• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಹೋರಾಟ ಮಾಡುತ್ತಿದ್ದ ರೈತರ ಟೆಂಟ್ ಸುಟ್ಟ ಸಿಪಿಎಂ ಕಾರ್ಯಕರ್ತರ ದುರುದ್ದೇಶ ಎಂಥಾದ್ದು ಗೊತ್ತಾಯಿತಲ್ಲವೇ?

TNN Correspondent Posted On March 16, 2018
0


0
Shares
  • Share On Facebook
  • Tweet It

ತಿರುವನಂತಪುರ: ಮೊನ್ನೆ ಮಹಾರಾಷ್ಟ್ರದಲ್ಲಿ ಸಾವಿರಾರು ರೈತರು ಬೃಹತ್ ಪ್ರತಿಭಟನೆ ನಡೆಸಿದರಲ್ಲ, ಆಗ ಕಾಂಗ್ರೆಸ್ ಸೇರಿ ಹಲವು ವಿರೋಧ ಪಕ್ಷಗಳು ರಾಜ್ಯ ಸರ್ಕಾರದ ವಿರುದ್ಧ ಹರಿಹಾಯ್ದವು. ಆದರೆ ರೈತ ಪರ ದೇವೇಂದ್ರ ಫಡ್ನವೀಸ್ ಅವರು ಆರು ತಿಂಗಳಲ್ಲಿ ರೈತರ ಬೇಡಿಕೆ ಈಡೇರಿಸುವೆ ಎಂದು ಭರವಸೆ ನೀಡಿದರು. ಅದು ಪ್ರಜಾಪ್ರಭುತ್ವದ ಹೆಗ್ಗಳಿಗೆ, ಲಕ್ಷಣ.

ಆದರೆ ಈ ಸಿಪಿಎಂ ಆಡಳಿತವಿರುವ ಕೇರಳದಲ್ಲಿ ಏನಾಗುತ್ತಿದೆ? ಪ್ರಜಾಪ್ರಭುತ್ವದ ಬೇರುಗಳನ್ನೇ ಬಿಸಾಡುತ್ತಿದ್ದಾರಾ ಈ ಕಮ್ಮಿನಿಷ್ಠರು ಎಂಬ ಅನುಮಾನ ಕಾಡುತ್ತಿದೆ. ಇಷ್ಟಾದರೂ ಯಾವುದೇ ಬುದ್ಧಿಜೀವಿಗಳು ಸಹ ಇತ್ತ ಗಮನ ಹರಿಸುತ್ತಿಲ್ಲ, ಬಾಯಿ ಬಿಡುತ್ತಿಲ್ಲ ಎಂಬುದು ಸಹ ಒಳಮರ್ಮ ಬಯಲು ಮಾಡಿದೆ.

ಹೌದು, ಕೇರಳದ ಕಣ್ಣೂರು ಜಿಲ್ಲೆಯ ವಯಲ್ಕಿಲಿ ಎಂಬಲ್ಲಿ ರಾಷ್ಟ್ರೀಯ ಹೆದ್ದಾರಿ ನಿರ್ಮಾಣಕ್ಕಾಗಿ ಸುಮಾರು 250 ಎಕರೆ ಜಮೀನನ್ನು ವಶಪಡಿಸಿಕೊಳ್ಳಲು ಸರ್ಕಾರ ಮುಂದಾಗಿದೆ. ಆದರೆ, ರೈತರು ಭೂಮಿ ವಶಪಡಿಸಿಕೊಳ್ಳುವುದು ಬೇಡ ಎಂದು ಪ್ರತಿಭಟನೆ ಮಾಡುತ್ತಿದ್ದಾರೆ.

ಅಷ್ಟೇ, ಅಲ್ಲ ಭತ್ತ ಬೆಳೆದು ಜೀವನ ಸಾಗಿಸುವ 46 ರೈತರು ವಯಲ್ಕಿಲಿಯಲ್ಲಿ ಭೂಮಿ ವಶಪಡಿಸಿಕೊಳ್ಳುವುದರ ವಿರುದ್ಧ ಟೆಂಟ್ ಹಾಕಿ ಪ್ರತಿಭಟನೆ ನಡೆಸಿದ್ದಾರೆ. ಯಾವುದೇ ಕಾರಣಕ್ಕೂ ಭೂಮಿ ವಶಪಡಿಸಿಕೊಳ್ಳುವುದು ಬೇಡ ಎಂದು ಪಟ್ಟುಹಿಡಿದಿದ್ದಾರೆ.

