆಹರಿಸುವುದೇ, ಸಿದ್ದರಾಮಯ್ಯನವರಿಗೆ ಅಧಿಕಾರಿಗಳ ಈ ಕೂಗು ಕೇಳುವುದೇ ಎಂಬುದೇ ಸದ್ಯದ ಪ್ರಶ್ನೆ.

0
Shares
  • Share On Facebook
  • Tweet It




Trending Now
ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
Tulunadu News November 1, 2025
ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
Tulunadu News October 31, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
    • ದೀಪಾವಳಿ ಬೋನಸ್ ಕಡಿಮೆ ಕೊಟ್ಟಿದ್ದಕ್ಕೆ ಟೋಲ್ ಸಿಬ್ಬಂದಿಗಳು ಮಾಡಿದ್ದೇನು?
  • Popular Posts

    • 1
      ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • 2
      ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • 3
      ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • 4
      ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • 5
      ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!

  • Privacy Policy
  • Contact
© Tulunadu Infomedia.

Press enter/return to begin your search