• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಬಾಂಗ್ಲಾದಲ್ಲಿ ಕೀರ್ತನೆ ಮಾಡುತ್ತಿದ್ದ ಹಿಂದೂಗಳ ಮೇಲೆ ದಾಳಿ, ದೇಶ ತೊರೆಯುವಂತೆ ಕಿರುಕುಳ

TNN Correspondent Posted On March 15, 2018
0


0
Shares
  • Share On Facebook
  • Tweet It

ಢಾಕಾ: ಭಾರತದ ಸಹಾಯದಿಂದ ಸ್ವಾತಂತ್ರ್ಯ ಪಡೆದಿರುವ ಬಾಂಗ್ಲಾದಲ್ಲೂ ಹಿಂದೂಗಳಿಗೆ ನೆಮ್ಮದಿ ಇಲ್ಲದಂತಾಗಿದ್ದು, ಹಿಂದೂಗಳ ಮೇಲೆ ನಿರಂತರವಾಗಿ ಹಲ್ಲೆ, ದಾಳಿ, ದರೋಡೆ, ಅತ್ಯಾಚಾರ ಅನಾಚಾರಗಳು ಅನಾಯಾಸವಾಗಿ ನಡೆದಿವೆ. ಇದೀಗ ಹಿಂದೂಗಳ ಮೇಲೆ ಹಲ್ಲೆ ನಡೆಸಿ, ದೇಶ ಬಿಟ್ಟು ತೊಲಗಿ ಎಂದು ಒತ್ತಾಯಿಸಿದ, ಘಟನೆ ಬಾಂಗ್ಲಾದೇಶದಲ್ಲಿ ನಡೆದಿದೆ.

ಬಾಂಗ್ಲಾದೇಶದ ಖಜೂರಿಯಾ ಗ್ರಾಮದಲ್ಲಿ ಹಿಂದೂಗಳು ವಾರ್ಷಿಕ ಸಾಮೂಹಿಕ ಕೀರ್ತನೆ ಕಾರ್ಯಕ್ರಮ ಹಮ್ಮಿಕೊಂಡಿದ್ದರು. ನೂರಾರು ಹಿಂದೂಗಳು ಸಾಮೂಹಿಕವಾಗಿ ಕೀರ್ತನೆ ಹಮ್ಮಿಕೊಂಡಿದ್ದರು. ಈ ವೇಳೆ ಪ್ರವೇಶಿಸಿದ ಶಾಹಿನ್ ಮತ್ತು ನೂರುಲ್ ಹಕ್ ಎಂಬ ಮುಸ್ಲಿಂ ಯುವಕರು ಹಿಂದೂಗಳ ಮೇಲೆ ದಾಳಿ ಮಾಡಿದಲ್ಲದೇ, ಅವಾಚ್ಯ ಶಬ್ದಗಳಿಂದ ನಿಂಧಿಸಿದ್ದಾರೆ. ಅಲ್ಲದೇ ಕೀರ್ತನೆ ಮಾಡುವಂತಿದ್ದರೇ, ಭಾರತಕ್ಕೆ ಹೋಗಿ ಎಂದು ಬೆದರಿಕೆ ಒಡ್ಡಿದ್ದಾರೆ ಎಂದು ಬಾಂಗ್ಲಾದ  eibela.com ವರದಿ ಮಾಡಿದೆ.

ಗ್ರಾಮದಲ್ಲಿ ಸಾಮಾನ್ಯ ಹಿಂದೂಗಳು ಜೀವನ ನಡೆಸುವುದೇ ದುಸ್ತರವಾಗಿದೆ. ಜನರು ಆತಂಕದಲ್ಲೇ ಜೀವನ ನಡೆಸುವಂತಾಗಿದೆ. ಸ್ಥಳೀಯ ಗುಂಡಾಗಳು ಹಿಂದೂಗಳ ಮೇಲೆ ನಿರಂತರವಾಗಿ ದಾಳಿ ನಡೆಸುತ್ತಿದ್ದಾರೆ. ಕಿರುಕುಳ ನೀಡುವ ಪ್ರಕ್ರಿಯೆ ನಿರಂತರವಾಗಿವೆ ಎಂದು ಗ್ರಾಮದ ಪುಲಿನ್ ಘರಾಮಿ, ಮಣಿಂದ್ರ ಬಿಸ್ವಾಸ್, ಮಹಾರಾಜ್ ಬಿಸ್ವಾಸ್, ಹರಿದಾಸ್ ಘರಾಮಿ ತಿಳಿಸಿದ್ದಾರೆ.

ಸ್ಥಳೀಯ ಆಡಳಿತ ಹಿಂದೂಗಳನ್ನು ರಕ್ಷಿಸಬೇಕು. ಇಲ್ಲದಿದ್ದರೇ ಜೀವನ ಮತ್ತಷ್ಟು ದುರಸ್ತರವಾಗಲಿದೆ ಎಂದು ಹಿಂದೂಗಳು ಆಗ್ರಹಿಸಿದ್ದಾರೆ. ಇನ್ನು ಘಟನೆ ನಡೆದ ಸ್ಥಳಕ್ಕೆ ಜನಪ್ರತಿನಿಧಿಗಳು ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದು, ತನಿಖೆ ನಡೆಸಲಾಗುತ್ತಿದೆ.

0
Shares
  • Share On Facebook
  • Tweet It




Trending Now
ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ
Tulunadu News June 16, 2026
Najlepsze bonusy i sloty w polskim kasynie online
Tulunadu News May 29, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ
    • Najlepsze bonusy i sloty w polskim kasynie online
    • ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ

  • Privacy Policy
  • Contact
© Tulunadu Infomedia.

Press enter/return to begin your search