ಆದರೆ ಶತಾಯಗತಾಯ ರೈತರ ಭೂಮಿ ವಶಪಡಿಸಿಕೊಳ್ಳಲು ಮುಂದಾಗಿರುವ ಸಿಪಿಎಂ ಸರ್ಕಾರ ಮೊದಲು ರೈತರಿಗೆ ಬೆದರಿಕೆ ಹಾಕಿದೆ. ಅದಕ್ಕೂ ಜಗ್ಗದ ಹಿನ್ನೆಲೆಯಲ್ಲಿ ಸಿಪಿಎಂ ಕಾರ್ಯಕರ್ತರನ್ನು ಬಿಟ್ಟು ರೈತರ ಟೆಂಟು ಸುಟ್ಟುಹಾಕಿದೆ ಎಂದು ತಿಳಿದುಬಂದಿದೆ.

ಪ್ರತಿಭಟನೆ ನಡೆಸುತ್ತಿದ್ದ ರೈತರನ್ನು ಮೊದಲು ಬಂಧಿಸಲಾಯಿತು. ಬಳಿಕ ಸಿಪಿಎಂ ಕಾರ್ಯಕರ್ತರು ಬಂದು ರೈತರು ಹಾಕಿದ್ದ ಟೆಂಟ್ ಗಳನ್ನು ಸುಟ್ಟು ಹಾಕಿದ್ದಾರೆ ಎಂದು ರೈತರು ಆರೋಪಿಸಿದ್ದಾರೆ.

ಬಿಜೆಪಿ ಸರ್ಕಾರದ ಆಡಳಿತದಲ್ಲಿ ರೈತರು ಪ್ರತಿಭಟನೆ ಮಾಡಿ, ಅದಕ್ಕೆ ಸರ್ಕಾರ ನ್ಯಾಯಯುತವಾಗಿ ಬೇಡಿಕೆ ಈಡೇರಿಸುತ್ತೇನೆ ಎಂದು ಹೇಳಿದ ಬಳಿಕ ಪ್ರತಿಭಟನೆ ಹಿಂಪಡೆದರೆ, ಅದು ಒಳಒಪ್ಪಂದ ಎಂದು ಕಾಂಗ್ರೆಸ್ಸಿಗರು ಆರೋಪ ಮಾಡುತ್ತಾರೆ. ಆದರೆ ಅದೇ ಕೇರಳದಲ್ಲಿ ಪ್ರತಿಭಟನೆ ಮಾಡುತ್ತಿದ್ದ ರೈತರ ಟೆಂಟ್ ಸುಟ್ಟು ಹಾಕಿ ದರ್ಪ ಮೆರೆಯುವ ಸಿಪಿಎಂ ಕಾರ್ಯಕರ್ತರ ಬಗ್ಗೆ ಮಾತ್ರ ಕಾಂಗ್ರೆಸ್ ಬಾಯಿಗೆ ಬೀಗ ಹಾಕಿಕೊಂಡು ಕುಳಿತುಕೊಳ್ಳುವುದನ್ನು ನೋಡಿದರೆ ಇವರ ರೈತಪರ ಕಾಳಜಿ ಎಷ್ಟಿದೆ ಎಂಬುದು ಢಾಳಾಗುತ್ತದೆ. ಅದಕ್ಕೇ ಅಲ್ಲವೇ, ಜನ ದೇಶದ ಹಲವು ರಾಜ್ಯಗಳಲ್ಲಿ ಕಾಂಗ್ರೆಸ್ಸನ್ನು, ತ್ರಿಪುರಾದಲ್ಲಿ ಸಿಪಿಎಂ ಅನ್ನು ಮೂಲೆಗೆ ತಳ್ಳಿದ್ದು.

