• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಬಿಜೆಪಿ ಗೆದ್ದರೆ ಭಾರತ ಮಾತಾಕಿ ಜೈ, ಆರ್ ಜೆಡಿ ಸರ್ಫಾಜ್ ಅಲಂ ಗೆದ್ದರೆ ಪಾಕ್ ಗೆ ಜೈ. ಇದಲ್ಲವೇ ದುರಂತ

TNN Correspondent Posted On March 16, 2018


  • Share On Facebook
  • Tweet It

ಅರಾರಿಯಾ: ಭಾರತದ ರಾಜಕಾರಣದಲ್ಲಿ ಬಿಜೆಪಿ ವಿಭಿನ್ನವಾಗಿ ನಿಲ್ಲುವುದು ತನ್ನ ಎಲ್ಲ ಕಾರ್ಯಕ್ರಮಗಳಲ್ಲಿ, ವಿಜಯೋತ್ಸವದಲ್ಲಿ ಕಾರ್ಯಕರ್ತರು ಭಾರತ್ ಮಾತಾಕಿ ಜೈ ಎನ್ನುವ ಕಾರಣಕ್ಕೆ. ಆದರೆ ಬಿಜೆಪಿಯೇತರ ಪಕ್ಷಗಳವರು ಅದೇ ಮುಖಂಡರ, ಪಕ್ಷದ ಹೆಸರಿಗೆ ಜೈ ಅಂತಾರೆ. ಇನ್ನು ಕೆಲವು ದೇಶವಿರೋಧಿ ರಾಜಕೀಯ ಪಕ್ಷಗಳ ಬೆಂಬಲಿತರು ಪಾಕಿಸ್ತಾನಕ್ಕೆ ಜೈ ಅಂತಾರೆ. ಅಂತದ್ದೊಂದು ಘಟನೆ  ಬಿಹಾರದ ಅರಾರಿಯಾದಲ್ಲಿ ನಡೆದಿದೆ.

ದೇಶವಿರೋಧಿ ಘೋಷಣೆ ಕೂಗಿದವರನ್ನು ಬಂಧಿಸಲು ಆಗ್ರಹಿಸಿ ಪ್ರತಿಭಟನೆ

ಇತ್ತೀಚೆಗೆ ಬಿಹಾರದಲ್ಲಿ ನಡೆದ ಉಪಚುನಾವಣೆಯಲ್ಲಿ ಗೆಲುವು ಸಾಧಿಸಿದ ಸರ್ಫಾಜ್ ಅಲಂ ಬೆಂಬಲಿಗರು ಪಾಕಿಸ್ತಾನದ ಪರ ಜೈಘೋಷಣೆಗಳನ್ನು ಕೂಗುವ ಮೂಲಕ ದೇಶ ವಿರೋಧಿ ಎಂಬುದನ್ನು ಆರಂಭದಲ್ಲೇ ಸಾಬೀತು ಪಡಿಸಿದ್ದಾರೆ. ಸರ್ಫಾಜ್ ಅಲಂ ನ ಮೂವರು ಬೆಂಬಲಿಗರು ಈ ದೇಶ ವಿರೋಧಿ ಘೋಷಣೆ ಕೂಗಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ್ದು, ರಾಷ್ಟ್ರಭಕ್ತರ ತೀವ್ರ ವಿರೋಧಕ್ಕೆ ಕಾರಣವಾಗಿದೆ.

ವಿಡಿಯೋದಲ್ಲಿ ದೇಶ ವಿರೋಧಿ ಘೋಷಣೆ ಕೂಗಿರುವುದು ಸ್ಪಷ್ಟವಾಗಿದ್ದು, ಆರೋಪಿಗಳನ್ನು ಬಂಧಿಸಿ ಗಡಿಪಾರು ಮಾಡುವಂತೆ ಆಗ್ರಹಿಸಿ ರಾಷ್ಟ್ರಭಕ್ತ ಸಂಘಟನೆಗಳು ಬೀದಿಗಿಳದು ಹೋರಾಟ ಆರಂಭಿಸಿವೆ. ಇನ್ನು ವಿಡಿಯೋದಲ್ಲಿ ಪಾಕಿಸ್ತಾನದ ಪರ ಘೋಷಣೆಗಳನ್ನು ಕೂಗಿದ ಮೂವರನ್ನು ಬಂಧಿಸುವ ಕುರಿತು ಪೊಲೀಸರು ಜಾಲ ಬೀಸಿದ್ದು, ತನಿಖೆ ನಡೆಸುತ್ತಿದ್ದಾರೆ.

