• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಮಹಿಳಾ ಸಬಲೀಕರಣದ ಪರ ಮಾತನಾಡುವ ಕಾಂಗ್ರೆಸ್ ತಮ್ಮದೇ ಪಕ್ಷದ ಮಹಿಳೆಯನ್ನು ಹೇಗೆ ನಡೆಸಿಕೊಂಡಿದೆ ನೋಡಿ!

TNN Correspondent Posted On March 15, 2018


  • Share On Facebook
  • Tweet It

ಮಂಗಳೂರು: ಸೋನಿಯಾ ಗಾಂಧಿಯಿಂದ ಹಿಡಿದು, ರಾಹುಲ್ ಗಾಂಧಿವರೆಗೆ, ಮುಖ್ಯಮಂತ್ರಿ ಸಿದ್ದರಾಮಯ್ಯನವರಿಂದ ಹಿಡಿದು ಪರಮೇಶ್ವರ್ ವರೆಗೆ ಕಾಂಗ್ರೆಸ್ಸಿನ ಎಲ್ಲ ನಾಯಕರು ಮಹಿಳೆಯರ ಸಬಲೀಕರಣದ ಬಗ್ಗೆ ಮಾತನಾಡುತ್ತಾರೆ. ಮಹಿಳೆಯರಿಗೆ ಆ ಸ್ವಾತಂತ್ರ್ಯ ನೀಡಬೇಕು, ಸಮಾನ ಅವಕಾಶ ನೀಡಬೇಕು ಎಂದೆಲ್ಲ ಭಾಷಣ ಬಿಗಿಯುತ್ತಾರೆ.

ಆದರೆ ಇದೇ ಕಾಂಗ್ರೆಸ್, ತಮ್ಮದೇ ಪಕ್ಷದ ಮಹಿಳೆಯೊಬ್ಬರನ್ನು ಹೇಗೆ ನಡೆಸಿಕೊಂಡಿದೆ ಎಂಬುದನ್ನು ನೋಡಿದರೆ ಎಂತಹವರಿಗೂ ಬೇಸರವಾಗುತ್ತದೆ. ಕಾಂಗ್ರೆಸ್ ಮೇಲೆ ಒಂದಿಡಿ ಕೋಪ ಬರುತ್ತದೆ. ಇದು ಮಹಿಳೆಯನ್ನು ನಡೆಸಿಕೊಳ್ಳುವ ಪರಿಯಾ ಎಂಬ ಆಕ್ರೋಶ ಕಾಡುತ್ತದೆ.

ಹೌದು, ಮಂಗಳೂರು ಮಹಾನಗರ ಪಾಲಿಕೆ ಸದಸ್ಯೆಯಾಗಿರುವ ಪ್ರತಿಭಾ ಕುಳಾಯಿ ಅವರಿಗೆ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿ ಶೋಕಾಸ್ ನೋಡಿದೆ. ಒಂದು ವಾರದಲ್ಲಿ ಉತ್ತರ ನೀಡಬೇಕು ಎಂದು ಆದೇಶಿಸಿದೆ.

ಆಗಿದ್ದಿಷ್ಟೇ, ಕಾಂಗ್ರೆಸ್ ಪಕ್ಷದ ಕಾರ್ಯದರ್ಶಿ ಕಿರುಕುಳ ನೀಡಿದ್ದಾನೆ ಎಂದು ಪ್ರತಿಭಾ ಕುಳಾಯಿ ಆರೋಪಿಸಿದ್ದರು. ಈ ಕುರಿತು ರಾಷ್ಟ್ರೀಯ ಸುದ್ದಿವಾಹಿನಿಯಲ್ಲಿ ಮಾತನಾಡಿದ್ದರು.

ಆದರೆ ಮಹಿಳೆಗೆ ನ್ಯಾಯ ಒದಗಿಸಬೇಕಾಗಿದ್ದ ಜಿಲ್ಲಾ ಕಾಂಗ್ರೆಸ್ ಈಗ ಕಾಂಗ್ರೆಸ್ ಪರ ನಿಂತಿದ್ದು, ಅನುಮತಿಯಿಲ್ಲದೆ ಟಿವಿ ಚಾನೆಲ್ ನಲ್ಲಿ ಭಾಗವಹಿಸಿದ್ದಕ್ಕೆ ಉತ್ತರಿಸಿ ಎಂದು ನೋಟಿಸ್ ನೀಡಲಾಗಿದೆ. ಆದ ಅನ್ಯಾಯದ ಕುರಿತು ಮಾಧ್ಯಮದಲ್ಲಿ ಮಾತನಾಡುವುದೇ ತಪ್ಪು ಎಂಬಂತೆ ಕಾಂಗ್ರೆಸ್ ವರ್ತಿಸಿದೆ. ಹೇಳುವುದು ಆಚಾರ, ತಿನ್ನುವುದು ಬದನೆಕಾಯಿ ಎಂದು ಪ್ರಾಯಶಃ ಕಾಂಗ್ರೆಸ್ಸನ್ನು ನೋಡಿಯೇ ಹೇಳಿದ್ದಾರೇನೋ?