0
Shares
  • Share On Facebook
  • Tweet It




Trending Now
ಸಣ್ಣಪುಟ್ಟ ಅಂಗಡಿಗಳಿಗೂ ಈಗ ತೆರಿಗೆ ಅಧಿಕಾರಿಗಳ ನೋಟಿಸ್ ಯಾಕೆ? ಇಲ್ಲಿದೆ ಸುಲಭ ಲೆಕ್ಕಾಚಾರ!
Tulunadu News July 19, 2025
ಭಾರತದ ಡ್ರೆಸ್ಸಿಂಗ್ ರೂಂನಲ್ಲಿ ಹನುಮಾನ್ ಚಾಲೀಸಾ ಪಠಣ!
Tulunadu News July 18, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಸಣ್ಣಪುಟ್ಟ ಅಂಗಡಿಗಳಿಗೂ ಈಗ ತೆರಿಗೆ ಅಧಿಕಾರಿಗಳ ನೋಟಿಸ್ ಯಾಕೆ? ಇಲ್ಲಿದೆ ಸುಲಭ ಲೆಕ್ಕಾಚಾರ!
    • ಭಾರತದ ಡ್ರೆಸ್ಸಿಂಗ್ ರೂಂನಲ್ಲಿ ಹನುಮಾನ್ ಚಾಲೀಸಾ ಪಠಣ!
    • ಉತ್ತರಾಖಂಡದ ಎಲ್ಲಾ 17000 ಸರಕಾರಿ ಶಾಲೆಗಳಲ್ಲಿ ಭಗವದ್ಗೀತೆ ಪಠಣ ಕಡ್ಡಾಯ ಅದೇಶ!
    • ಯುವಕನನ್ನು ಲವ್ ಜಿಹಾದ್ ಮಾಡಿದ್ಲಾ ಮುಸ್ಲಿಂ ಯುವತಿ! ಹಿಂದೂ ಯುವಕ ಕಂಗಾಲು...
    • ಮೋದಿ ಮಾತ್ರ ವಾರಕ್ಕೆ 100 ಗಂಟೆ ಕೆಲಸ ಮಾಡ್ತಾರೆ- ಸಂಸದ ತೇಜಸ್ವಿಗೆ ಹೇಳಿದ ನಾರಾಯಣ್ ಮೂರ್ತಿ
    • ಗಂಡ ತಲೆಹಿಡುಕ ಎಂದ ಸಂತ್ರಸ್ತೆಗೆ ಪೊಲೀಸ್ ಪೇದೆಯೇ ಮುಕ್ಕಿದ ಮಂಗಳೂರಿನ ನೋವಿನ ಕಥೆ!
    • ನಿಟ್ಟೆ ಕಾಲೇಜು ಹಾಸ್ಟೆಲ್ ಶೌಚಾಲಯದಲ್ಲಿ ಹಿಂದೂ-ಮುಸ್ಲಿಂ ದ್ವೇಷ ಬರಹ! ವಿದ್ಯಾರ್ಥಿನಿ ಬಂಧನ
    • ಕಾರ್ಕಳ ಪರಶುರಾಮನ ವಿಗ್ರಹ ಕಂಚಿನದ್ದು ಅಲ್ಲ, ನಕಲಿ: ಚಾರ್ಜ್ ಶೀಟ್ ಸಲ್ಲಿಕೆ
    • ಲಗಾನ್ ನಿರ್ದೇಶಕ ಅಶುತೋಷ್ ನಿರ್ದೇಶನದಲ್ಲಿ ರಿಷಬ್ ಆಗಲಿದ್ದಾರೆ ಕೃಷ್ಣದೇವರಾಯ!
    • ಅಂದು ಕ್ಲರ್ಕ್.. ಇಂದು ಕರ್ಣಾಟಕ ಬ್ಯಾಂಕಿನ ಎಂಡಿ, ಸಿಇಒ!
  • Popular Posts

    • 1
      ಸಣ್ಣಪುಟ್ಟ ಅಂಗಡಿಗಳಿಗೂ ಈಗ ತೆರಿಗೆ ಅಧಿಕಾರಿಗಳ ನೋಟಿಸ್ ಯಾಕೆ? ಇಲ್ಲಿದೆ ಸುಲಭ ಲೆಕ್ಕಾಚಾರ!
    • 2
      ಭಾರತದ ಡ್ರೆಸ್ಸಿಂಗ್ ರೂಂನಲ್ಲಿ ಹನುಮಾನ್ ಚಾಲೀಸಾ ಪಠಣ!
    • 3
      ಉತ್ತರಾಖಂಡದ ಎಲ್ಲಾ 17000 ಸರಕಾರಿ ಶಾಲೆಗಳಲ್ಲಿ ಭಗವದ್ಗೀತೆ ಪಠಣ ಕಡ್ಡಾಯ ಅದೇಶ!
    • 4
      ಯುವಕನನ್ನು ಲವ್ ಜಿಹಾದ್ ಮಾಡಿದ್ಲಾ ಮುಸ್ಲಿಂ ಯುವತಿ! ಹಿಂದೂ ಯುವಕ ಕಂಗಾಲು...
    • 5
      ಮೋದಿ ಮಾತ್ರ ವಾರಕ್ಕೆ 100 ಗಂಟೆ ಕೆಲಸ ಮಾಡ್ತಾರೆ- ಸಂಸದ ತೇಜಸ್ವಿಗೆ ಹೇಳಿದ ನಾರಾಯಣ್ ಮೂರ್ತಿ

  • Privacy Policy
  • Contact
© Tulunadu Infomedia.

Press enter/return to begin your search