ರಾಷ್ಟ್ರೀಯ ಜನತಾದಳದ (ಆರ್ ಜೆಡಿ) ಸಂಸದ ಮಹಮ್ಮದ್ ತಸ್ಲಿಮುದ್ದೀನ್ ಕಳೆದ ವರ್ಷ ನಿಧನರಾಗಿದ್ದರಿಂದ ಅರಾರಿಯಾ ಕ್ಷೇತ್ರಕ್ಕೆ ಉಪಚುನಾವಣೆ ನಡೆದಿತ್ತು. ಆ ಕ್ಷೇತ್ರದಲ್ಲಿ ತಸ್ಲಿಮುದ್ದೀನ್ ಮಗ ಸರ್ಫಾಜ್ ಅಲಂ ಸ್ಫರ್ಧಿಸಿ ಗೆಲುವು ಸಾಧಿಸಿದ್ದರು. ವರದಿಗಳ ಪ್ರಕಾರ ಪಾಕ ಪರ ಘೋಷಣೆ ಕೂಗಿದವರು ಸರ್ಫಾಜ್ ಅಲಂ ಬೆಂಬಲಿಗರು ಎಂದು ತಿಳಿದು ಬಂದಿದೆ.

  • Share On Facebook
  • Tweet It


- Advertisement -


Trending Now
ಕಾಂಗ್ರೆಸ್ ಸರಕಾರ ಹೊಸ ಸಂಸತ್ ಭವನ ನಿರ್ಮಿಸಿದ್ದರೆ ಏನಾಗುತ್ತಿತ್ತು?
Tulunadu News May 30, 2023
ಗ್ಯಾರಂಟಿ ಇಲ್ಲದ ಸರಕಾರದಿಂದ ದ್ವೇಷದ ಆಡಳಿತ: ವೇದವ್ಯಾಸ್ ಕಾಮತ್
Tulunadu News May 29, 2023
Leave A Reply

  • Recent Posts

    • ಕಾಂಗ್ರೆಸ್ ಸರಕಾರ ಹೊಸ ಸಂಸತ್ ಭವನ ನಿರ್ಮಿಸಿದ್ದರೆ ಏನಾಗುತ್ತಿತ್ತು?
    • ಗ್ಯಾರಂಟಿ ಇಲ್ಲದ ಸರಕಾರದಿಂದ ದ್ವೇಷದ ಆಡಳಿತ: ವೇದವ್ಯಾಸ್ ಕಾಮತ್
    • ನಾವು ಬೇರೆ ಧರ್ಮದ ಯುವಕರ ಜಾಲಕ್ಕೆ ಬಲಿಯಾಗಲ್ಲ!
    • ಗೆದ್ದ ಕೂಡಲೇ ಕಾಂಗ್ರೆಸ್ಸಿಗರ ದಬ್ಬಾಳಿಕೆ ಶುರು!!
    • ಮೇ ಮಳೆ ತೆರೆದಿಟ್ಟಿತ್ತು ಹಣೆಬರಹ!
    • ಚುನಾವಣೆ ಪ್ರಜಾಪ್ರಭುತ್ವದ ಹಬ್ಬ ಬೆಟ್ಟಿಂಗ್ ನವರಿಗೆ!!
    • ಕೇರಳ ಸ್ಟೋರಿ ಮೇ ಮೇರಾ ಅಬ್ದುಲ್ಲಾ ಅಲಗ್ ಹೇ?
    • ಪ್ರಣಾಳಿಕೆಯಲ್ಲಿ ಪಾರ್ಕಿಂಗ್ ಸಮಸ್ಯೆ ಪರಿಹರಿಸಲು ಮೂರು ಸೂತ್ರ!!
    • ಫೇಕ್ ನ್ಯೂಸ್ ಜಮಾನದಲ್ಲಿ ಸಂತೋಷ್ ವಿರುದ್ಧ ಷಡ್ಯಂತ್ರ!!
    • ಕಾಶ್ಮೀರಿ ಫೈಲ್ಸ್ ಚರಿತ್ರೆ, ಕೇರಳ ಸ್ಟೋರಿ ವರ್ತಮಾನ!!
  • Popular Posts

    • 1
      ಕಾಂಗ್ರೆಸ್ ಸರಕಾರ ಹೊಸ ಸಂಸತ್ ಭವನ ನಿರ್ಮಿಸಿದ್ದರೆ ಏನಾಗುತ್ತಿತ್ತು?
    • 2
      ಗ್ಯಾರಂಟಿ ಇಲ್ಲದ ಸರಕಾರದಿಂದ ದ್ವೇಷದ ಆಡಳಿತ: ವೇದವ್ಯಾಸ್ ಕಾಮತ್
    • 3
      ನಾವು ಬೇರೆ ಧರ್ಮದ ಯುವಕರ ಜಾಲಕ್ಕೆ ಬಲಿಯಾಗಲ್ಲ!
    • 4
      ಗೆದ್ದ ಕೂಡಲೇ ಕಾಂಗ್ರೆಸ್ಸಿಗರ ದಬ್ಬಾಳಿಕೆ ಶುರು!!


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search