 

  • Share On Facebook
  • Tweet It


- Advertisement -


Trending Now
ಬ್ರಿಜ್ ವಿರುದ್ಧ ಪ್ರತಿಭಟನೆಯ ಹಿಂದಿನ ಸತ್ಯ!!
Tulunadu News June 1, 2023
ಕೇರಳ ಸ್ಟೋರಿ ಸಿನೆಮಾ ಕಾಲ್ಪನಿಕ ಕಥೆ ಅಲ್ಲ!!
Tulunadu News May 31, 2023
Leave A Reply

  • Recent Posts

    • ಬ್ರಿಜ್ ವಿರುದ್ಧ ಪ್ರತಿಭಟನೆಯ ಹಿಂದಿನ ಸತ್ಯ!!
    • ಕೇರಳ ಸ್ಟೋರಿ ಸಿನೆಮಾ ಕಾಲ್ಪನಿಕ ಕಥೆ ಅಲ್ಲ!!
    • ಕಾಂಗ್ರೆಸ್ ಸರಕಾರ ಹೊಸ ಸಂಸತ್ ಭವನ ನಿರ್ಮಿಸಿದ್ದರೆ ಏನಾಗುತ್ತಿತ್ತು?
    • ಗ್ಯಾರಂಟಿ ಇಲ್ಲದ ಸರಕಾರದಿಂದ ದ್ವೇಷದ ಆಡಳಿತ: ವೇದವ್ಯಾಸ್ ಕಾಮತ್
    • ನಾವು ಬೇರೆ ಧರ್ಮದ ಯುವಕರ ಜಾಲಕ್ಕೆ ಬಲಿಯಾಗಲ್ಲ!
    • ಗೆದ್ದ ಕೂಡಲೇ ಕಾಂಗ್ರೆಸ್ಸಿಗರ ದಬ್ಬಾಳಿಕೆ ಶುರು!!
    • ಮೇ ಮಳೆ ತೆರೆದಿಟ್ಟಿತ್ತು ಹಣೆಬರಹ!
    • ಚುನಾವಣೆ ಪ್ರಜಾಪ್ರಭುತ್ವದ ಹಬ್ಬ ಬೆಟ್ಟಿಂಗ್ ನವರಿಗೆ!!
    • ಕೇರಳ ಸ್ಟೋರಿ ಮೇ ಮೇರಾ ಅಬ್ದುಲ್ಲಾ ಅಲಗ್ ಹೇ?
    • ಪ್ರಣಾಳಿಕೆಯಲ್ಲಿ ಪಾರ್ಕಿಂಗ್ ಸಮಸ್ಯೆ ಪರಿಹರಿಸಲು ಮೂರು ಸೂತ್ರ!!
  • Popular Posts

    • 1
      ಬ್ರಿಜ್ ವಿರುದ್ಧ ಪ್ರತಿಭಟನೆಯ ಹಿಂದಿನ ಸತ್ಯ!!
    • 2
      ಕೇರಳ ಸ್ಟೋರಿ ಸಿನೆಮಾ ಕಾಲ್ಪನಿಕ ಕಥೆ ಅಲ್ಲ!!
    • 3
      ಕಾಂಗ್ರೆಸ್ ಸರಕಾರ ಹೊಸ ಸಂಸತ್ ಭವನ ನಿರ್ಮಿಸಿದ್ದರೆ ಏನಾಗುತ್ತಿತ್ತು?
    • 4
      ಗ್ಯಾರಂಟಿ ಇಲ್ಲದ ಸರಕಾರದಿಂದ ದ್ವೇಷದ ಆಡಳಿತ: ವೇದವ್ಯಾಸ್ ಕಾಮತ್
    • 5
      ನಾವು ಬೇರೆ ಧರ್ಮದ ಯುವಕರ ಜಾಲಕ್ಕೆ ಬಲಿಯಾಗಲ್ಲ!


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search